ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗ್ಯಾಲರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಬಿವಿವಿ ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ 2023-2026ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ 114 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ವಿಶೇಷ ಸಾರ್ವಜನಿಕ ನಿವೃತ್ತ ಅಭಿಯೋಜಕ ಕೆ.ಜಿ.ಪುರಾಣಿಕಮಠ ಮಾತನಾಡಿ, ಕಾನೂನು ವೃತ್ತಿಯಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆ ಅತ್ಯಂತ ಮುಖ್ಯವಾಗಿದ್ದು, ಸಮಾಜದ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಪದವೀಧರರಿಗೆ ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮಾತನಾಡಿ, ಗುಣಮಟ್ಟದ ಕಾನೂನು ಶಿಕ್ಷಣದ ಮೂಲಕ ಸಮಾಜಮುಖಿ ವಕೀಲರನ್ನು ರೂಪಿಸುವ ಕಾರ್ಯವನ್ನು ಸಂಘ ನಿರಂತರವಾಗಿ ನಡೆಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ವಿವಿಧ ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರು, ಪ್ರಾಧ್ಯಾಪಕರು, ಪಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾನೂನು ಆಳಕ್ಕೆ ಇಳದಷ್ಟು ಅದು ಸರಳವಾಗುತ್ತದೆ. ಕಾನೂನು ಪದವಿದರಿಗೆ ಸಾಕಷ್ಟು ಅವಕಾಶಗಳಿವೆ. ವಕೀಲ ವೃತ್ತಿಯಲ್ಲಿ ಹೆಸರಿನ ಜತೆ ಆದಾಯವು ಸಹ ಬರುತ್ತದೆ. ಆದರೆ, ನಾವು ಪ್ರಾಮಾಣಿಕವಾಗಿ ಜನರಿಗೆ ನ್ಯಾಯ ಒದಗಿಸುವ ಮೂಲಕ ಸಮಾಜದಲ್ಲಿ ಮಾದರಿಯಾಗಬೇಕು.