ರನ್ನ ವೈಭವ ಯಶಸ್ಸಿಗೆ ಅಧಿಕಾರಿಗಳ ಪಾತ್ರ ಪ್ರಮುಖ: ಸಚಿವ ಆರ್‌.ಬಿ. ತಿಮ್ಮಾಪೂರ

KannadaprabhaNewsNetwork |  
Published : Mar 02, 2025, 01:18 AM IST
(ಫೋಟೋ 1ಬಿಕೆಟಿ5, ರನ್ನ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ) | Kannada Prabha

ಸಾರಾಂಶ

ಮುಧೋಳದಲ್ಲಿ ಮೂರು ದಿನಗಳ ಕಾಲ ಜರುಗಿದ ರನ್ನ ವೈಭವ ಅಭೂತಪೂರ್ವ ಯಶಸ್ಸು ಕಂಡಿದ್ದು, ಇದಕ್ಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಧಿಕಾರೇತರರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮುಧೋಳದಲ್ಲಿ ಮೂರು ದಿನಗಳ ಕಾಲ ಜರುಗಿದ ರನ್ನ ವೈಭವ ಅಭೂತಪೂರ್ವ ಯಶಸ್ಸು ಕಂಡಿದ್ದು, ಇದಕ್ಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಧಿಕಾರೇತರರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಮುಧೋಳ ರನ್ನ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರನ್ನ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ರನ್ನ ವೈಭವದಿಂದ ಮುಧೋಳ ರಾಜ್ಯದಾದ್ಯಂತ ಹೆಸರು ಮಾಡಿದ್ದು, ಈ ಅಭೂತಪೂರ್ವ ಯಶಸ್ಸಿಗೆ ಜಿಲ್ಲೆಯ ಡಿ ದರ್ಜೆಯ ಸಿಬ್ಬಂದಿಯಿಂದ ಹಿಡಿದು ಡಿಸಿ, ಎಸ್.ಪಿ, ಸಿಇಒ ಹಾಗೂ ಎಸಿ ಮಟ್ಟದ ಅಧಿಕಾರಿಗಳೆಲ್ಲ ಮನೆಯ ಉತ್ಸವವೆಂಬಂತೆ ಹಗಲಿರುಳು ಶ್ರಮಿಸಿ ಅಚ್ಚುಕಟ್ಟಾದ ಕಾರ್ಯಕ್ರಮ ನಡೆಸಿದ್ದಾರೆ ಎಂದು ಬಣ್ಣಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ತಾನು ಉನ್ನತ ಅಧಿಕಾರಿ ಎನ್ನದೇ ಪೇದೆಯಂತೆ ಕಾರ್ಯ ನಿರ್ವಹಿಸಿದರು, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಎಸಿ ಎಂಬುದನ್ನು ಮರೆತು ಸ್ವಯಂ ಸೇವಕರಂತೆ ಕಾರ್ಯ ನಿರ್ವಹಿದ್ದು ಮರೆಯಲಾಗದ ಕ್ಷಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಧೋಳ ಜನತೆ ಹಾಗೂ ಜಿಲ್ಲೆಯ ಉದ್ಯಮಿಗಳು, ರನ್ನ ಅಭಿಮಾನಿಗಳು, ರನ್ನ ಪ್ರತಿಷ್ಠಾನ ಸದಸ್ಯರಿಗೆ, ಕನ್ನಡ ಸಂಘಟನೆಗಳಿಗೆ, ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಗೆ, ಸಾಹಿತಿ ಶಿಕ್ಷಕರು, ಸೇರಿ ಜಿಲ್ಲೆಯ ಸಮಸ್ತ ಜನತೆಗೆ ಅಭಿನಂದಿಸುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿ, ಲಕ್ಷಾಂತರ ಜನರಿಂದ ಅದ್ಧೂರಿಯಾಗಿ ನಡೆದ ಈ ಉತ್ಸವ ನಮಗೆ ಹೊಸ ಅನುಭವ ನೀಡಿದೆ. ಈ ರನ್ನ ವೈಭವದಲ್ಲಿ ಎಲ್ಲ ಪ್ರಕಾರದ ಕಲಾವಿದರನ್ನು ಕಾಣುವುದಲ್ಲದೆ ನಮ್ಮ ಅಧಿಕಾರಿಗಳಲ್ಲೂ ಕಲಾವಿದರಿದ್ದಾರೆ ಎಂದು ತಿಳಿಯುವಂತಾಯಿತು ಎಂದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಮಾತನಾಡಿ, ಸಂಘಟನೆ ಎಂದರೇನು ಎಂಬುದನ್ನು ರನ್ನ ವೈಭವ ತಿಳಿಸಿಕೊಟ್ಟಿದೆ. ಈ ಕಾರ್ಯಕ್ರಮದ ಸಂಘಟನೆಗೆ ಒಂದು ತಿಂಗಳಿನಿಂದ ತಯಾರಿ ನಡೆದಿದ್ದು, ಪ್ರತಿಯೊಂದು ಸ್ಥಳದಲ್ಲಿ ಜನರಿಗೆ ತೊಂದರೆಯಾಗದಂತೆ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರ ಸಂಕಿರಣ ಕಾರ್ಯಕ್ರಮಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ನಡೆದಿದ್ದು ಸಂತೋಷ ತಂದಿದೆ ಎಂದರು.

ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಪ್ರಾಸ್ತಾವಿಕವಾಗಿ ಮಾತನಾಡಿ, ಆರು ವರ್ಷಗಳಿಂದ ರನ್ನನ ನಾಡಿನಲ್ಲಿ ಉತ್ಸವವಾಗದೇ ಜನರಲ್ಲಿ ನಿರಾಸೆಯಾಗಿತ್ತು. ರನ್ನ ವೈಭವದಿಂದ ಆರು ವರ್ಷಗಳ ಕನಸು ನನಸಾಗಿದೆ. ರನ್ನ ವೈಭವ ಅದ್ಧೂರಿಯಾಗಿ ನಡೆಯಲು 72 ಗ್ರಾಮಗಳ ಹಾಗೂ 22 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ರನ್ನ ರಥ ಸಂಚರಿಸಿತ್ತು ಎಂದು ತಿಳಿಸಿದರು.

ಇದೇ ವೇಳೆ ಪೌರ ಕಾರ್ಮಿಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಎಸ್ ಎಚ್ ಕರಡಿಗುಡ್ಡ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್ ಜೈನಾಪುರ, ಜಮಖಂಡಿ ಡಿವೈಎಸ್ಪಿ ಶಾಂತಗಿರಿ ಸೇರಿದಂತೆ ಇತರರು ಇದ್ದರು. ಮುಧೋಳ ತಹಶೀಲ್ದಾರ್ ಮಹಾದೇವ ಸನಮುರಿ ಸ್ವಾಗತಿಸಿದರು.

ರನ್ನ ವೈಭವ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಡಿನ ಹೆಸರಾಂತ ಗಾಯಕರು ರನ್ನ ವೈಭವದ ಸ್ಟೇಟಸ್, ಸ್ಟೋರಿಗಳಲ್ಲಿ ರನ್ನ ವೈಭವ ರಾಜ್ಯದಲ್ಲಿ ನಡೆಯುತ್ತಿರುವ ಇತರ ಉತ್ಸವಗಳಿಗಿಂತ ಅದ್ಧೂರಿಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಮೂರು ದಿನವೂ ಬೆಂಗಳೂರಿನಿಂದ ಕಾರ್ಯಕ್ರಮ ವೀಕ್ಷಿಸಿದ ಅಧಿಕಾರಿ ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸಿದ್ದನ್ನು ಕಂಡು ಪುಳಕಿತನಾಗಿದ್ದೇನೆ.

- ಆರ್‌.ಬಿ. ತಿಮ್ಮಾಪೂರ ಜಿಲ್ಲಾ ಉಸ್ತುವಾರಿ ಸಚಿವರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''