ಪ್ರಭಾವಿ ಶಾಸಕ ರೇವಣ್ಣ ಊರಲ್ಲೇ ರಸ್ತೆ ತುಂಬೆಲ್ಲಾ ಗುಂಡಿ

KannadaprabhaNewsNetwork |  
Published : May 07, 2026, 01:45 AM IST
6ಎಚ್ಎಸ್ಎನ್4 : ಹೊಳೆನರಸೀಪುರ ಹೃದಯಭಾಗ ಸುಭಾಷ್ ವೃತ್ತದಲ್ಲಿನ ರಸ್ತೆ ಗುಂಡಿ ಬಿದ್ದು ಸಂಪೂರ್ಣ ಹಾಳಾಗಿದೆ. | Kannada Prabha

ಸಾರಾಂಶ

ರಾಜ್ಯದಲ್ಲಿ ಆಡಳಿತ ಪಕ್ಷದ ಸಂಸದರು ಇದ್ದರೂ ಈ ರಸ್ತೆ ಗುಂಡಿಗಳನ್ನು ಮುಚ್ಚಿಸಲು ಸಾಧ್ಯ ಆಗುತ್ತಿಲ್ಲವೇ ಎಂದು ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ಇನ್ನಿತರ ಕಡೆಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಚಾಲಕರು ಕೇಳುವ ಪ್ರಶ್ನೆಗೆ ಪುರಸಭೆ ಮುಖ್ಯಾಧಿಕಾರಿಯೇ ಉತ್ತರ ನೀಡಬೇಕು. ಶಾಸಕ ರೇವಣ್ಣ ಅವರ ಬಳಿ ಸಮಸ್ಯೆ ಕುರಿತಂತೆ ಗಮನ ಸೆಳೆದಾಗ ಸರ್ಕಾರ ಹಣ ನೀಡುತ್ತಿಲ್ಲ ನಾನೇನು ಮಾಡಲಿ ಎಂದಿದ್ದರು. ಸಂಸದರು ಈ ರಸ್ತೆ ಗುಂಡಿಗಳನ್ನು ಮುಚ್ಚಿಸಲು ೪ ಕೋಟಿ ಬಿಡುಗಡೆ ಆಗಿದೆ ಕೆಲಸ ಪ್ರಾರಂಭಿಸಲಾಗುವುದು ಎಂದು ವರ್ಷದ ಹಿಂದೆ ಹೇಳಿದ್ದರು. ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್‌ ವರ್ಷಗಳ ಹಿಂದೆ ಟೆಂಡರ್ ಕರೆದಿದ್ದೇವೆ ಎಂದಿದ್ದರು, ನಂತರ ಯಾರೂ ಟೆಂಡರ್ ಹಾಕಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣ ಪುರಸಭೆ ಮುಂಭಾಗದ ಮಹಾತ್ಮ ಗಾಂಧಿ ವೃತ್ತದ ಮೂಲಕ ಸುಭಾಷ್ ವೃತ್ತ ಸಾಗಿ ಸಾರ್ವಜನಿಕ ಆಸ್ಪತ್ರೆ ತನಕ ದೊಡ್ಡ ದೊಡ್ಡ ಗುಂಡಿ, ಪುರಸಭೆ ವ್ಯಾಪ್ತಿಯ ಸೂರನಹಳ್ಳಿ ರಸ್ತೆ, ಅರಕಲಗೂಡು ರಸ್ತೆ ಸಂಪೂರ್ಣ ಹಾಳಾಗಿದ್ದು ದ್ವಿಚಕ್ರ ವಾಹನ ಸೇರಿದಂತೆ ಎಲ್ಲಾ ಬಗೆಯ ವಾಹನಗಳ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆ ಆಗುತ್ತಿದೆ.

ಸಮಸ್ಯೆ ಕುರಿತಂತೆ ಕಳೆದ ಒಂದು ವರ್ಷದಲ್ಲಿ ಎರಡು ಮೂರು ಬಾರಿ ಪತ್ರಿಕೆಗಳಲ್ಲಿ ವರದಿ ಮಾಡಿ ಪುರಸಭೆ ಮುಖ್ಯಾಧಿಕಾರಿ, ಹಾಸನ ಜಿಲ್ಲಾಧಿಕಾರಿ, ಲೋಕೋಪಯೋಗಿ ಇಲಾಖೆ ಎಇಇಗೆ ಮಾಹಿತಿ ನೀಡಿದ್ದರೂ, ಯಾವುದೇ ಪ್ರಯೋಜನ ಆಗಿಲ್ಲ. ಪ್ರಭಾವಿ ಶಾಸಕರು, ರಾಜ್ಯದಲ್ಲಿ ಆಡಳಿತ ಪಕ್ಷದ ಸಂಸದರು ಇದ್ದರೂ ಈ ರಸ್ತೆ ಗುಂಡಿಗಳನ್ನು ಮುಚ್ಚಿಸಲು ಸಾಧ್ಯ ಆಗುತ್ತಿಲ್ಲವೇ ಎಂದು ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ಇನ್ನಿತರ ಕಡೆಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಚಾಲಕರು ಕೇಳುವ ಪ್ರಶ್ನೆಗೆ ಪುರಸಭೆ ಮುಖ್ಯಾಧಿಕಾರಿಯೇ ಉತ್ತರ ನೀಡಬೇಕು. ಶಾಸಕ ರೇವಣ್ಣ ಅವರ ಬಳಿ ಸಮಸ್ಯೆ ಕುರಿತಂತೆ ಗಮನ ಸೆಳೆದಾಗ ಸರ್ಕಾರ ಹಣ ನೀಡುತ್ತಿಲ್ಲ ನಾನೇನು ಮಾಡಲಿ ಎಂದಿದ್ದರು. ಸಂಸದರು ಈ ರಸ್ತೆ ಗುಂಡಿಗಳನ್ನು ಮುಚ್ಚಿಸಲು ೪ ಕೋಟಿ ಬಿಡುಗಡೆ ಆಗಿದೆ ಕೆಲಸ ಪ್ರಾರಂಭಿಸಲಾಗುವುದು ಎಂದು ವರ್ಷದ ಹಿಂದೆ ಹೇಳಿದ್ದರು. ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್‌ ವರ್ಷಗಳ ಹಿಂದೆ ಟೆಂಡರ್ ಕರೆದಿದ್ದೇವೆ ಎಂದಿದ್ದರು, ನಂತರ ಯಾರೂ ಟೆಂಡರ್ ಹಾಕಿಲ್ಲ ಎಂದರು.

ಪುರಸಭೆ ವ್ಯಾಪ್ತಿಯ ಮಂಗಳಾಪುರದಿಂದ ಅರಕಲಗೂಡು ರಸ್ತೆಯ ಕೈಗಾರಿಕಾ ಬಡಾವಣೆವರೆಗೆ ಗುಂಡಿ ಮುಚ್ಚಲು ೧೮ ಲಕ್ಷಕ್ಕೆ ಟೆಂಡರ್‌ ಆಗಿದೆ. ಇನ್ನು ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುತ್ತದೆ ಎಂದು ತಿಂಗಳ ಹಿಂದೆ ಹೇಳಿದ್ದರು ಇನ್ನೂ ಕೆಲಸ ಪ್ರಾರಂಭವಾಗಿಲ್ಲ. ಈ ರಸ್ತೆಯಲ್ಲಿ ಓಡಾಡುವ ವಾಹನಗಳ ಮಾಲೀಕರು ಪುರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಪ್ರಭಾವಿ ನಾಯಕರಿದ್ದರೂ ಪಟ್ಟಣದ ಪ್ರಮುಖ ರಸ್ತೆಗಳ ಗುಂಡಿ ಮುಚ್ಚಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಮುಖಂಡರು ವ್ಯಂಗ್ಯವಾಡುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜೃಂಭಣೆಯಿಂದ ನಡೆದ ಶ್ರೀ ಮದ್ದೂರಮ್ಮನವರ ಅಗ್ನಿಕೊಂಡ ಮಹೋತ್ಸವ
ಡೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿ.ಶಿವಕುಮಾರ್ ಭೂಮಿಪೂಜೆ