ಕನ್ನಡಪ್ರಭ ವಾರ್ತೆ ಲೋಕಾಪುರ
ಪ್ರಾಚಾರ್ಯ ವಿಜಯಕುಮಾರ ಮಾತನಾಡಿ, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಪರಸ್ಪರ ಸಹಕಾರ ಮೂಲಕ ಮಗು ತನ್ನ ಅಧ್ಯಯನದಿಂದ ಹೆಚ್ಚಿನದನ್ನು ಪಡೆಯಲು ಸಾಧ್ಯವಾಗುತ್ತದೆ. ಶಾಲೆಗಳು ಕೆಲ ವಿಷಯ ಕಲಿಸಲು ಮಾತ್ರ ಉದ್ದೇಶಿಸಿಲ್ಲ. ಮಗುವಿನ ಸರ್ವಾಂಗೀಣ ಪ್ರಗತಿಗೆ ವಿವಿಧ ಕೌಶಲ್ಯಗಳು ಮತ್ತು ಸಾಮಾಜಿಕ, ಭಾವನಾತ್ಮಕ ಅಂಶಗಳನ್ನು ಸುಧಾರಿಸುವಲ್ಲಿ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡ ಹೆಗ್ಗಳಿಕೆಗೆ ನಮ್ಮ ಶಾಲೆ ಪಾತ್ರವಾಗಿದೆ ಎಂದು ಹೇಳಿದರು.
ಪಾಲಕರ ಪ್ರತಿನಿಧಿ ಮತ್ತು ಪತ್ರಕರ್ತ ಹಸನ್ಡೋಂಗ್ರಿ ಮಹಾಲಿಂಗಪೂರ ಮಾತನಾಡಿ, ಹೆಬ್ಬಾಳ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಶಾಲೆ ಫಲಿತಾಂಶದಲ್ಲಿ ದಾಖಲೆ ಬರೆದಿದೆ. ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಸತತವಾಗಿ ೧೦೦ ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡು ಜಿಲ್ಲೆಗೆ ಮಾದರಿ ವಸತಿ ಶಾಲೆಯಾಗಿದೆ, ಪ್ರಸ್ತುತ ವರ್ಷದಲ್ಲಿ ಶಾಹಿನ್ ನದಾಫ್ ೬೨೫ ಕ್ಕೆ ೬೨೧ ಅಂಕ ಪಡೆದುಕೊಂಡು ರಾಜ್ಯಕ್ಕೆ ೫ ನೇ ರ್ಯಾಂಕ್ ಪಡೆದು ಶಾಲೆಗೆ ಕೀರ್ತಿ ಹೆಚ್ಚಿಸಿದ್ದಾಳೆ, ಮುಂದಿನ ದಿನಗಳಲ್ಲಿ ಪ್ರತಿವರ್ಷ ಈ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳಲಿ ಎಂದು ಹಾರೈಸಿದರು.ಹಾಸ್ಟೇಲ್ ವಾರ್ಡನ್ ವಿದ್ಯಾವತಿ ಬಿರಾದಾರ ಮಾತನಾಡಿ, ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮ್ಮ ಭಾರತೀಯ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತೇವೆ. ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಮುತುವರ್ಜಿ ತೆಗೆದುಕೊಂಡು, ಓದಲು ಒಳ್ಳೆಯ ವಾತಾವರಣದಲ್ಲಿ ನಿರ್ಮಿಸಲಾಗಿದೆ. ಎಲ್ಲ ಸಿಬ್ಬಂದಿ ವರ್ಗದ ಸಹಕಾರ ಅಗತ್ಯ ನೀಡಿದ್ದಾರೆ ಎಂದರು.
ಈ ವೇಳೆ ಉಪಪ್ರಾಚಾರ್ಯ ಶಶಿಧರ ಮಾಗಿ, ಶಿಕ್ಷಕರಾದ ರಮೇಶ ಲಮಾಣಿ, ಎಂ.ಐ. ಕೊಟೆಪ್ಪಗೋಳ, ಗೀತಾ ಹುಲಗಜ್ಜೆ, ದೈಹಿಕ ಶಿಕ್ಷಕರಾದ ಲಕ್ಷ್ಮಣ ಗುರಡ್ಡಿ, ಎಫ್ಡಿಎ ಗೋವಿಂದಪ್ಪ ಮಲಘಾಣ, ವಿದ್ಯಾರ್ಥಿಗಳು, ಪಾಲಕರು, ಶಾಲಾ ವಿದ್ಯಾರ್ಥಿಗಳು ಇದ್ದರು.