ಮಹಿಳೆಯರ ಸಬಲೀಕರಣ ಅಕ್ಕ ಕೆಫೆ ಉದ್ದೇಶ: ಶಾಸಕ ಹಂಪನಗೌಡ ಬಾದರ್ಲಿ

KannadaprabhaNewsNetwork |  
Published : Jun 28, 2026, 02:30 AM IST
 | Kannada Prabha

ಸಾರಾಂಶ

ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು ಅಕ್ಕ ಕೆಫೆಯ ಮೂಲ ಉದ್ದೇಶವಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು ಅಕ್ಕ ಕೆಫೆಯ ಮೂಲ ಉದ್ದೇಶವಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಅಡಿಯಲ್ಲಿ ಸಿಂಧನೂರು ನಗರದ ಬಸ್ ನಿಲ್ದಾಣದ ಎದುರುಗಡೆ ನಿರ್ಮಿಸಿರುವ ಅಕ್ಕ ಕೆಫೆ ಹಾಗೂ ಸಂಜೀವಿನಿ ಇ-ಮಾರ್ಟ್ ಮಳಿಗೆಯನ್ನು ಶನಿವಾರ ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರ್ಕಾರದ ಶೇ.60 ಮತ್ತು ರಾಜ್ಯ ಸರ್ಕಾರದ ಶೇ.40ರಷ್ಟು ಅನುದಾನದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಅಕ್ಕ ಕೆಫೆ ಆರಂಭಿಸಲಾಗಿದೆ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಉಪಹಾರ, ಊಟ, ಸ್ನ್ಯಾಕ್ಸ್, ಜ್ಯೂಸ್ ದೊರೆಯುತ್ತವೆ. ಸಾರ್ವಜನಿಕರಿಗೆ ಹೊರೆಯಾಗದಂತೆ ದರವನ್ನು ನಿಗದಿ ಪಡಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ವಿಶೇಷ ಅನುದಾನ ರು.16 ಲಕ್ಷದಲ್ಲಿ ಈ ಮಳಿಗೆಯ ಕಟ್ಟಡವನ್ನು ನಿರ್ಮಿಸಲಾಗಿದೆ. ರು.15 ಲಕ್ಷ ಅನುದಾನವನ್ನು ಇಂಟೀರಿಯಲ್ ಡಿಸೈನ್, ವಿದ್ಯುತ್, ಫರ್ನಿಚರ್, ಚೇರ್, ಟೇಬಲ್, ಸುಣ್ಣ-ಬಣ್ಣ ಬಳಿಯಲು ಖರ್ಚು ಮಾಡಿದ್ದಾರೆ. ಅಡುಗೆ ಸಾಮಗ್ರಿ, ಪ್ಲೇಟ್, ಗ್ಲಾಸ್ ಮತ್ತಿತರ ವಸ್ತುಗಳನ್ನು ಸ್ವಸಹಾಯ ಸಂಘದಿಂದ ಖರೀದಿಸಿದ್ದಾರೆ. ಆರ್.ಎಚ್.ನಂ.1 ಕ್ಯಾಂಪಿನ ಜ್ಞಾನ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ಅಧೀನಕ್ಕೆ ಒಳಪಡುವ ದೇವಿ ಸ್ತ್ರೀಶಕ್ತಿ ಸ್ವಸಹಾಯ ಸಂಘ ಅಕ್ಕ ಕೆಫೆ ನಿರ್ವಹಣೆ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ವಿವರಿಸಿದರು.

ಅಕ್ಕ ಕೆಫೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಮತ್ತು ಜ್ಯೋತಿ ಸ್ತ್ರೀಶಕ್ತಿ ಸ್ವಸಹಾಯ ಸಂಘ ಉಮಲೂಟಿ ಸಂಯುಕ್ತಾಶ್ರಯದಲ್ಲಿ ಸಂಜೀವಿನಿ ಇ-ಮಾರ್ಟ್ ಕೇಂದ್ರ ಉದ್ಘಾಟಿಸಲಾಗಿದೆ. ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿರುವ 30 ಸ್ವಸಹಾಯ ಗ್ರಾಮ ಪಂಚಾಯಿತಿಗಳ ಒಕ್ಕೂಟಗಳು ತಯಾರಿಸಲ್ಪಟ್ಟ ಉತ್ಪನ್ನಗಳನ್ನು ಇದರಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕಾಂಗ್ರೆಸ್ ಹಿರಿಯ ಮುಖಂಡ ಎಂ.ಕಾಳಿಂಗಪ್ಪ ವಕೀಲ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಂಪನಗೌಡ ಬಾದರ್ಲಿ, ಸೋಮನಗೌಡ ಬಾದರ್ಲಿ, ಜಿಪಂ ಅಭಿವೃದ್ಧಿ ಅಧಿಕಾರಿ ಶರಣಬಸವರಾಜ ಕೆಸರಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸ್ತ್ರೀಶಕ್ತಿ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ತಾ.ಪಂ ಸಹಾಯಕ ನಿರ್ದೇಶಕ ಯಂಕಪ್ಪ, ಕಾರ್ಯಕ್ರಮ ಅಧಿಕಾರಿ ರಜಬ್, ನಿರ್ಮಿತಿ ಕೇಂದ್ರದ ಕಿರಿಯ ಎಂಜನಿಯರ್ ತೇಜಾ, ಎನ್‍ಎಲ್‍ಆರ್‌ಎಂ ಅನಿಲ, ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಗೌರಮ್ಮ, ಉಪಾಧ್ಯಕ್ಷೆ ಶಿವಲಿಂಗಮ್ಮ, ನಿರ್ದೇಶಕರಾದ ಕೌಶಲ್ಯ, ರೇಣುಕಮ್ಮ, ವೀಣಾ, ಅಕ್ಕ ಕೆಫೆ ಪ್ರತಿನಿಧಿಗಳಾದ ಸುನೀತಾ, ಸುಮತಿ, ಶ್ರೀದೇವಿ, ಶರಣಮ್ಮ, ಲಕ್ಷ್ಮಿ, ಅನಂತಲಕ್ಷ್ಮಿ, ಉಮಲೂಟಿ ಜ್ಯೋತಿ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಬೇಗಮ್‍ ಬೀ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡೂರಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ: ಶಾಸಕ ಕೆ.ಎಸ್. ಆನಂದ್
ನಾಡಪ್ರಭುವಿಗೆ ನಮಿಸಿದ ಮುಖ್ಯಮಂತ್ರಿ ಡಿಕೆಶಿ