ಕನ್ನಡಪ್ರಭ ವಾರ್ತೆ ಶೃಂಗೇರಿ
ಶೃಂಗೇರಿ ಲಯನ್ಸ್ ಸಂಸ್ಥೆಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುಮಾರು 50 ರಾಷ್ಟ್ರಗಳಲ್ಲಿ ಶಾಖೆಗಳನ್ನು ಹೊಂದಿರುವ ಲಯನ್ಸ್ ಸಂಸ್ಥೆ ಸುಮಾರು 14 ಲಕ್ಷಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ. ಭೂಕಂಪ, ನೆರೆ ಪ್ರವಾಹ,ಕ್ಷಾಮ,ಬರಗಾಲ ಸಂದರ್ಭದಲ್ಲಿ ಎಲ್ಲರಿಗಿಂತ ಮೊದಲುಲಯನ್ಸ್ ಸಂಸ್ಥೆ ದೇಣಿಗೆ ನೆರವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತದೆ. ಇದು ಮಾನವ ಕುಲಕ್ಕೆ ಸೇವೆ ಸಲ್ಲಿಸುವ ಸಂಸ್ಥೆಯಾಗಿದೆ ಎಂದರು.
ಅಮೆರಿಕದ ಚಿಕಾಗೋ ನಗರದಲ್ಲಿ ಹುಟ್ಟಿಕೊಂಡ ಈ ಸಂಸ್ಥೆ 107 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಸಂಸ್ಥೆ ಇಂದು ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ.ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳ ಮೂಲಕ ಜೀವ ಉಳಿಸುವ ಕೆಲಸ ಮಾಡುತ್ತದೆ.ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಶುಶ್ರೂಸೆ ಕೇಂದ್ರಗಳನ್ನು ಆರಂಬಿಸಿದೆ. ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು.ಶೃಂಗೇರಿ ಲಯನ್ಸ್ ಘಟಕದ ಅಧ್ಯಕ್ಷ ಧರ್ಮಪ್ಪ ಹೆಗ್ಡೆ ಮಾತನಾಡಿ ತಾಲೂಕಿನಲ್ಲಿ ಪ್ರಸ್ತ ವರ್ಷ ಸಂಸ್ಥೆಯು ಅನೇಕಕಾರ್ಯಕ್ರಮಗಳನ್ನು ಆಯೋಜಿಸಿ ರೂಪಿಸಿದೆ.ಆರೋಗ್ಯ ಶಿಬಿರ,ರಕ್ತದಾನ ಶಿಬಿರ,ಕಾನೂನು ಪರಿಸರ ಹೀಗೆ ಅನೇಕ ಕಾರ್ಯಕ್ರಮಗಳನ್ನುಆಯೋಜಿಸಿದೆ.ಪ್ರತಿಭಾ ಪುರಸ್ಕಾರ,ವನಮಹೋತ್ಸವ,4 ಶಾಲೆಗಳ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ,ಉಚಿತ ವೈದ್ಯಕೀಯ ಶಿಬಿರ,ಉಚಿತ ನೇತ್ರ ತಪಾಸಣಾ ಶಿಬಿರ,ರೋಗಿಗಳಿಗೆ ಧನ ಸಹಾಯ,ಜೇನು ಸಾಕಾಣಿಕೆ ಮಾಹಿತಿ,ಬಿದಿರು ಬೆಳೆ ಬಗ್ಗೆ ಮಾಹಿತಿ ಹೀಗೆ ಅನೇಕ ಕಾರ್ಯಕ್ರಮ ಆಯೋಜಿಸಿದೆ ಎಂದರು.