ಮಕ್ಕಳ ಕಲಿಕೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಪ್ರಮುಖ

KannadaprabhaNewsNetwork |  
Published : Jul 01, 2025, 01:48 AM IST
ಪೊಟೋ: 30ಎಸ್‌ಎಂಜಿಕೆಪಿ01ಶಿವಮೊಗ್ಗದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳ ಕಲಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಕರ್ತವ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅತಿ ಮುಖ್ಯ, ಪ್ರಾತ್ಯಕ್ಷಿಕೆಯ ದೈಹಿಕ ಶ್ರಮದಿಂದ ಹಾಗೂ ದೈಹಿಕ ಕಸರತ್ತುಗಳಿಂದ ಮಕ್ಕಳ ಮನೋವಿಜ್ಞಾನ ವೃದ್ಧಿಸಲು ಹೇಗೆ ಸಾಧ್ಯವೋ ಅದರಲ್ಲಿ ಸಕ್ರಿಯರಾಗುವ ದೈಹಿಕ ಶಿಕ್ಷಕರ ಪಾತ್ರ ಶಿಕ್ಷಣ ವ್ಯವಸ್ಥೆಯಲ್ಲಿ ಅತಿ ಮುಖ್ಯ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದರು.

ಶಿವಮೊಗ್ಗ: ಮಕ್ಕಳ ಕಲಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಕರ್ತವ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅತಿ ಮುಖ್ಯ, ಪ್ರಾತ್ಯಕ್ಷಿಕೆಯ ದೈಹಿಕ ಶ್ರಮದಿಂದ ಹಾಗೂ ದೈಹಿಕ ಕಸರತ್ತುಗಳಿಂದ ಮಕ್ಕಳ ಮನೋವಿಜ್ಞಾನ ವೃದ್ಧಿಸಲು ಹೇಗೆ ಸಾಧ್ಯವೋ ಅದರಲ್ಲಿ ಸಕ್ರಿಯರಾಗುವ ದೈಹಿಕ ಶಿಕ್ಷಕರ ಪಾತ್ರ ಶಿಕ್ಷಣ ವ್ಯವಸ್ಥೆಯಲ್ಲಿ ಅತಿ ಮುಖ್ಯ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದರು.ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ತಾಲೂಕಿನ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ ನಡೆದ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪ್ರತಿದಿನ ಮಕ್ಕಳಿಗೆ ಕನಿಷ್ಠ 60 ನಿಮಿಷಗಳ ಕಾಲ ದೈಹಿಕ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿದಾಗ ಮಕ್ಕಳಲ್ಲಿ ಕಲಿಕೆಯ ಕಲಿಕೆಗೆ ಅಗತ್ಯವಿರುವ ಏಕಾಗ್ರತೆ ಸಾಧಿಸಿ, ಜ್ಞಾಪಕ ಶಕ್ತಿ ಬೆಳೆಯಲು ಸಹಾಯವಾಗುತ್ತದೆ ಎಂದರು. ಶಾಲೆಯಲ್ಲಿ ಎಲ್ಲಾ ಶಿಕ್ಷಕರು ಆಯಾ ವಿಷಯಗಳಿಗೆ ಅವುಗಳ ಬೋಧನೆಗೆ ಸಂಬಂಧಪಟ್ಟವರಿರುತ್ತಾರೆ. ಆದರೆ ದೈಹಿಕ ಶಿಕ್ಷಕರಿಂದ ಶಾಲೆಯಲ್ಲಿ ಶಿಸ್ತು ಮಾತ್ರವಲ್ಲ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿ ಗುರುತಿಸಿಕೊಳ್ಳುವ ಅವಕಾಶ ಪಡೆದಿರುತ್ತಾರೆ. ಅವರ ಕಲಿಕೆಯಿಂದ ಹಾಗೂ ಅವರ ತರಬೇತಿಯಿಂದ ಮಕ್ಕಳ ಕಲಿಕೆ ಉನ್ನತ ಮಟ್ಟಕ್ಕೆ ತಲುಪಲು ಮೆಟ್ಟಿಲಾಗುತ್ತದೆ ಎಂದು ಹೇಳಿದರು.

ಮಕ್ಕಳಲ್ಲಿ ದೈಹಿಕ ಶ್ರಮದ ಜೊತೆ ಮನೋವಿಜ್ಞಾನದ ಭಾವನೆಗಳನ್ನು ವೃದ್ಧಿಸಿ ಮಾನಸಿಕವಾದ ಸ್ಥಿತಿ ಆತ್ಮಸ್ಥೈರ್ಯ, ಆತ್ಮವಿಶ್ವಾಸ ಮೂಡಿಸುವ ಜೊತೆಗೆ ಮಕ್ಕಳ ಕಲಿಕೆಗೆ ಭದ್ರಬುನಾದಿ ಹಾಕಿ ಕೊಡುವ ಏಕಾಗ್ರತೆಯನ್ನು ಇಲ್ಲಿ ಕಲಿಯಲು, ರೂಪಿಸಿಕೊಳ್ಳಲು ಸಾಧ್ಯ. ದೈಹಿಕ ಶಿಕ್ಷಕರು ಈ ಬಗ್ಗೆ ಅತ್ಯಂತ ವಿಶೇಷವಾಗಿ ಗಮನಿಸಬೇಕು ತಮ್ಮನ್ನು ಮಕ್ಕಳು ಅತ್ಯಂತ ಸೂಕ್ಷ್ಮವಾಗಿ ಗುರುತಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳಿಗೆ ಮಾರ್ಗದರ್ಶಿಗಳಾಬೇಕು ಎಂದು ತಿಳಿಸಿದರು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎಂ.ಪ್ರಕಾಶ ಮಾತನಾಡಿ, ಆರೋಗ್ಯ, ಸ್ವಚ್ಛತೆ ಜೊತೆಗೆ ಶಿಸ್ತು ಹೇಳಿಕೊಡುವ ಜವಾಬ್ದಾರಿ ದೈಹಿಕ ಶಿಕ್ಷಕರ ಕರ್ತವ್ಯ ಆಗಿದೆ. ಮಕ್ಕಳ ಮನದಲ್ಲಿ ಸಂಸ್ಕಾರಯುತ ಭಾವನೆಗಳನ್ನು ರೂಪಿಸಿ, ಅವುಗಳನ್ನು ಕಾರ್ಯಗತಕ್ಕೆ ತರುವಂತೆ ಮಾಡುವ ಹೊಣೆಗಾರಿಕೆಯು ಶಿಕ್ಷರದ್ದು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಪ್ರಕಾಶ್ ಎಂ.ದೈಹಿಕ ಶಿಕ್ಷಣ ಅಧಿಕಾರಿ, ಬಿ.ಎಚ್.ನಿರಂಜನ್ ಮೂರ್ತಿ. ಶಿಕ್ಷಣ ಸಂಯೋಜಕರಾದ ಮೋಹನ್, ಸಂಪನ್ಮೂಲ ವ್ಯಕ್ತಿಗಳಾದ ಕಿರಣ್ ಕುಮಾರ್, ಸಂಘದ ಅಧ್ಯಕ್ಷ ಕಾಳನಾಯ್ಕ್,, ಆನಂದ್, ಕಾರ್ಯದರ್ಶಿ ತಿಮ್ಮಪ್ಪ ಮಹೇಶ್ ಹುಲ್ಲತ್ತಿ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ.ಹ.ತಿಮ್ಮನಹಳ್ಳಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ