ರಸ್ತೆಗೆ ಮಾಜಿ ಶಾಸಕ ವಿ.ಎಸ್‌. ಮುತ್ತಿನಪೆಂಡಿಮಠ ಹೆಸರು ನಾಮಕರಣ

KannadaprabhaNewsNetwork |  
Published : Mar 10, 2024, 01:32 AM IST
ಕಾರ್ಯಕ್ರಮವನ್ನು ಜಿಲ್ಲಾಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿದರು.  | Kannada Prabha

ಸಾರಾಂಶ

ಗದಗದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ತೆರಳು ಮುಂಭಾಗದಲ್ಲಿರುವ ರಸ್ತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ ಅವರ ಹೆಸರು ನಾಮಕರಣ ಮಾಡಿದರು.

ಗದಗ: ಇಲ್ಲಿಯ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ತೆರಳು ಮುಂಭಾಗದಲ್ಲಿರುವ ರಸ್ತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ ಅವರ ಹೆಸರು ನಾಮಕರಣ ಮಾಡಿದರು.ನಂತರ ಮಾತನಾಡಿದ ಅವರು, ಅತ್ಯಂತ ಮುಖ್ಯ ಸುಂದರ ರಸ್ತೆಗೆ ನಾಮಕರಣ ಆಗಿರೋದು ಎಲ್ಲರಿಗೂ ಸಂತೋಷ ತಂದಿದೆ. ಮಾಜಿ ಶಾಸಕ ಸಿ ಎಸ್. ಮುತ್ತಿನಪೆಂಡಿಮಠ ಅವರ ರಾಜಕೀಯ ಜೀವನ ನಂತರದ ಒಡನಾಟ ಅನ್ಯೋನ್ಯವಾಗಿತ್ತು. ಅವರೊಂದಿಗೆ ಡಿ.ಆರ್. ಪಾಟೀಲ ಒಡನಾಟ ಸ್ನೇಹ ಸಂಬಂಧ ತುಂಬಾ ಚೆನ್ನಾಗಿತ್ತು. ಮುತ್ತಿನಪೆಂಡಿಮಠ ಅವರ ಸ್ನೇಹಿತರನ್ನು ನಾನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿದೆ. ಅವರ ತತ್ವ ಸಿದ್ಧಾಂತ ಮೆಚ್ಚುವಂಥವು. ಅವರು ನಮ್ಮ ಹಿತೈಷಿಗಳು ಎಂಬುದು ಸಂತೋಷ ಎನಿಸಿತು ಎಂದರು.

ರಾಜಕಾರಣದಲ್ಲಿ ಸಕ್ರಿಯವಾಗಿ ಸ್ವಲ್ಪದಿನ ಇದ್ದರು ಸಹ ಬಹಳಷ್ಟು ಜನರನ್ನು ಗಳಿಸಿಕೊಂಡಿದ್ದರು. ಅನೇಕ ಆತ್ಮೀಯ ಗೆಳೆಯರನ್ನು ಸಂಪಾದಿಸಿದ್ದರು. ಅವರದ್ದು ಸ್ನೇಹಪರ ಬದುಕಾಗಿತ್ತು. ಅವರ ಸಂಸ್ಕೃತಿ ಮೇಲುಸ್ಥರದ ವ್ಯಕ್ತಿತ್ವ ಎಲ್ಲರನ್ನು ಸೆಳೆಯುತ್ತಿತ್ತು ಎಂದರು. ಅವರ ಪುತ್ಥಳಿ ಸ್ಥಾಪನೆ ಬಗ್ಗೆ ಮುಂದಿನ ದಿನಮಾನಗಳಲ್ಲಿ ಕ್ರಮ ವಹಿಸೋಣ ಎಂದರು.

ಮಾಜಿ ಸಚಿವ ಎಸ್. ಎಸ್. ಪಾಟೀಲ ಮಾತನಾಡಿ, ಸಿ.ಎಸ್. ಮುತ್ತಿನಪೆಂಡಿಮಠ ಅವರು ವಕೀಲರಾಗಿ ಜನಸೇವೆ ಮಾಡಿದ್ದಾರೆ. ನಾನು ಶಾಸಕನಾಗಲು ಪ್ರಮುಖ ಕಾರಣ ಸಿ. ಎಸ್. ಮುತ್ತಿನಪೆಂಡಿಮಠ ಎಂದರೆ ತಪ್ಪಾಗದು ಎಂದರು.

ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ರಸ್ತೆಗೆ ಸಿ. ಎಸ್. ಮುತ್ತಿನಪೆಂಡಿಮಠ ಹೆಸರಿಡಲು ನಗರಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿ ಅಂಗೀಕರಿಸಲಾಗಿದೆ. ಅವರು ಎರಡು ಬಾರಿ ಶಾಸಕರಾಗಿ ಉತ್ತಮ ಕಾರ್ಯಗಳ‌ ಮೂಲಕ ಗಮನ ಸೆಳೆದಿದ್ದಾರೆ. ಅವರ ಕಾರ್ಯಗಳ‌ ಮೂಲಕ ಜನಸಾಮಾನ್ಯರಲ್ಲಿ ಇಂದಿಗೂ ಅವರು ಅಜರಾಮರರಾಗಿದ್ದಾರೆ ಎಂದರು. ತೋಂಟದಾರ್ಯ ಮಠದ ಸಿದ್ಧರಾಮ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯ ಪದ್ಮಾ ಕಟಗಿ, ಅನೀಲ‌ ಅಬ್ಬಿಗೇರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೆಮನಿ ಪಾಟೀಲ, ಡಾ. ಎಂ.ಬಿ. ಪಾಟೀಲ, ವಿಶ್ವನಾಥ ಪಾಟೀಲ, ಪ್ರತಿಷ್ಠಾನದ ಅಧ್ಯಕ್ಷ ವಸಂತ ಮೇಟಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

1.7 ಕೋಟಿಯ ಮೊಬೈಲ್‌ಗಳುಮರಳಿ ಮಾಲಿಕರಿಗೆ ಹಸ್ತಾಂತರ
ಕೆಲಸಕ್ಕಿದ್ದ ಉದ್ಯಮಿ ಮನೆಯಲ್ಲಿ43 ಲಕ್ಷದ ಆಭರಣ ಕದ್ದ ದಂಪತಿ