ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಗ್ರಂಥಾಲಯ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯೂಎಸಿ) ವತಿಯಿಂದ ನಡೆದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾವು ವೃತ್ತಿಪರರಾಗಿದ್ದಾಗ, ಪ್ರಾಮಾಣಿಕರಾಗಿದ್ದಾಗ, ನಮ್ಮ ಶಕ್ತಿಯ ಕುರಿತು ಅಭಿಮಾನ ಇದ್ದಾಗ ನಾವು ಯಾರಿಗೂ ಕಡಿಮೆಯಲ್ಲ. ಸಮಾಜದೊಂದಿಗೆ ಉತ್ತಮ ಸೌಹಾರ್ದ ಬೆಳೆಸಿಕೊಳ್ಳಿ. ದೃಢ ವಿಶ್ವಾಸದಿಂದ ವೃತ್ತಿ ಮುಂದುವರೆಸಿ ಎಂದು ಗ್ರಂಥಪಾಲಕರಿಗೆ ಅವರು ಶುಭಹಾರೈಸಿದರು.ಎಸ್.ಎನ್. ರಂಗನಾಥನ್ ವಿಚಾರಗಳನ್ನು ಅನುಸರಿಸಿದಾಗ ಗ್ರಂಥಾಲಯದೊಂದಿಗೆ ನಾವೂ ಬೆಳೆಯಲು ಸಾಧ್ಯ ಎಂದು ತಿರುಪತಿ ನ್ಯಾಷನಲ್ ಸಂಸ್ಕೃತ ವಿಶ್ವವಿದ್ಯಾನಿಲಯ ಗ್ರಂಥಪಾಲಕ ಡಾ. ವಸಂತ ಎನ್. ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತರನ್ನು ಮತ್ತು ಪದೋನ್ನತಿ ಪಡೆದವರನ್ನು ಗೌರವಿಸಲಾಯಿತು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ. ವಾಸಪ್ಪ ಗೌಡ, ಕಾರ್ಯದರ್ಶಿ ರಾಮ ಕೆ., ಐಕ್ಯೂಎಸಿ ಸಂಯೋಜಕ ಡಾ. ಸಿದ್ಧರಾಜು ಎಂ.ಎನ್., ಗ್ರಂಥಪಾಲಕಿ ಡಾ.ವನಜಾ ಬೋಳೂರ್ ಇದ್ದರು.