ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಶೈಕ್ಷಣಿಕ ಕಾರ್ಯಾಗಾರ ಉದ್ಘಾಟನೆಕನ್ನಡಪ್ರಭ ವಾರ್ತೆ ಕೊಟ್ಟೂರು
ಇಲ್ಲಿನ ಚಾನುಕೋಟಿ ಮಠದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪೂರಕವಾಗಿ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕೆಕೆಆರ್ಡಿಬಿ ಮತ್ತಿತರ ಸ್ಥಳೀಯ ಅನುದಾನವನ್ನು ಬಳಸಿಕೊಂಡು ಶಾಲೆಗಳ ಉನ್ನತೀಕರಣಗೊಳಿಸುವುದರ ಜೊತೆಗೆ ಖಾಸಗಿ ಶಾಲೆಗಳಲ್ಲಿರುವ ಸೌಲಭ್ಯಗಳಂತೆ ಕ್ಷೇತ್ರದ ಶಾಲೆಗಳನ್ನು ಡಿಜಿಟಲೀಕರಣಗೊಳಿಸುವ ಮತ್ತು ಲ್ಯಾಬ್ ಮತ್ತಿತರರ ಕಂಪ್ಯೂಟರ್ ಗಳನ್ನು ಅಳವಡಿಸಲು ₹80 ಕೋಟಿ ಅನುದಾನ ನೀಡಿರುವೆ ಎಂದರು.ಶಿಕ್ಷಕರಿಗೆ ಹಳೆಯ ಪಿಂಚಣಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರದ ಮೇಲೆ ಒತ್ತಡ ತರುವೆ ಎಂದರಲ್ಲದೇ ಕೊಟ್ಟೂರಿನಲ್ಲಿ ಬಿಇಒ ಕಚೇರಿ ತೆರೆಯಲು ಎಲ್ಲಾ ಬಗೆಯ ಆರ್ಥಿಕ ಸಂಪನ್ಮೂಲಗಳನ್ನು ತಮಗೆ ಲಭ್ಯವಾಗುತ್ತಿರುವ ಅನುದಾನವನ್ನು ಉಪಯೋಗಿಸಿಕೊಳ್ಳಲು ಸೂಚಿಸಿ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಲ್ಲಿ ಒತ್ತಾಯ ಪಡಿಸಿರುವೆ ಎಂದು ಹೇಳಿದರು.
ಉಪನ್ಯಾಸಕ ಡಾ. ಎ.ಎಂ. ರಾಜಶೇಖರಯ್ಯ ಮಾತನಾಡಿ, ಶಿಕ್ಷಣ ಕ್ಷೇತ್ರದ ಯಾವುದೇ ಅಂಗಕ್ಕೆ ಧಕ್ಕೆ ಬಂದರೂ ಅಭಿವೃದ್ಧಿಯ ಎಲ್ಲಾ ಬಗೆಯಲ್ಲಿ ಹಿನ್ನಡೆ ಕಾಣಬೇಕಾಗುತ್ತದೆ ಎಂದು ಎಚ್ಚರಿಸಿದರಲ್ಲದೆ, ಹಿಂದಿನ ಕಾಲದ ಗುರುಗಳ ಮಾರ್ಗದರ್ಶನ ಪ್ರಸ್ತುತ ಕಾಲದ ಶಿಕ್ಷಣ ಬೆಳವಣಿಗೆಗೆ ಖಂಡಿತ ಕಾರಣವಾಗಿದೆ ಎಂದರು.
ತಹಶೀಲ್ದಾರ್ ಅಮರೇಶ್ ಜಿ.ಕೆ., ತಾಪಂ ಇಒ ಡಾ. ಆನಂದ ಕುಮಾರ್, ಪಪಂ ಉಪಾಧ್ಯಕ್ಷ ಸಿ. ಸಿದ್ದಯ್ಯ, ಪಪಂ ಸದಸ್ಯರಾದ ಮರಬದ ಕೊಟ್ರೇಶ್, ಮಧ್ಯಾಹ್ನ ಉಪಾಹಾರ ಯೋಜನೆಯ ಸಹಾಯಕ ನಿರ್ದೇಶಕ ಕೆ.ಜಿ. ಆಂಜನೇಯ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ. ಮಲ್ಲಿಕಾರ್ಜುನ ಗೌಡ, ಶಿಕ್ಷಕರಾದ ಸಿದ್ದಪ್ಪ, ಶಿಶಿಕಲಾ, ನಾಗೇಶ್, ಬಿ. ಮತ್ತೇಶ್, ರವೀಂದ್ರ, ಮರಳನಗೌಡ ಮತ್ತಿತರರಿದ್ದರು.