ಮಾತೃಭಾಷೆ ಉಳಿವಿಗೆ ಸಂಘಟನೆಗಳ ಪಾತ್ರ ಮಹತ್ವದ್ದು: ಶಾಸಕ ಎನ್.ಶ್ರೀನಿವಾಸ್

KannadaprabhaNewsNetwork |  
Published : Jan 12, 2026, 01:30 AM IST
ಪೋಟೋ 4 :  ದಾಬಸ್‍ಪೇಟೆ ಪಟ್ಟಣದ ಮಾರುತಿ ಮಹಲ್ ಪಕ್ಕದ ಮೈದಾನದಲ್ಲಿ ವಿಜಯಸೇನೆ ಸಂಘಟನೆಯಿಂದ ಹಮ್ಮಿಕೊಂಡಿದ್ದ ಕನ್ನಡ ಹಬ್ಬ-ಸುಗ್ಗಿ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕ ಎನ್.ಶ್ರೀನಿವಾಸ್ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. | Kannada Prabha

ಸಾರಾಂಶ

ಕನ್ನಡಪರ ಸಂಘಟನೆಗಳ ತ್ಯಾಗ ದೊಡ್ಡದು, ಅವರ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದಿಂದಲೇ ಇಂದು ಕನ್ನಡ ಉಳಿಯಲು ಸಾಧ್ಯವಾಗಿದೆ. ಕನ್ನಡಪರ ಸಂಘಟನೆಗಳ ಎಲ್ಲಾ ಹೋರಾಟಗಳಿಗೂ ಕನ್ನಡಾಭಿಮಾನಿಗಳು ಬೆಂಬಲ ನೀಡುವ ಮೂಲಕ ಅವರನ್ನು ಬೆಳೆಸಬೇಕು .

ದಾಬಸ್‍ಪೇಟೆ: ಮಾತೃಭಾಷೆ ಉಳಿಸಿ, ಬೆಳೆಸುವಲ್ಲಿ ಹಾಗೂ ಕನ್ನಡಿಗರಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟ ಮಾಡುವ ಮೂಲಕ ನ್ಯಾಯ ಒದಗಿಸುತ್ತಿರುವ ಕರುನಾಡ ವಿಜಯಸೇನೆ ಸೇರಿದಂತೆ ಇನ್ನಿತರೆ ಕನ್ನಡಪರ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಮಾರುತಿ ಮಹಲ್ ಪಕ್ಕದ ಮೈದಾನದಲ್ಲಿ ವಿಜಯಸೇನೆ ಸಂಘಟನೆಯಿಂದ ಹಮ್ಮಿಕೊಂಡಿದ್ದ ಕನ್ನಡ ಹಬ್ಬ- ಸುಗ್ಗಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ನೆಲ, ಜಲ, ಭಾಷೆಯ ಉಳಿವಿಗೆ ಕನ್ನಡಪರ ಸಂಘಟನೆಗಳ ಪಾತ್ರ ಮಹತ್ವದ್ದು. ಅವರು ಕನ್ನಡದ ಸೈನಿಕರಾಗಿ ಕೆಲಸ ಮಾಡುತ್ತಿರುವುದರಿಂದಲೇ ಇಂದು ನಮ್ಮ ಕನ್ನಡ ಭಾಷೆ ಉಳಿಯಲು ಸಾಧ್ಯವಾಗಿದ್ದು, ಕನ್ನಡಪರ ಸಂಘಟನೆಗಳ ಜೊತೆಗಿದ್ದು, ಸಹಕಾರ ನೀಡುತ್ತೇನೆ ಎಂದರು.

ಮುಖಂಡ ಅಗಳಕುಪ್ಪೆ ಗೋವಿಂದರಾಜು ಮಾತನಾಡಿ, ಕನ್ನಡಪರ ಸಂಘಟನೆಗಳ ತ್ಯಾಗ ದೊಡ್ಡದು, ಅವರ ಕನ್ನಡಪರ ಸಂಘಟನೆಗಳ ನಿರಂತರ ಹೋರಾಟದಿಂದಲೇ ಇಂದು ಕನ್ನಡ ಉಳಿಯಲು ಸಾಧ್ಯವಾಗಿದೆ. ಕನ್ನಡಪರ ಸಂಘಟನೆಗಳ ಎಲ್ಲಾ ಹೋರಾಟಗಳಿಗೂ ಕನ್ನಡಾಭಿಮಾನಿಗಳು ಬೆಂಬಲ ನೀಡುವ ಮೂಲಕ ಅವರನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಅಂಚೆಮನೆ ವಿನಯ್, ಜಿಲ್ಲಾಧ್ಯಕ್ಷ ಸುಚೀಂದ್ರನ್, ರಾಜ್ಯ ಸಂಚಾಲಕ ವಿಜಯ್‍ಕುಮಾರ್, ತಾಲೂಕು ಅಧ್ಯಕ್ಷ ವಸಂತಕುಮಾರ್, ಸೋಂಪುರ ಹೋಬಳಿ ಅಧ್ಯಕ್ಷ ಭರತ್, ಜಿಲ್ಲಾ ಕಾರ್ಯಾಧ್ಯಕ್ಷ ಹರೀಶ್ ಕುಮಾರ್, ಪದಾಧಿಕಾರಿಗಳಾದ ಮಾರುತಿ, ಚಂದನ್, ಮನುಪ್ರಸಾದ್ ಸೇರಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ