ಕೊಪ್ಪಳ:
ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟ ಗ್ರಾಮದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನವನ್ನು ಗ್ರಾಮದ ಪ್ರತಿಯೊಂದು ಮನೆಗೂ ತಲುಪಿಸುವುದು ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವುಗಳನ್ನು ಗುಣಾತ್ಮಕವಾಗಿ ವಿಲೇವಾರಿ ಮಾಡಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಇಲಾಖೆಯನ್ನು ಪ್ರತ್ಯೇಕವಾಗಿ ರಚಿಸಿರುವುದು ಈ ಆಂದೋಲನದ ವಿಶೇಷತೆಯಾಗಿದೆ ಎಂದು ತಿಳಿಸಿದರು.ಗ್ರಾಮಕ್ಕೆ ಆಗಮಿಸಿದ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ್ ಅವರು ಗ್ರಾಮದ ಆರಾಧ್ಯ ದೇವರಾದ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಫಲಾನುಭವಿಗಳಿಗೆ ಸವಲತ್ತು ವಿತರಣೆ:
ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಸಹಾಯಕ ಆಯುಕ್ತ ಮೆಹೆಬೂಬ್ ಜಿಲಾನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಪಂ ಯೋಜನಾ ನಿರ್ದೇಶಕ ಶಾಮಸುಂದರ ಕಾಂಬ್ಳೆ, ಜಂಟಿ ಕೃಷಿ ನಿರ್ದೇಶಕ ಜಿ.ಡಿ. ಕೃಷ್ಣಮೂರ್ತಿ, ತೋಟಗಾರಿಕೆ ಜಂಟಿ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಸವಡಿ, ತಹಸೀಲ್ದಾರ್ ಪ್ರಕಾಶ ನಾಸಿ, ತಾಪಂ ಇಒ ನೀಲಗಂಗಾ ಬಬಲಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.