ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ಪತ್ರಿಕಾಭವನದಲ್ಲಿ ತಾಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾಪುರಸ್ಕಾರ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈಭವಿಕರೀಸುವುದಕ್ಕೆ ಕಡಿವಾಣ ಹಾಕಬೇಕು:ಪತ್ರಿಕಾ ಮಾಧ್ಯಮದವರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ದೃಶ್ಯ ಮಾಧ್ಯಮದಲ್ಲಿ ಅಪರಾಧ ಸುದ್ದಿಗಳನ್ನು ಅತೀ ಹೆಚ್ಚು ವೈಭವಿಕರೀಸುವುದಕ್ಕೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಪೊಲೀಸರು ವಿಶ್ವದಲ್ಲೇ ಅತ್ಯುತ್ತಮವಾಗಿ ಕೆಲಸ ಮಾಡುತ್ತಿರುವ ಹೆಸರನ್ನು ಹೊಂದಿರುವ ಸ್ಕಾಟ್ಲ್ಯಾಂಡ್ ಪೊಲೀಸರಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೋಮವಾರಪೇಟೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಲವಾರು ಕ್ಲಿಷ್ಟಕರ ಕೇಸುಗಳನ್ನು ಪತ್ತೆ ಹಚ್ಚುವ ಮೂಲಕ ಸಾಧನೆ ಮಾಡಿರುವುದು ಪ್ರಶಂಸನೀಯ ಎಂದು ಈ ಸಂದರ್ಭ ಶ್ಲಾಘಿಸಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್ ಮಾತನಾಡಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವ ಮೂಲಕ ಅವರ ಭವಿಷ್ಯಕ್ಕೆ ಉತ್ತಮ ಮುನ್ನುಡಿ ಬರೆಯಲಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮುಂದುವರೆಯಬೇಕು ಎಂದು ಹೇಳಿದರು.
ಪೊಲೀಸ್ ನಿರೀಕ್ಷಕ ಮುದ್ದುಮಾದೇವ ಸನ್ಮಾನ ಸ್ವೀಕರಿಸಿ ಮಾತನಾಡಿ, ಸನ್ಮಾನಗಳಿಂದ ಇಲಾಖೆಯ ಜವಾಬ್ದಾರಿ ಹೆಚ್ಚಾಗಿದ್ದು, ಉತ್ತಮ ಕಾರ್ಯ ನಡೆಸಲು ಇದು ಸಹಕಾರಿಯಾಗಿದೆ. ಇಲಾಖೆ ವತಿಯಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಉತ್ತಮ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಸನ್ಮಾನ ಗೌರವ:
ಸ್ಪರ್ಧೆಯಲ್ಲಿ ಸುಜಾತ ಪ್ರಥಮ, ಶೈಲಾ ವಸಂತ್ ದ್ವಿತೀಯ ಸ್ಥಾನ ಗಳಿಸಿದರು. ಪುರುಷರ ವಿಭಾಗದಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ಪ್ರಥಮ ಮತ್ತು ಡಿ.ಎಲ್.ಆಯುಷ್ ದ್ವಿತೀಯ ಸ್ಥಾನ ಪಡೆದರು.
ಕಾರ್ಯಕ್ರಮದ ನಂತರ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರಿಂದ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಜೆ.ಪ್ರವೀಣ್ ಕುಮಾರ್ ಮತ್ತು ತಾಲೂಕು ಸಂಘದ ನಿರ್ದೇಶಕ ಟೋಮಿ ಥಾಮಸ್ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.