ಸಮ ಸಮಾಜ ನಿರ್ಮಾಣದಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಪ್ರಮುಖ-ಬಸವರಾಜ

KannadaprabhaNewsNetwork |  
Published : Aug 01, 2026, 02:15 AM IST
ಸವಣೂರ ತಾಲೂಕಿನ ಹುರುಳಿಕುಪ್ಪಿ ಗ್ರಾಮದೇವಿ ಸಭಾಭವನದಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅತ್ಯಂತ ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. | Kannada Prabha

ಸಾರಾಂಶ

ಬಸವಣ್ಣನವರ ತತ್ವ-ಸಿದ್ಧಾಂತಗಳ ಪ್ರಚಾರ ಹಾಗೂ ಸಮ ಸಮಾಜ ನಿರ್ಮಾಣದಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಬಸವರಾಜ ಹಡಪದ ಹೇಳಿದರು.

ಸವಣೂರು: ಬಸವಣ್ಣನವರ ತತ್ವ-ಸಿದ್ಧಾಂತಗಳ ಪ್ರಚಾರ ಹಾಗೂ ಸಮ ಸಮಾಜ ನಿರ್ಮಾಣದಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಬಸವರಾಜ ಹಡಪದ ಹೇಳಿದರು.

ತಾಲೂಕಿನ ಹುರುಳಿಕುಪ್ಪಿ ಗ್ರಾಮದ ಗ್ರಾಮದೇವಿ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದಶಿವ ಶರಣ ಹಡಪದ ಅಪ್ಪಣ್ಣ ಜಯಂತಿಯ ಆಚರಣೆ ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಹಡಪದ ಅಪ್ಪಣ್ಣನವರು ಅಪ್ರತಿಮ ಭಕ್ತಿ ಮತ್ತು ಜ್ಞಾನವುಳ್ಳವರು. ಬಸವಣ್ಣನವರ ವಿಚಾರಗಳಿಗೆ ಆಕರ್ಷಿತರಾಗಿ ಕಲ್ಯಾಣಕ್ಕೆ ತೆರಳಿ ಅಂದಿನ ಕಾಲದ ಮೌಢ್ಯ ಹಾಗೂ ಜಾತಿ ಪದ್ಧತಿ ಧಿಕ್ಕರಿಸಿ, ಅಪ್ಪಣ್ಣ ಕೇವಲ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿರದೇ, ಅವರ ಜೀವದ ಒಡನಾಡಿಯಾಗಿದ್ದರು. 242 ವಚನಗಳನ್ನು ರಚಿಸಿದ್ದು ಕಾಯಕ, ಆತ್ಮಶುದ್ಧಿ, ಶಿವಭಕ್ತಿ, ಸತ್ಯ, ನಿಷ್ಠೆ, ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಅತ್ಯಂತ ಸರಳ ಮತ್ತು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೀರಯ್ಯ ಹಿರೇಮಠ, ಉಡಚಪ್ಪ ದೊಡ್ಡಉಡಚಪ್ಪನವರ, ನಿಂಗಪ್ಪ ದೇವಸೂರ, ನೀಲಪ್ಪ ಹಡಪದ, ಶಂಭು ಹಡಪದ, ಅಶೋಕ ಯಲಿಗಾರ, ಎಲ್ಲಪ್ಪ ದೇವಗೇರಿ, ಮಂಜು ಕೊಪ್ಪದ, ಗಣೇಶ ಹಡಪದ, ಚನ್ನಪ್ಪ ಹಡಪದ, ಮಹಾಂತೇಶ ಹಡಪದ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಪ್ಪಳ ಜಿಲ್ಲೆಯಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನದ ಪಟ್ಟ
ಜಿಐಎಸ್‌ ಸರ್ವೇ ಪೂರ್ಣ, ಪೌರಕಾರ್ಮಿಕರಿಗೆ ಸಕಾಲಕ್ಕೆ ವೇತನ: ಮೇಯರ್‌ ಬಿಜವಾಡ ಭರವಸೆ