ಹೊಸಕೋಟೆ: ಮಹಾತ್ಮ ಗಾಂಧೀಜಿಯ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಗ್ರಾಪಂ ಸಿಬ್ಬಂದಿ ಜೊತೆ ಕೈಜೋಡಿಸಬೇಕು ಎಂದು ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್ ತಿಳಿಸಿದರು.
ಪಿಡಿಒ ರವಿಚಂದ್ರ ಮಾತನಾಡಿ, ಅನುಗೊಂಡನಹಳ್ಳಿ ಗ್ರಾಪಂ ಹೆಚ್ಚಿನ ಜನಸಂಖ್ಯೆ ಹೊಂದಿದ್ದು ಕಸ ವಿಲೇವಾರಿ ಬಹು ದೊಡ್ಡ ಸಮಸ್ಯೆಯಾಗಿತ್ತು. ಇದಕ್ಕೆ ಶಾಶ್ವತ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಕಸ ಸಂಗ್ರಹಿಸುವ ೨ ವಾಹನಗಳಿಗೆ ಇಂದು ಚಾಲನೆ ನೀಡಲಾಗಿದೆ. ಸಂಗ್ರಹವಾದ ಕಸವನ್ನು ನೇರವಾಗಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ವಿಲೇವಾರಿ ಮಾಡಲಾಗುತ್ತದೆ. ನಾಗರಿಕರು ಮನೆಗಳಲ್ಲಿಯೇ ತ್ಯಾಜ್ಯವನ್ನು ಪ್ರತ್ಯೇಕಿಸಿ ಕಸದ ವಾಹನಗಳಿಗೆ ಹಾಕಬೇಕು. ಅಂಗಡಿ, ಹೋಟೆಲ್ ಹಾಗೂ ವಾಣಿಜ್ಯ ಮಳಿಗೆಗಳ ಕಸವನ್ನು ಎಲ್ಲೆಂದರಲ್ಲಿ ಕಸ ಸುರಿದರೆ ದಂಡದ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದರು.
ಇದೇ ಸಂದರ್ಭದಲ್ಲಿ ಕಸ ಸಂಗ್ರಹಿಸುವ ಕಾರ್ಮಿಕರಿಗೆ ಸೇಫ್ಟಿ ಕಿಟ್ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.ಉಪಾಧ್ಯಕ್ಷ ರೂಮಿಯಾ ತರ್ಮೂಪ್ ಅನ್ಸರ್, ಸದಸ್ಯರಾದ ರಾಜ್ ಕುಮಾರ್, ಅಕ್ರಮ್, ವೆಂಕಟರಾಜು , ಸುಷ್ಮಾ ಪ್ರದೀಪ್, ಕಾಂಟ್ರ್ಯಾಕ್ಟರ್ ಗಿರೀಶ್ರೆಡ್ಡಿ, ಕಾರ್ಯದರ್ಶಿ ರಾಮೇಗೌಡ, ಕರ ವಸೂಲಿಗಾರ ವಿಶ್ವನಾಥ್, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಸಂತ, ಡಿಇಒ ಶರತ್ ಕುಮಾರ್ ಇತರರಿದ್ದರು.
ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಗ್ರಾಪಂ ಆವರಣದಲ್ಲಿ ಸ್ವಚ್ಛತಾ ವಾಹಿನಿ ಕಸ ಸಂಗ್ರಹ ವಾಹನಗಳಿಗೆ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್ ಚಾಲನೆ ನೀಡಿದರು. ಉಪಾಧ್ಯಕ್ಷ ರೂಮಿಯಾ ತರ್ಮೂಪ್ ಅನ್ಸರ್, ಸದಸ್ಯರಾದ ರಾಜ್ ಕುಮಾರ್, ಅಕ್ರಮ್, ಪಿಡಿಒ ರವಿಚಂದ್ರ ಇತರರಿದ್ದರು.