ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸುವ ಜವಬ್ದಾರಿ ಹೆಚ್ಚಿದೆ

KannadaprabhaNewsNetwork |  
Published : Dec 30, 2024, 01:04 AM IST
ಪೊಟೋ: 29ಎಸ್‌ಎಂಜಿಕೆಪಿ08ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆಯಾದ ಸಿ.ಎಸ್.ಷಡಾಕ್ಷರಿ ಮಾತನಾಡಿದರು. | Kannada Prabha

ಸಾರಾಂಶ

The responsibility to fulfill the promises in the manifesto has increased.

-ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆಯಾದ ಷಡಾಕ್ಷರಿ ಹೇಳಿಕೆ । ಇನ್ನಷ್ಟು ರಚನಾತ್ಮಕ ಕೆಲಸ ಮಾಡುವ ಭರವಸೆ

-----

ಕನ್ನಡಪ್ರಭ ವಾರ್ತೆ ಶಿವಮೊಗ್ಗರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷನಾಗಿ ಮತ್ತೊಮ್ಮೆ ಸರ್ಕಾರಿ ನೌಕರರು ಅವಕಾಶ ನೀಡಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಿದೆ. ಮುಂದಿನ ದಿನದಲ್ಲಿ ಇನ್ನೂ ರಚನಾತ್ಮಕ ಕೆಲಸ ಮಾಡುತ್ತೇನೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆಯಾದ ಸಿ.ಎಸ್.ಷಡಾಕ್ಷರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣೆಯಲ್ಲಿ ಸಾಕಷ್ಟು ಸವಾಲು ಎದುರಾಗಿದ್ದವು. 5ವರ್ಷ ನಿರಂತರ ಸಂಘಟನೆ ಮಾಡಿದ್ದೇನೆ. ಈ ಬಾರಿ ನಿರೀಕ್ಷೆಯಷ್ಟು ಮತಗಳು ಬರದೇ ಇದ್ದರೂ ಅಂಕಿಸಂಖ್ಯೆಯಲ್ಲಿ ಗೆದ್ದಿದ್ದೇನೆ. ಸತ್ಯ, ನ್ಯಾಯ, ಸೇವೆ, ಸಂಘಟನೆ ಕಾರಣಕ್ಕೆ ಸರ್ಕಾರಿ ನೌಕರರು 2ನೇ ಬಾರಿಗೆ ನನಗೆ ಆಶೀರ್ವಾದ ಮಾಡಿದ್ದಾರೆ ಎಂದರು.

ಚುನಾವಣೆಯಲ್ಲಿ ಗೆಲುವು ಪಡೆದ ಬಳಿಕ ನನ್ನ ಜವಾಬ್ದಾರಿ ಹೆಚ್ಚಿದೆ. ಪ್ರಣಾಳಿಕೆಯಲ್ಲಿ ಹೇಳಿದ ಭರವಸೆ ಈಡೇರಿಸುವ ಜವಬ್ದಾರಿ ನನ್ನ ಮೇಲಿದೆ. ಅಲ್ಲದೆ, 2025ಅನ್ನು ಎನ್‌ಪಿಎಸ್‌ನಿಂದ ಒಪಿಎಸ್ ಮಾಡುವ ವರ್ಷ ಎಂದೇ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ನೌಕರರ ಒತ್ತಾಯವೂ ಇದೇ ಆಗಿದೆ. ಈಗಗಾಗಲೇ 5 ರಾಜ್ಯಗಳಲ್ಲಿ ಎನ್‌ಪಿಎಸ್, ಒಪಿಎಸ್ ಮಾಡಲಾಗಿದೆ. 6ನೇ ರಾಜ್ಯವಾಗಿ ಕರ್ನಾಟಕದಲ್ಲೂ ಜಾರಿಯಾಗಲಿದೆ. ಸರ್ಕಾರ ಈಗಾಗಲೇ ಸಮಿತಿ ರಚನೆ ಮಾಡಿದೆ. ಸರ್ಕಾರದ ಜತೆ ಮಾತುಕತೆ ಮೂಲಕ ಇದನ್ನು ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಸರ್ಕಾರದ ಏಳನೇ ವೇತನ ಆಯೋಗ ಜಾರಿ ಮಾಡಲು, ಜನವರಿಯಿಂದಲೇ ಸರ್ಕಾರಿ ನೌಕರರ ಆರೋಗ್ಯ ವಿಮೆಯನ್ನು ಜಾರಿ ಮಾಡಲು ಸಿಎಂ, ಡಿಸಿಎಂ ಜತೆ ಮಾತುಕತೆ ನಡೆಸಲಾಗುವುದು. ಜನವರಿಯಿಂದಲೇ ಆರೋಗ್ಯ ವಿಮೆ ಜಾರಿಗೆ ಬರುವ ವಿಶ್ವಾಸ ಇದೆ ಎಂದರು.

ನೂತನ ಕಟ್ಟಡ ನಿರ್ಮಾಣ: ಸರ್ಕಾರಿ ನೌಕರರು ಬೆಂಗಳೂರಿಗೆ ಬಂದರೆ ಉಳಿಯಲು ಸರಿಯಾದ ವ್ಯವಸ್ಥೆ ಇಲ್ಲ. ಈಗಿರುವ ರೂಂ ಸಾಕಾಗುತ್ತಿಲ್ಲ. ಅದಕ್ಕಾಗಿ 150 ಕೋಟಿ ವೆಚ್ಚದಲ್ಲಿ 250 ಕೊಠಡಿಗಳಿರುವ ಕಟ್ಟಡ ಕಟ್ಟಲು ತೀರ್ಮಾನಿಸಲಾಗಿದೆ. ಕೇವಲ 100 ಕೊಠಡಿ ಕೋಣೆಗೆ ನೀಡುವ ಯೋಜನೆ ಸಂಘದ ಮುಂದೆ ಇದೆ. ಎಲ್ಲ ಜಿಲ್ಲೆಗಳಲ್ಲೂ ಆಡಿಟೋರಿಯಂ, ರೆಸ್ಟೋರೆಂಟ್, ವಿಶ್ರಾಂತಿ ಕೊಠಡಿ , ಬೋರ್ಡ್ ರೂಂ, ಸಮುದಾಯ ಭವನ ಇರುವ ಕಟ್ಟಡಗಳನ್ನು ಕಟ್ಟಲು ಚಿಂತನೆ ನಡೆದಿದೆ. ಮುಂದಿನ ದಿನಗಳಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

.....ಬಾಕ್ಸ್‌......

ಟೀಕೆ ಟಿಪ್ಪಣಿಗೆ ತಲೆಕೆಡಿಸಿಕೊಳ್ಳಲ್ಲ: ಸಿ.ಎಸ್.ಷಡಾಕ್ಷರಿ

ನನ್ನ ಗೆಲುವು ಸತ್ಯ, ನ್ಯಾಯ, ಸೇವೆ, ಸಂಘಟನೆಗೆ ಸಿಕ್ಕ ಜಯ. ಕಳೆದ 3 ತಿಂಗಳಿನಿಂದ ಯಾವುದೇ ಜನಪ್ರತಿನಿಧಿಗಳನ್ನು ಭೇಟಿ ಮಾಡಿಲ್ಲ, ಫೋನ್ ಮಾಡಿ ಮಾತನಾಡಿಲ್ಲ. ನನ್ನ ಮೇಲಿನ ಎಲ್ಲ ಟೀಕೆಗಳಿಗೂ ಮತದಾರರು ಉತ್ತರ ಕೊಟ್ಟಿದ್ದಾರೆ. ಟೀಕೆ ಟಿಪ್ಪಣಿಗೆ ತಲೆಕೆಡಿಸಿಕೊಳ್ಳದೆ ಹಿಂದೆ ನಾನು ಮಾಡಿದ್ದ ಮುಂದೆ ಮಾಡುವ ಕೆಲಸಗಳನ್ನು ಹೇಳಿ ಮತ ಕೇಳಿದ್ದೆ. ಶಿವಮೊಗ್ಗದ 28 ಮತಗಳಲ್ಲಿ 27 ಮತ ಬಂದಿದೆ. ನಮಗೆ ಯಾವುದೇ ಪಕ್ಷದ ಪ್ರಶ್ನೆ ಇಲ್ಲ.--------------------

ಪೊಟೋ: ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆಯಾದ ಸಿ.ಎಸ್.ಷಡಾಕ್ಷರಿ ಮಾತನಾಡಿದರು.

29ಎಸ್‌ಎಂಜಿಕೆಪಿ08

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಕ್ಷತೆ, ಪಾರದರ್ಶಕತೆ ಇದ್ದರೆ ಸಂಘಟನೆ ಪ್ರಗತಿ: ಮಲ್ಲಿಕಾರ್ಜುನ ಬಳ್ಳಾರಿ
ಫಾಸ್ಟ್‌ಫುಡ್‌ ಬದಲು ತರಕಾರಿ, ಹಣ್ಣು ದೇಹಕ್ಕೆ ಉತ್ತಮ