ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಸಂಪರ್ಕಿಸುವ ರಸ್ತೆ ಸಂಚಾರಕ್ಕೆ ಅಡ್ಡಿ

KannadaprabhaNewsNetwork |  
Published : May 23, 2024, 01:07 AM IST
೨೨ ಜೆ.ಜಿ.ಎಲ್.೧)ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ  ರಸ್ತೆಯಲ್ಲಿ ಸಂಚರಿಸಲು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಬುಧವಾರ ತಾಲೂಕಿನ  ಹುಚ್ಚವ್ವನಹಳ್ಳಿ ಕೊರಚರಹಟ್ಟಿ   ಗ್ರಾಮದ ಮುಖಂಡರು  ಉಪ ತಹಸೀಲ್ದಾರ್ ಮಂಜಾನAದ  ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚರಿಸಲು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ತಾಲೂಕಿನ ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮದ ಮುಖಂಡರು ಉಪ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಜಗಳೂರು

ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚರಿಸಲು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಬುಧವಾರ ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮದ ಮುಖಂಡರು ಉಪ ತಹಸೀಲ್ದಾರ್ ಮಂಜಾನಂದಗೆ ಮನವಿ ಸಲ್ಲಿಸಿದರು.

ತಾಲೂಕಿನ ಹಿರೇಮಲ್ಲನಹೊಳೆ ಗ್ರಾಪಂ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಕೊರಚರಹಟ್ಟಿ ಗ್ರಾಮವು ಮೂಲಭೂತ ಸೌಕರ್ಯಗಳ ಕೊರತೆಯಿಂದ ನಲುಗುತ್ತಿದೆ. ಹಿರೇಮಲ್ಲಹನೊಳೆ-ತಾಯಿಟೋಣಿ ಗ್ರಾಮಗಳ ನಡುವೆ ಬರುವ ಅಡ್ಡ ರಸ್ತೆಯಿಂದ ಕೊರಚರಹಟ್ಟಿಗೆ ಹೋಗಬೇಕು. ಆದರೆ ಕೆಲವರು ರಸ್ತೆಯಲ್ಲಿ ಮಣ್ಣಿನ ದಿಬ್ಬ, ಕಲ್ಲು ಅಡ್ಡ ಹಾಕುವ ಮೂಲಕ ದೌರ್ಜನ್ಯ ಮಾಡುತ್ತಾರೆ. ಅತೀ ತುರ್ತು ಸಂದರ್ಭಗಳಲ್ಲಿ ಬೈಕ್, ಕಾರು ತರುವಾಗ ಕಿರಿಕಿರಿ ಉಂಟಾಗುತ್ತದೆ. ಆದ್ದರಿಂದ ಶೀಘ್ರವೇ ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಸುಮಾರು ವರ್ಷಗಳಿಂದ ನಾವು ಇದೇ ರಸ್ತೆಯಲ್ಲಿ ಎತ್ತಿನಗಾಡಿ, ಕಾರು, ಬೈಕ್, ಪಾದಾಚಾರಿ ಮೂಲಕ ಕೊರಚರಹಟ್ಟಿಯಿಂದ ಹಿರೇಮಲ್ಲನಹೊಳೆ ಸಂಪರ್ಕ ಮಾಡುತ್ತಿದ್ದೇವೆ. ಆದರೆ ಕೆಲವರು ರಸ್ತೆ ಒತ್ತುವರಿ ಮಾಡಿಕೊಂಡು ತಮ್ಮ ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುವುದು ಸರಿಯಲ್ಲ. ಯಾರದೋ ಸಿಟ್ಟಿಗೆ ನಮ್ಮಂತ ಬಡವರ ಮೇಲೆ ಹಕ್ಕು ಚಲಾಯಿಸುವುದು ಯಾವ ನ್ಯಾಯ? ಸಾರ್ವಜನಿಕ ರಸ್ತೆ ಎಲ್ಲರ ಬಳಕೆಗೂ ಮುಕ್ತವಾಗಿದೆ. ರಸ್ತೆ ಏನಾದರು ಅವರ ಜಮೀನಿನಲ್ಲಿ ಇದ್ದರೆ ಅಳತೆ ಮಾಡಿಸಿ ಹದ್ದುಬಸ್ತು ಮಾಡಲಿ, ಅದು ಬಿಟ್ಟು ಮುಂದಿನ ಹೊಲದ ರೈತರಿಗೆ ಸಾರ್ವಜನಿಕರಿಗೆ ತೊಂದರೆ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಮಾಜಿ ಗ್ರಾ.ಪಂ.ಸದಸ್ಯ ರವೀಶ್, ಯುವಮುಖಂಡರಾದ ರುದ್ರೇಶ್, ಸುರೇಶ್ ಸೇರಿದಂತೆ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!