ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮ, ಸಹೋದರತೆ, ರಾಷ್ಟ್ರೀಯ ಭಾವೈಕ್ಯತೆ ಮುಂತಾದ ಗುಣಗಳನ್ನು ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಭಾರತ್ ಸೇವಾದಳದ ಜಿಲ್ಲಾ ಅಧ್ಯಕ್ಷ ಜಿ.ಲಕ್ಷ್ಮೀಪತಿ ಹೇಳಿದರು.
ತಾಲೂಕಿನ ಪ್ರತಿಯೊಂದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸೇವಾದಳದ ಘಟಕವನ್ನು ಪ್ರಾರಂಭಿಸಲು ಪ್ರಯತ್ನಿಸುವುದಾಗಿ ಹೇಳಿದ ಅವರು, ಎಲ್ಲಾ ವಿದ್ಯಾರ್ಥಿಗಳಿಗೂ ಸೇವಾದಳದ ಸಮವಸ್ತ್ರವನ್ನು ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಲಾಗುದು ಎಂದು ತಿಳಿಸಿದರು.
ತಾಲೂಕಿನ ಸುಮಾರು 70 ಶಿಕ್ಷಕರಿಗೆ ತಾಲೂಕು ಸಂಘಟಿಕರಾದ ಸುರೇಶ್ ಹಾಗೂ ಜಿಲ್ಲಾ ಸಂಘಟಕರಾದ ರಾಜು ತರಬೇತಿ ನೀಡಿದರು. ಜಿಲ್ಲಾ ನಿರ್ದೇಶಕರಾದ ಮುನಿರಾಜು, ಗಂಗಾಧರ್, ತಾಲೂಕು ಪ್ರಭಾರಿ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಕೇಶವಮೂರ್ತಿ, ತಾಲೂಕು ನಿರ್ದೇಶಕರಾದ ವಿ.ಸಿ ಜ್ಯೋತಿ ಕುಮಾರ್, ಮಹೇಶ್, ಆನಂದ್, ಅಂಬರೀಶ್, ಮಮತಾ, ಸುಮಂಗಲ, ವೆಂಕಟೇಶ್, ಸಹನಾ ಮತ್ತಿತರರು ಹಾಜರಿದ್ದರು.27ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ಭಾರತ ಸೇವಾದಳದಿಂದ ನಡೆದ ಒಂದು ದಿನದ ಮಿಲಾದ್ ಶಿಬಿರವನ್ನು ಜಿಲ್ಲಾಧ್ಯಕ್ಷ ಜಿ.ಲಕ್ಷ್ಮೀಪತಿ ಉದ್ಘಾಟಿಸಿದರು.