ಮೂಡುಬಿದಿರೆ ‘ಕೋಟಿ - ಚೆನ್ನಯ’ ಕಂಬಳ ಕೂಟ ಫಲಿತಾಂಶ

KannadaprabhaNewsNetwork |  
Published : Jan 28, 2025, 12:46 AM IST
ಫಲಿತಾಂಶ | Kannada Prabha

ಸಾರಾಂಶ

ಕಂಬಳದಲ್ಲಿ ಹಗ್ಗ ಹಿರಿಯ ವಿಭಾಗದಲ್ಲಿ : 23, ಕನೆ ಹಲಗೆ ವಿಭಾಗದಲ್ಲಿ: 13, ಹಗ್ಗ ಕಿರಿಯ ವಿಭಾಗದಲ್ಲಿ : 35, ಅಡ್ಡಹಲಗೆ ವಿಭಾಗದಲ್ಲಿ: 6, ನೇಗಿಲು ಹಿರಿಯ ವಿಭಾಗದಲ್ಲಿ : 38 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ: 123 ಹೀಗೆ ಕೂಟದಲ್ಲಿ ಒಟ್ಟು 244 ಜೊತೆ ಕೋಣಗಳು ಭಾಗವಹಿಸಿದ್ದವು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಮೂಡುಬಿದಿರೆಯ ಒಂಟಿಕಟ್ಟೆ ಕಡಲಕೆರೆಯಲ್ಲಿ ನಡೆದ 22ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳ ಭಾನುವಾರ ಮಧ್ಯರಾತ್ರಿ ಮುಕ್ತಾಯಗೊಂಡಿತು.

ಕಂಬಳದಲ್ಲಿ ಹಗ್ಗ ಹಿರಿಯ ವಿಭಾಗದಲ್ಲಿ : 23, ಕನೆ ಹಲಗೆ ವಿಭಾಗದಲ್ಲಿ: 13, ಹಗ್ಗ ಕಿರಿಯ ವಿಭಾಗದಲ್ಲಿ : 35, ಅಡ್ಡಹಲಗೆ ವಿಭಾಗದಲ್ಲಿ: 6, ನೇಗಿಲು ಹಿರಿಯ ವಿಭಾಗದಲ್ಲಿ : 38 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ: 123 ಹೀಗೆ ಕೂಟದಲ್ಲಿ ಒಟ್ಟು 244 ಜೊತೆ ಕೋಣಗಳು ಭಾಗವಹಿಸಿದ್ದವು.

ಕನೆ ಹಲಗೆಯಲ್ಲಿ ನಿಡೋಡಿ ಕಾನ ರಾಮ ಸುವರ್ಣ(ಪ್ರಥಮ), ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡ್ಡಾಪಿ ಸುರೇಶ್ ನಾಯ್ಕ.

ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ‘ಎ’ ಪ್ರಥಮ, ಹಲಗೆ ಮುಟ್ಟಿದವರು : ಭಟ್ಕಳ ಹರೀಶ್., ಬೋಳಾರ ತ್ರಿಶಾಲ್ ಕೆ ಪೂಜಾರಿ ‘ಬಿ’ ದ್ವಿತೀಯ, ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ.

ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ನಂದಳಿಕೆ ಶ್ರೀಕಾಂತ್ ಭಟ್ ‘ಎ’, ಓಡಿಸಿದವರು: ಬಂಬ್ರಾಣಬೈಲು ವಂದಿತ್‌ ಶೆಟ್ಟಿ, ದ್ವಿತೀಯ ಕೊಳಕೆ ಇರ್ವತ್ತೂರು ಭಾಸ್ಕರ ಎಸ್‌ ಕೋಟ್ಯಾನ್ ‘ಎ’, ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.

ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಉಮನೊಟ್ಟು ಶಿವರಾಮ ಹೆಗ್ಡೆ ಪ್ರಥಮ, ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ.

ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ದ್ವಿತೀಯ (ಬಿ), ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ.

ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ, ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ. ದ್ವಿತೀಯ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ, ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.

ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಮುನಿಯಾಲು ಉದಯ ಕುಮಾರ್ ಶೆಟ್ಟಿ ‘ಎ’, ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್. ದ್ವಿತೀಯ, ಕಲ್ಯ ಮಿತ್ತಬೆಟ್ಟು ಶ್ರೀಧರ ಕರಿಯಣ್ಣ ಪೂಜಾರಿ, ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ.

ಬಹುಮಾನ ವಿತರಣಾ ಸಮಾರಂಭದಲ್ಲಿ ಮಂಗಳೂರು ವಲಯ ಅರಣ್ಯಾಧಿಕಾರಿ ಮಂಜುನಾಥ ಗಾಣಿಗ, ಮೂಡುಬಿದಿರೆ ಉಪವಲಯಾರಣ್ಯಧಿಕಾರಿಗಳಾದ ಗುರುಮೂರ್ತಿ, ಬಸಪ್ಪ, ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾರ್ಯದರ್ಶಿ ಹರಿಪ್ರಸಾದ್‌ ಶೆಟ್ಟಿ, ಕಂಬಳ ಸಮಿತಿಯ ಪ್ರಮುಖರಾದ ಗುಣಪಾಲ ಕಡಂಬ, ಭಾಸ್ಕರ ಕೋಟ್ಯಾನ್, ರಶ್ಮಿತ್ ಶೆಟ್ಟಿ ನೋಣಾಲ್ ಗುತ್ತು ರಂಜಿತ್ ಪೂಜಾರಿ ಭಾಗವಹಿಸಿ ಬಹುಮಾನ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ