ಕಲಿಕೆಯಲ್ಲಿ ಹಿಂದುಳಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಂಸದರಿಂದ ಕಲಿಕಾ ಕಿರಣ ಪುಸ್ತಕ ವಿತರಣೆಕನ್ನಡಪ್ರಭ ವಾರ್ತೆ ಹಗರಿಬೊಮ್ಮನಹಳ್ಳಿ
ಪಟ್ಟಣದ ಅಂಬಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ವೈಯಕ್ತಿಕ ಮೊತ್ತದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಲಿಕಾ ಕಿರಣ ಪರೀಕ್ಷಾ ಪೂರಕ ಪುಸ್ತಕ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಅಖಂಡ ಜಿಲ್ಲೆಯ ಮಕ್ಕಳು ಹಳ್ಳಿಯಿಂದ ದಿಲ್ಲಿಗೆ ಹೋಗುವಂತಹ ಶಿಕ್ಷಣವನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಶಿಕ್ಷಕರು ಗುಣಮಟ್ಟದ ಬೋಧನೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು. ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅನನ್ಯ. ಕಲಿಕಾ ಕಿರಣ ಪುಸ್ತಕ ಅಭಿಯಾನ ಗುಣಮಟ್ಟದ ಫಲಿತಾಂಶಕ್ಕೆ ಪೂರಕವಾಗಿದೆ. ನನ್ನ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ವಿಶೇಷ ಒತ್ತು ನೀಡುತ್ತೇನೆ ಎಂದರು.
ಕೆಎಂಎಫ್ ಅಧ್ಯಕ್ಷ ಎಸ್. ಭೀಮನಾಯ್ಕ ಮಾತನಾಡಿ, ಕಳೆದ ಬಾರಿ ತಾಲೂಕಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಕಲ್ಯಾಣ ಕರ್ನಾಟಕದಲ್ಲಿಯೇ ಪ್ರಥಮ ಸ್ಥಾನ ಪಡದಿರುವುದಕ್ಕೆ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ ಮತ್ತು ಶಿಕ್ಷಕರು ಪರಿಶ್ರಮವೇ ಕಾರಣವಾಗಿದೆ. ಕಳೆದ ಬಾರಿ ವೈಯಕ್ತಿಕ ಮೊತ್ತದಲ್ಲಿ ಕ್ಷೇತ್ರದ ಪ್ರತಿ ಕಾಲೇಜುಗಳಿಗೆ ಪಿಯುಸಿ ಇಂಗ್ಲಿಷ್ ಪ್ರಶ್ನೋತ್ತರ ಪುಸ್ತಕವನ್ನು ಉಚಿತವಾಗಿ ವಿತರಿಸಲಾಗಿತ್ತು. ಈ ಸಾಲಿನಲ್ಲಿಯೂ ಮುಂದುವರಿಸಲಾಗುವುದು. ಕಳೆದ ೧೦ ವರ್ಷಗಳ ಅವಧಿಯಲ್ಲಿ ಶಾಸಕರಾಗಿದ್ದಾಗ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಲಾಗಿತ್ತು ಎಂದರು.ತಹಸೀಲ್ದಾರ್ ಆರ್.ಕವಿತಾ ಮಾತನಾಡಿ, ಸಾಧಕ ವಿದ್ಯಾರ್ಥಿಗಳಿಗೆ ಪ್ರಬಲ ಇಚ್ಛಾಶಕ್ತಿ ಮತ್ತು ನಿಶ್ಚಿತ ಗುರಿ ಅಗತ್ಯ. ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯುವುದು ಕಲಿಕೆಯನ್ನು ಬಲಗೊಳಿಸುತ್ತದೆ ಎಂದರು.
ಉತ್ತಮ ಫಲಿತಾಂಶಕ್ಕೆ ಬಹುಮಾನ:
ಜಿಪಂ ಮಾಜಿ ಸದಸ್ಯ ಅಕ್ಕಿತೋಟೇಶ್, ತಾಪಂ ಮಾಜಿ ಸದಸ್ಯ ದೇವೇಂದ್ರಪ್ಪ, ಡಿಸಿಸಿ ಅಧ್ಯಕ್ಷ ಬಿ.ವಿ. ಶಿವಯೋಗಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬಿ.ನಾಯ್ಕ, ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ, ವಿಎಸ್ಎಸ್ಎನ್ ಅಧ್ಯಕ್ಷ ದಾದಮ್ಮನವರ ಬಸವರಾಜ, ಉಪಾಧ್ಯಕ್ಷ ಗಂಗಾಧರ ಸ್ವಾಮಿ ಇದ್ದರು. ಇಸಿಒ ಗುರುಬಸವರಾಜ, ಪ್ರಾಂಶುಪಾಲರಾದ ಯಮನೂರು ಸ್ವಾಮಿ, ಕಿತ್ನೂರು ಟಿ.ರಾಮಣ್ಣ ನಿರ್ವಹಿಸಿದರು.