ಹಾನಗಲ್ಲ: ಸಮಾಜದಲ್ಲಿ ಸೌಹಾರ್ದತೆ, ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆಶಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಒತ್ತು ನೀಡಿ ಕಾರ್ಯ ನಿರ್ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಸಂತೋಷ ದುಂಡಣ್ಣನವರ ಮಾತನಾಡಿ, ಪಕ್ಷ ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳೋಣ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಶ್ರಮಿಸಲಾಗುವುದು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪಕ್ಷದ ವಿಚಾರ ಧಾರೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಕೆಲಸ ಮಾಡಲು ಸಂಕಲ್ಪಿಸೋಣ ಎಂದರು.
ಇದೇ ಸಂದರ್ಭದಲ್ಲಿ ಹಾನಗಲ್ಲ ಬ್ಲಾಕ್ ಅಧ್ಯಕ್ಷ ಅಬ್ದುಲ್ರಹೀಮ್ ಹಾಳೂರ, ಅಕ್ಕಿಆಲೂರು ಬ್ಲಾಕ್ ಅಧ್ಯಕ್ಷ ಅರುಣ ಮಣ್ಣಮ್ಮನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ ಬಾಗಸರ, ಇರ್ಫಾನ್ ಮಿಠಾಯಿಗಾರ, ಕಾರ್ಯದರ್ಶಿಗಳಾದ ದ್ಯಾಮಣ್ಣ ಲಮಾಣಿ, ಪ್ರಭು ಬೊಮ್ಮಣ್ಣನವರ, ಶಿವರಾಜ ಹಿರೋಜಿ ಅವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು.ಪದಾಧಿಕಾರಿಗಳಾದ ಪ್ರವೀಣ ಹಿರೇಮಠ, ಇರ್ಫಾನ್ ಇನಾಂದಾರ, ಖಾಲಿದ್ ಶೇಷಗಿರಿ, ಶಶಿಧರ ಭೈರಕ್ಕನವರ, ಲೋಹಿತ್ ಕಾಟಣ್ಣನವರ, ಅಮನ್, ಮುಸ್ತಫಾ, ಖಾದರ, ಹನುಮಂತ, ಅಲ್ತಾಫ್, ಶಾನು ಶಿರಹಟ್ಟಿ ಇದ್ದರು.