ಕನ್ನಡಪ್ರಭ ವಾರ್ತೆ ಮೈಸೂರು
ಕನ್ನಡಾಂಬೆ ರಕ್ಷಣಾ ವೇದಿಕೆಯು ಹೂಟಗಳ್ಳಿಯ ಸರಸ್ವತಿ ಸಮುದಾಯ ಭವನದಲ್ಲಿ ಬುಧವಾರ ಬಸವ ಜಯಂತಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಬಟ್ಟೆ ವಿತರಣೆ ಹಾಗೂ ಅವರೊಂದಿಗೆ ಸಹಪಂಕ್ತಿ ಭೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸುತ್ತಮುತ್ತ ಸ್ವಚ್ಛತೆ ಇದ್ದರೆ ಪರಿಸರವೂ ಸ್ವಚ್ಛವಾಗಿರುತ್ತದೆ. ಆರೋಗ್ಯವೂ ಚೆನ್ನಾಗಿರುತ್ತದೆ. ಪೌರ ಕಾರ್ಮಿಕರ ಶ್ರಮದಿಂದಲೇ ಮೈಸೂರು ನಗರಕ್ಕೆ ಹಲವು ಬಾರಿ ಸ್ವಚ್ಥತಾ ನಗರಿ ಪ್ರಶಸ್ತಿ ಲಭ್ಯವಾಗಿದೆ ಎಂದರು.ಬಸವಣ್ಣನವರು ಹನ್ನೆರಡನೇ ಶತಮಾನದಲ್ಲಿಯೇ ಕಾಯಕವೇ ಕೈಲಾಸ ಎಂಬ ತತ್ವ ನೀಡಿದ್ದಾರೆ. ಸೇವೆ ಮಾಡುವ ಎಲ್ಲರೂ ಇದನ್ನು ಅರಿತುಕೊಳ್ಳಬೇಕು. ಅದೇ ರೀತಿ ಮೈಸೂರನ್ನು ಆಳಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಡೀ ದೇಶಕ್ಕೆ ಮಾದರಿಯಾದ ಆಡಳಿತ ನೀಡಿದವರು. ಸಮಾಜಮುಖಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದವರು ಎಂದರು.
ಮುಖ್ಯ ಅತಿಥಿಯಾಗಿದ್ದ ಬಿಜೆಪಿ ಯುವ ಮುಖಂಡ ವಿ. ಕವೀಶ್ ಗೌಡ ಮಾತನಾಡಿ, ಪೌರ ಕಾರ್ಮಿಕರ ಸೇವೆಯ ಬಗ್ಗೆ ಅಪಾರವಾದ ಗೌರವವಿದೆ. ನೀವು ನಗರ, ಪಟ್ಟಣ ಪ್ರದೇಶಗಳ ಸ್ವಚ್ಛತೆಯ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಉನ್ನತ ಹುದ್ದೆಗಳಿಗೆ ಏರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಅದೇ ರೀತಿ ನಾಲ್ವಡಿ ಅವರು ಮಾಡಿದ ಜನೋಪಯೋಗಿ ಕೆಲಸಗಳಿಂದಾಗಿ ಮೈಸೂರು ರಾಜಮನೆತನದ ಬಗ್ಗೆ ಅಪಾರವಾದ ಗೌರವವಿದೆ. ಪ್ರತಿಯೊಬ್ಬರೂ ಮನೆಯಲ್ಲಿ ನಾಲ್ವಡಿಯವರ ಫೋಟೋ ಇಟ್ಟು ಪೂಜಿಸಬೇಕು ಎಂದರು.
ಎಲ್ಲಕ್ಕೂ ಸ್ಥಳೀಯ ಸಂಸ್ಥೆಗಳನ್ನು ಕಾಯದೇ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು ಎಂದು ಸಲಹೆ ಮಾಡಿದರು.
ಜಿಪಂ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವ್ ಮಾತನಾಡಿ, ತಮ್ಮ ಮಟ್ಟದಲ್ಲಿ ಪೌರ ಕಾರ್ಮಿಕರಿಗೆ ಸಾಧ್ಯವಾದಷ್ಟು ಸೇವೆ ಮಾಡಲಾಗಿದೆ ಎಂದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಸೈನಿಕ ಅಕಾಡೆಮಿ ಮುಖ್ಯಸ್ಥ ಶ್ರೀಧರ್, ಸೆಸ್ಕ್ ಎಇಇ ಕೆ.ಕೆ. ಲಕ್ಷ್ಮೀಶ್, ಗೃಹ ನಿರ್ಮಾಣ ಸಂಘದ ಅಧ್ಯಕ್ಷ ಎಸ್. ರವಿ ಮುಖ್ಯಅತಿಥಿಗಳಾಗಿದ್ದರು. ಕನ್ನಡಾಂಬೆ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಬಿ. ರಾಜಶೇಖರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಮಾತನಾಡುವ ಗೊಂಬೆ ಖ್ಯಾತಿ ಸುಮಾ ರಾಜಕುಮಾರ್ ನಿರೂಪಿಸಿದರು.--