ರಾಮನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಅಮೃತ ಸರೋವರಗಳ ದಂಡೆಯ ಮೇಲೆ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಲಾಯಿತು.
ಭಾರತ ಸಂವಿಧಾನ ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಅಧಿಕಾರದ ಪ್ರತ್ಯೇಕತೆ ನಮ್ಮ ಮೂಲಭೂತ ಕರ್ತವ್ಯ ಮತ್ತು ಹಕ್ಕುಗಳನ್ನು ಪರಿಣಾಮಕಾರಿಯಾಗಿ ಚಲಾಯಿಸಲು ಅನುವು ಮಾಡಿಕೊಟ್ಟಿದೆ. ನಮ್ಮ ಸಂವಿಧಾನದಿಂದಾಗಿ ನಮ್ಮ ದೇಶ ವಿಶಿಷ್ಟವಾಗಿದೆ. ಬಡವರು, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ, ಸರ್ವರಿಗೂ ಸಂವಿಧಾನದಲ್ಲಿ ಸಮಾನ ಹಕ್ಕು ಕಲ್ಪಿಸುವುದು ಉದ್ದೇಶವಾಗಿದೆ ಎಂದು ಹೇಳಿದರು.
ಗೌರವಯುತವಾಗಿ ಮತ್ತು ಮೌಲ್ಯಯುತವಾಗಿ ಬದುಕಲು ಸಂವಿಧಾನ ನಮಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಸಂವಿಧಾನವೂ ನಮಗೆ ವಿವಿಧತೆಯಲ್ಲಿ ಏಕತೆಯನ್ನು ಕಲಿಸಿದೆ. ಸಂವಿಧಾನ ಆಶಯಗಳನ್ನು ಈಡೇರಿಸುವ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಮಂಜುನಾಥಸ್ವಾಮಿ ತಿಳಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನ ಸಮುದಾಯಕ್ಕೆ ಜಲ ಮೂಲಗಳ ರಕ್ಷಣೆ, ಪರಿಸರ ರಕ್ಷಣೆ ಬಗ್ಗೆ ಮಾಹಿತಿ ನೀಡಲಾಯಿತು. ಈ ಮಹತ್ವದ ದಿನದ ಸ್ಮರಣಾರ್ಥ, ಅಮೃತ ಸರೋವರ ಬಳಕೆದಾರರ ಗುಂಪುಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಮುದಾಯದ ಜನರು, ಶಾಲಾ ಮಕ್ಕಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಭೂತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನೀತಾ ನಾಗರಾಜ್ ಸಿಂಗ್, ಎಡಿಪಿಸಿ ಜಗದೀಪ್ ಹಾಗೂ ಜಿಲ್ಲಾ ಸಂಯೋಜಕರು ಅರುಣ್ ಕುಮಾರ್, ತಾಲೂಕು ಮಟ್ಟದ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.26ಕೆಆರ್ ಎಂಎನ್ 6.ಜೆಪಿಜಿ
ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮ ಪಂಚಾಯಿತಿಯ ಜಾನಪದ ಲೋಕದಲ್ಲಿ ನಿರ್ಮಿಸಿರುವ ಅಮೃತ ಸರೋವರದ ಬಳಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ಮಂಜುನಾಥಸ್ವಾಮಿ ಹಾಗೂ ವಿಭೂತಿಕೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸುನೀತಾ ನಾಗರಾಜ್ ಸಿಂಗ್ ಅವರು ಸಂವಿಧಾನದ ಪೀಠಿಕೆ ಓದಿದರು.