ರಂಗಭೂಮಿ ಕಲೆ ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ

KannadaprabhaNewsNetwork |  
Published : Jun 30, 2025, 12:34 AM IST
ಪೋಟೊ29ಕೆಎಸಟಿ2: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಬುದ್ಧವಿಹಾರದಲ್ಲಿ ಉಚಿತ ರಂಗ ತರಬೇತಿ ಶಿಬಿರದ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಯುವಕರು ನಾಟಕ ಮತ್ತು ರಂಗ ತರಬೇತಿ ಶಿಬಿರಗಳಲ್ಲಿ ತರಬೇತಿ ಪಡೆಯಲು ಮುಂದಾಗಬೇಕು

ಕುಷ್ಟಗಿ: ಯುವಕರು ಟಿವಿ, ಮೊಬೈಲ್, ಸಿನಿಮಾಗಳಿಗೆ ಹೆಚ್ಚಿನ ಒಲವು ತೋರಿಸುತ್ತಿರುವುದರಿಂದ ನಾಟಕ ಹಾಗೂ ರಂಗಭೂಮಿ ಕಲೆಗಳು ನಶಿಸಿ ಹೋಗುತ್ತಿವೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಚಾಂದಪಾಷ ಕಿಲ್ಲೇದಾರ ಹೇಳಿದರು.

ತಾಲೂಕಿನ ತಾವರಗೇರಾ ಪಟ್ಟಣದ ಬುದ್ಧ ವಿಹಾರದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ರಂಗಧಾರ ರೆಪರ್ಟರಿ ಕೊಪ್ಪಳ ಸಹಯೋಗದಲ್ಲಿ ನಡೆದ ಉಚಿತ ರಂಗ ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯುವಕರು ನಾಟಕ ಮತ್ತು ರಂಗ ತರಬೇತಿ ಶಿಬಿರಗಳಲ್ಲಿ ತರಬೇತಿ ಪಡೆಯಲು ಮುಂದಾಗಬೇಕು, ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ನಾಟಕಗಳಲ್ಲಿ ಅಭಿನಯಿಸಿ ರಂಗಭೂಮಿ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ, ಆದ್ದರಿಂದ ಯುವಕರು ಈ ಕಾರ್ಯಕ್ಕೆ ಮುಂದಾಗಬೇಕು ಎಂದು ಹೇಳಿದರು.

ಪ್ರಾಧ್ಯಾಪಕ ಡಾ. ಸುಭಾಸ ಪೋರೆ ಮಾತನಾಡಿ, ಪಿಯುಸಿ ಪಠ್ಯ ಪುಸ್ತಕಗಳಲ್ಲಿರುವ ವಿಷಯಾಧರಿತ ಹಾಗೂ ಇಂದಿನ ಸಮಾಜಕ್ಕೆ ಬೇಕಾಗಿರುವ ಸಂಪನ್ಮೂಲ ವಿಷಯಗಳಿಗೆ ಅನುಗುಣವಾಗಿ ಈ ರಂಗ ಶಿಬಿರದಲ್ಲಿ ತರಬೇತಿ ಪಡೆಯುತ್ತಿರುವ ವಿವಿಧ ಜಿಲ್ಲೆಗಳಿಂದ ಬಂದಿರುವ ಶಿಬಿರಾರ್ಥಿಗಳು ತರಬೇತಿ ಪಡೆಯುವದು ನಿಮ್ಮ ಜೀವನದ ಅತ್ಯಮೂಲ್ಯ ಘಟ್ಟವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂ.ಡಿ.ರಫಿ. ರಾಮಣ್ಣ, ಬೆಟ್ಟಪ್ಪ ಯತ್ನಟ್ಟಿ. ಇದ್ದರು. ಪ್ರಾಸ್ತಾವಿಕವಾಗಿ ರಂಗಧಾರ ರೆಪರ್ಟರಿಯ ಅಧ್ಯಕ್ಷ ಶರಣು ಶೆಟ್ಟರ ಮಾತನಾಡಿದರು. ತರಬೇತಿಗಾರ ಲಕ್ಷ್ಮಣ ಪೀರಗಾರ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ