ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಜಿಲ್ಲೆಯ ವಿ.ಆರ್.ಡಬ್ಯ್ಲು, ಎಂ.ಆರ್.ಡಬ್ಯ್ಲು ಹಾಗೂ ಯು.ಆರ್.ಡಬ್ಯ್ಲುಗಳ (ವಿವಿಧೋದ್ಧೇಶ ಪುನರ್ವಸತಿ) ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾನೂನುಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ದೇಶದಲ್ಲಿ ಹುಟ್ಟಿದ ಪ್ರತಿ ಮಗುವಿನಿಂದ ಹಿರಿಯ ನಾಗರಿಕರವರೆಗೂ ಪ್ರತಿಯೊಬ್ಬರಿಗೂ ಕಾನೂನುಗಳು ಅನ್ವಯವಾಗುತ್ತದೆ. ಯಾವುದೇ ಮಗು ಮಕ್ಕಳ ಹಕ್ಕುಗಳಿಂದ ವಂಚಿತವಾಗಬಾರದು. ಕೆಲ ಮಕ್ಕಳು ಬಾಲ್ಯ ವಿವಾಹ, ಬಾಲಕಾರ್ಮಿಕತೆ ಹಾಗೂ ಮಾನವ ಕಳ್ಳ ಸಾಗಾಣಿಕೆಗಳಿಗೆ ಬಲಿಯಾಗುತ್ತಿರುವುದು ಕಂಡುಬಂದಿದೆ. ಇದನ್ನು ಮನಗಂಡಿರುವ ಸರ್ಕಾರ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯಡಿ ೫೪ ಬಗೆಯ ಹಕ್ಕುಗಳನ್ನು ಜಾರಿ ಮಾಡಿದೆ. ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ಕಾರ್ಖಾನೆಯಲ್ಲಿ ದುಡಿಸಬಾರದು. ೧೪ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ದುಡಿಮೆಯಲ್ಲಿ ತೊಡಗದಂತೆ ಮಕ್ಕಳಿಗೆ, ಪೋಷಕರಿಗೆ ಮನವರಿಕೆ ಮಾಡಬೇಕು ಎಂದರು.ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದು ಶಿಕ್ಷಣ ಮಹತ್ವದ ಅರಿವು ಮೂಡಿಸಬೇಕು. ಶಾಲಾ ಕಾಲೇಜು ಹಂತದಲ್ಲಿ ಪೋಷಕರು, ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶಗಳ ಬಗ್ಗೆ ತಿಳಿಸಬೇಕು. ಮುಖ್ಯವಾಗಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣೆಯ ಅರಿವನ್ನು ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಅವರು ತಿಳಿಸಿದರು.
ವಿ.ಆರ್.ಡಬ್ಯ್ಲು. ಎಂ.ಆರ್.ಡಬ್ಯ್ಲು ಯು.ಆರ್.ಡಬ್ಯ್ಲು ಕಾರ್ಯಕರ್ತರು ಪ್ರೋತ್ಸಾಹಧನ ಪಡೆದು ಸೇವೆ ಸಲ್ಲಿಸುತ್ತಿದ್ದು, ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯಲು ಮೊದಲು ಮಾನಸಿಕವಾಗಿ ಸದೃಢರಾಗಬೇಕು. ಪ್ರತಿ ಗ್ರಾಮಪಂಚಾಯಿತಿಯಲ್ಲಿ ವಿಕಲಚೇತನ ಸಬಲೀಕರಣಕ್ಕಾಗಿ ಶೇ. ೫ರಷ್ಟು ಮೀಸಲಿರುವ ಅನುದಾನ ಸದ್ಭಳಕೆಯಾಗುವಂತೆ ಪುನರ್ವಸತಿ ಕಾರ್ಯಕರ್ತರು ನೋಡಿಕೊಳ್ಳಬೇಕು. ಗ್ರಾಮಮಟ್ಟದಲ್ಲಿ ಕೆಲಸ ನಿರ್ವಹಿಸುವ ವಿಕಲಚೇತನರಿಗೆ ಶಿಸ್ತು ಸಂಯಮದ ಜೊತೆಗೆ ತಾಳ್ಮೆಯೂ ಇರಬೇಕು. ವಿಕಲಚೇತನರ ಕಾನೂನುಗಳು ದುರುಪಯೋಗವಾಗದಂತೆ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಅವರು ಸಲಹೆ ಮಾಡಿದರು.
ಎಸ್.ಐ.ಆರ್.ಡಿ ಸಂಪನ್ಮೂಲ ವ್ಯಕ್ತಿ ಬಸವಣ್ಣ, ವಿ.ಆರ್.ಡಬ್ಯ್ಲು. ಎಂ.ಆರ್.ಡಬ್ಯ್ಲು ಹಾಗೂ ಯು.ಆರ್.ಡಬ್ಯ್ಲು ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
16ಸಿಎಚ್ಎನ್16