ಸಮುದಾಯದ ಸ್ವಚ್ಛತೆಯಲ್ಲಿ ಯುವಕರ ಪಾತ್ರ ದೊಡ್ಡದು

KannadaprabhaNewsNetwork |  
Published : Sep 25, 2024, 12:49 AM IST
ಕಾರ್ಯಕ್ರಮವನ್ನು ಡಾ. ಬಸವರಾಜ ಬಳ್ಳಾರಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಗದುಗಿನ ಆದರ್ಶ ಶಿಕ್ಷಣ ಸಮಿತಿಯು ಹೆಸರಿಗೆ ತಕ್ಕ ಹಾಗೆ ಆದರ್ಶಮಯವಾಗಿ ಕಾರ್ಯಕ್ರಮ

ಗದಗ: ಸಮುದಾಯದ ಸ್ವಚ್ಛತೆಯಲ್ಲಿ ಯುವಕರ ಪಾತ್ರ ಬಹು ದೊಡ್ಡದು ಎಂದು ಹಿಂದುಳಿದ ವರ್ಗ ಹಾಗೂ ಕಲ್ಯಾಣ ಇಲಾಖೆಯ ವಿಸ್ತರಣಾ ಅಧಿಕಾರಿ ಡಾ. ಬಸವರಾಜ ಬಳ್ಳಾರಿ ಹೇಳಿದರು.

ನಗರದ ಎ.ಎಸ್.ಎಸ್ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದಿಂದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗದುಗಿನ ಆದರ್ಶ ಶಿಕ್ಷಣ ಸಮಿತಿಯು ಹೆಸರಿಗೆ ತಕ್ಕಹಾಗೆ ಆದರ್ಶಮಯವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ಈ ಸಂಸ್ಥೆ ಆದರ್ಶಮಯವಾಗಿದೆ. ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕವು ಅತ್ಯುತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುತ್ತಿದೆ. ದೇಶದಲ್ಲೆಡೆ ಸ್ವಚ್ಛ ಹಿ ಸೇವಾ ಅಭಿಯಾನ ನಡೆಯುತ್ತಿದೆ. ಪ್ರತಿಯೊಬ್ಬ ಯುವಕರು ಇದರ ಬಗ್ಗೆ ಅರಿತುಕೊಂಡು ಈ ಜಾಗೃತಿ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಮಹಾವಿದ್ಯಾಲಯದ ಪ್ರಾ. ಪ್ರೊ.ಕೆ. ಗಿರಿರಾಜಕುಮಾರ ಮಾತನಾಡಿದರು. ಉಪ ಪ್ರಾ.ಡಾ. ವಿ.ಟಿ. ನಾಯ್ಕರ, ಪ್ರೊ.ಬಿ.ಪಿ. ಜೈನರ್‌, ಮನೋಜ ದಲಬಂಜನ ಹಾಗೂ ಮಹಾವಿದ್ಯಾಲಯದ ಸ್ವಯಂ ಸೇವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು