ಬೇಸಿಗೆ ಶಿಬಿರಗಳ ಉದ್ದೇಶ ಮಕ್ಕಳ ಪ್ರತಿಭೆ ಅನಾವರಣ

KannadaprabhaNewsNetwork |  
Published : May 11, 2026, 02:00 AM IST
ಫೋಟೋ 9ಎಚ್.ಎಲ್.ಐ1 ಹೊನ್ನಾ್ಳಿ ತಾಲೂಕಿನ ಹಿರೇಗೋಣಿಗೆೆಯ ಗ್ರಾಮಪಂಚಾಯಿತಿ ಕಚೇರಿ ಅವರಣದಲ್ಲಿ ಪ್ರಾಥಮಿಕ ಶಾಲಾ ಬಡ ಮಕ್ಕಳ ಬೇಸಿಗೆ ಶಿಬಿರ ನಡೆಯುತ್ತಿದ್ದು ಮಕ್ಕಳಿಗೆ ವಿವಿಧ ರೀತಿಯ ತರಬೇತಿಗಳನ್ನು ನೀಡುತ್ತಿರುವುದು.   | Kannada Prabha

ಸಾರಾಂಶ

ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಗ್ರಾಪಂ ಗ್ರಂಥಾಲಯ ಹಾಗೂ ಗ್ರಾಮೀಣ ಮಾಹಿತಿ ಕೇಂದ್ರ ಆಶ್ರಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತವಾಗಿ ಏ.29ರಿಂದ ಮೇ 15ರವರೆಗೆ ಒಟ್ಟು 17 ದಿನಗಳ ಕಾಲ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ ಎಂದು ಗ್ರಾಮೀಣ ಗ್ರಂಥಾಲಯದ ಗ್ರಂಥಪಾಲಕ ವೈ.ಸುರೇಶ್ ತಿಳಿಸಿದರು.

- ಹಿರೇಗೊಣಿಗೆರೆಯಲ್ಲಿ ಗ್ರಾಮೀಣ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ವೈ.ಸುರೇಶ್‌

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಗ್ರಾಪಂ ಗ್ರಂಥಾಲಯ ಹಾಗೂ ಗ್ರಾಮೀಣ ಮಾಹಿತಿ ಕೇಂದ್ರ ಆಶ್ರಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತವಾಗಿ ಏ.29ರಿಂದ ಮೇ 15ರವರೆಗೆ ಒಟ್ಟು 17 ದಿನಗಳ ಕಾಲ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ ಎಂದು ಗ್ರಾಮೀಣ ಗ್ರಂಥಾಲಯದ ಗ್ರಂಥಪಾಲಕ ವೈ.ಸುರೇಶ್ ತಿಳಿಸಿದರು.

ಶನಿವಾರ ಗ್ರಾಮೀಣ ಮಕ್ಕಳ 11ನೇ ದಿನದ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಗರ ಪ್ರದೇಶಗಳಲ್ಲಿ ಸಾವಿರಾರು ರು. ಶುಲ್ಕ ಪಡೆದು ಇಂತಹ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತದೆ. ಆದರೆ, ಹಿರೇಗೋಣಿಗೆರೆಯಲ್ಲಿ ಉಚಿತವಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಬಡಮಕ್ಕಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಕಚೇರಿ ಅವರಣದಲ್ಲಿ ಬೇಸಿಗೆ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ 50ಕ್ಕೂ ಹೆಚ್ಚು ಮಕ್ಕಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಪತಿದಿನವೂ ತಪ್ಪದೇ ಶಿಬಿರಕ್ಕೆ ಹಾಜರಾಗಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ ಎಂದರು.

ಈ ಶಿಬಿರದಲ್ಲಿ ಚಿತ್ರಕಲೆ, ಪೇಪರ್ ಕ್ರಾಫ್ಟ್‌, ಪ್ರಬಂಧ, ಭಾಷಣ ಹಾಡು, ನೃತ್ಯ, ಸಾಮಾನ್ಯ ಜ್ಞಾನ, ಪರೀಕ್ಷೆಗಳನ್ನು ಎದುರಿಸುವ ವಿಧಾನ, ವಿವಿಧ ಆಟೋಟಗಳು, ಕಲೆ, ಸಾಹಿತ್ಯ ಪರಿಚಯ ಈ ರೀತಿ ಗ್ರಾಮೀಣ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಆಟ-ಪಾಠಗಳ ಮೂಲಕ ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣೆಗೊಳಿಸಿ, ಇಂದಿನ ಸ್ಪರ್ಧಾತ್ಮಕ ಪರಿಸ್ಥಿತಿಗೆ ತಯಾರು ಮಾಡುವುದು ಶಿಬಿರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಶಿಬಿರಕ್ಕೆ ಪ್ರತಿದಿನ ವಿವಿಧ ಕ್ಷೇತ್ರಗಳಲ್ಲಿನ ಸಂಪನ್ಮೂನ ವ್ಯಕ್ತಿಗಳನ್ನು ಕರೆಯಿಸಿ, ಆ ಕ್ಷೇತ್ರಗಳ ಬಗ್ಗೆ ಅವರಿಗೆ ಮಾಹಿತಿ ಕೊಡಿಸಲಾಗುತ್ತಿದೆ. ಪಶುವೈದ್ಯ ಇಲಾಖೆ, ನೀರಾವರಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಕೃಷಿ ಇಲಾಖೆ ಈ ರೀತಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಂಪನ್ಮೂಲ ವ್ಯಕ್ತಿಯಾಗಿ ಕರೆಯಿಸಿ, ಮಕ್ಕಳಿಗೆ ಮಾಹಿತಿ ಕೊಡಿಸಲಾಗುತ್ತಿದೆ. ಇದರ ಜೊತೆಗೆ ಪಕ್ಷಿಗಳು, ಪರಿಸರ ವೀಕ್ಷಣೆ ಮೂಲಕ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿದಿನ ಪ್ರಾಥಮಿಕ ಶಾಲಾ ಶಿಕ್ಷಕರಾದ ಕೃಷ್ಣಮೂರ್ತಿ, ಪ್ರಕಾಶ್ ಮುಂತಾದವರು ಶಿಬಿರಕ್ಕೆ ಕರೆಯಿಸಿ ಪಠ್ಯ ವಿಷಯಗಳ ಬಗ್ಗೆ ಕೂಡ ಮಾಹಿತಿಗಳನ್ನು ಕೊಡಿಸಲಾಗುತ್ತಿದೆ ಎಂದರು.

ಗಾಮೀಣ ಮಕ್ಕಳ ಬೇಸಿಗೆ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಗ್ರಾಮೀಣ ಜನತೆ, ಪೋಷಕರ ಮೆಚ್ಚುಗೆ ಪಡೆಯುತ್ತಿದೆ. ಏ.29ರಂದು ಗ್ರಾ.ಪಂ. ಕಾರ್ಯದರ್ಶಿ ರಾಜೇಂದ್ರ ಅವರಿಂದ ಚಾಲನೆಗೊಂಡ ಈ ಬೇಸಿಗೆ ಶಿಬಿರ ಮೇ 15ರಂದು ಸಮಾರೋಪ ಕಾಣಲಿದೆ. ಅಂದು ಗ್ರಾಪಂ ಪಿಡಿಒ ಅರುಣ್, ಅಡಳಿತಾಧಿಕಾರಿ ಶಂಕರಪ್ಪ ಹಾರೋಗೋಪ್ಪದ, ಕಂಪ್ಯೂಟರ್ ನಿರ್ವಾಹಕ ಪಾಂಡುರಂಗ, ಕರ ವಸೂಲಿಗಾರ ವೆಂಕಟೇಶ್, ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

- - -

-9ಎಚ್.ಎಲ್.ಐ1:

ಹಿರೇಗೋಣಿಗೆರೆಯ ಗ್ರಾಪಂ ಕಚೇರಿ ಆವರಣದಲ್ಲಿ ಪ್ರಾಥಮಿಕ ಶಾಲಾ ಬಡಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳು ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶದ ತಂತ್ರಜ್ಞಾನ ಕ್ಷೇತ್ರಕ್ಕೆ ಇಂಜಿನಿಯರ್, ವಿಜ್ಞಾನಿಗಳ ಕೊಡುಗೆ ಅಪಾರ: ಡಾ.ನೀರಜ್ ಕುಮಾರ್
ಮದರಸಗಳ ಆಧುನೀಕರಣಕ್ಕೆ ಕ್ರಮ ವಹಿಸಿ: ಡಿಸಿ