ಕೊಡಗು ವಿವಿ ಸಭಾಂಗಣದಲ್ಲಿ ಮಾಧ್ಯಮ ದಿನಾಚರಣೆಕನ್ನಡಪ್ರಭ ವಾರ್ತೆ ಕುಶಾಲನಗರ
ಮಾಧ್ಯಮ ನಮ್ಮ ಜೀವನದಲ್ಲಿ ಒಂದು ಭಾಗವಾಗಿ ಹೋಗಿದೆ. ಮಾಧ್ಯಮಗಳಲ್ಲಿ ಯಾವುದೇ ವಿಚಾರ ಬಂದರೆ ಮಾತ್ರ ನಾವು ನಂಬುತ್ತೇವೆ. ಆದ್ದರಿಂದ ಸುದ್ದಿ ಕೊಡುವ ಭರದಲ್ಲಿ ಅಪೂರ್ಣ ಹಾಗೂ ಅಸತ್ಯವಾದ ಮಾಹಿತಿ ಜನತೆಗೆ ತಲುಪಬಾರದು. ಅದರಿಂದ ಜನರ ಮೇಲಷ್ಟೇ ಅಲ್ಲದೇ ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸುದ್ದಿಯ ಸತ್ಯಾಸತ್ಯತೆ ಅರಿತು ಪ್ರಕಟಿಸಿದಾಗ ಮಾತ್ರ ಸಮಾಜಕ್ಕೂ ಹಾಗೂ ಮಾಧ್ಯಮಗಳ ವಿಶ್ವಾಸರ್ಹತೆಗೂ ಅನುಕೂಲವಾಗಲಿದೆ ಎಂದರು.
ಸುದ್ದಿಮಾಧ್ಯಮಗಳಲ್ಲಿ ಬರುವ ಯಾವುದೇ ಸುದ್ದಿಗಳನ್ನು ನಾವು ನಕಾರಾತ್ಮಕವಾಗಿ ನೋಡದೆ ಧನಾತ್ಮಕವಾಗಿ ಅವುಗಳನ್ನು ಸ್ವೀಕಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಸುದ್ದಿ ಪೈಪೋಟಿ ನಡುವೆ ಪತ್ರಿಕೆ ಓದುವವರ ಸಂಖ್ಯೆ ಕೂಡ ಕ್ಷೀಣಿಸುತ್ತಿದೆ. ಸಾಮಾಜಿಕ ಜಾಲತಾಣ, ಡಿಜಿಟಲ್ ಮಾಧ್ಯಮ ಭರಾಟೆ ಜೋರಾಗಿ ನಡೆಯುತ್ತಿದೆ. ಇವುಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು ಎಂದು ಸಲಹೆ ನೀಡಿದರು.ಕೊಡಗು ವಿವಿ ಉಳಿಸುವ ಕಾರ್ಯವಾಗಲಿ:
ವಿಶ್ವಾಸಾರ್ಹತೆಯೇ ಪ್ರಶಸ್ತಿ:
ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ಪತ್ರಿಕೆಗಳು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಅಂಶಗಳನ್ನು ಒದಗಿಸುವ ಮಾಹಿತಿ ಕಣಜಗಳಾಗಿವೆ. ಬೇರೆ ಬೇರೆ ಭಾಷಾ ವಿಷಯಗಳ ಜ್ಞಾನದೊಂದಿಗೆ ಪತ್ರಕರ್ತರು ಮಾನಸಿಕವಾಗಿ ಬಲಿಷ್ಠರಿದ್ದಾಗ ಮಾತ್ರ ಸಮಾಜ ಕಟ್ಟವ ಕೆಲಸದಲ್ಲಿ ಸಂತೃಪ್ತಿ ಕಾಣಬಹುದು ಎಂದು ಹೇಳಿದರು.
ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಿ, ಪತ್ರಿಕಾರಂಗವು ವೈಜ್ಞಾನಿಕ ಹಾಗೂ ವೈಚಾರಿಕವಾಗಿ ವರದಿಗಳನ್ನು ಪ್ರಕಟಿಸುವ ಮೂಲಕ ಸಮಾಜದ ಸ್ವಾಸ್ಥ್ಯ ವನ್ನು ಎತ್ತಿ ಹಿಡಿಯಬೇಕು. ಯಾವುದೇ ವ್ಯಕ್ತಿಯನ್ನು ಟೀಕೆ ಟಿಪ್ಪಣಿ ಮಾಡುವಾಗ ಸತ್ಯಕ್ಕೆ ಹತ್ತಿರವಾದ ಮಾಹಿತಿಯನ್ನು ಹೊಂದಿರಬೇಕು. ಸತ್ಯದ ಆಧಾರ ಮೇಲೆ ವರದಿ ಮಾಡಬೇಕು. ರಚನಾತ್ಮಕವಾದ ಟೀಕೆಗಳನ್ನು ಕೊಡಬೇಕು ಎಂದರು.
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಸ್ವಾಗತಿಸಿದರು. ಉಪನ್ಯಾಸಕ ಜಮೀರ್ ಅಹಮ್ಮದ್ ನಿರೂಪಿಸಿದರು. ಪತ್ರಕರ್ತ ಕೆ.ಎಸ್. ಮೂರ್ತಿ ವಂದಿಸಿದರು.ಇದೇ ಸಂದರ್ಭ ಪತ್ರಕರ್ತರು ಹಾಗೂ ಅತಿಥಿಗಳನ್ನು ಸನ್ಮಾನಿಸಲಾಯಿತು.