ದೇಶದ ಪ್ರಗತಿಗೆ ಯುವಕರ ಪಾತ್ರ ಮಹತ್ವದ್ದು

KannadaprabhaNewsNetwork |  
Published : Jan 20, 2024, 02:01 AM IST
ಪೊಟೋ ಪೈಲ್ ನೇಮ್ ೧೯ಎಸ್‌ಜಿವಿ೩ ಶಿಗ್ಗಾವಿ ಪಟ್ಟಣದ ರಂಭಾಪುರಿ ಕಾಲೇಜಿನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಅಂತರ್ ಕಾಲೇಜು ಹಾವೇರಿ ಜಿಲ್ಲಾ ವಲಯ ಮಟ್ಟದ ೨೦೨೪ - ಯುವಜನೋತ್ಸವ ಕಾರ್ಯಕ್ರಮವನ್ನು ಪ್ರೊ. ಎಸ್ ಕೆ ಪವಾರ ಉದ್ಘಾಟಿಸಿದರು | Kannada Prabha

ಸಾರಾಂಶ

ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ಘಟ್ಟಗಳೆಂದರೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು, ಪಠ್ಯ ಪ್ರತಿ ದಿನ ಓದುವ ಅಭ್ಯಾಸವಾಗಿದೆ. ಪಠ್ಯೇತರ ಚಟುವಟಿಕೆಗಳಾದಂತಹ ರಾಷ್ಟ್ರೀಯ ಯುವಜನೋತ್ಸವ, ಕ್ರೀಡಾ ಸ್ಪರ್ಧಿಗಳಾಗಲಿ ರಾಷ್ಟ್ರೀಯ ಸೇವಾ ಯೋಜನೆ ಸೇರಿದಂತೆ ಇಂತಹ ಹಲವು ಘಟ್ಟಗಳು ವಿದ್ಯಾರ್ಥಿ ಜೀವನದ ಪಠ್ಯೇತರ ಚಟುವಟಿಕೆಗಳಲ್ಲಿ ಬರುತ್ತಿದ್ದು ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕು

ಶಿಗ್ಗಾವಿ: ದೇಶದ ಪ್ರಗತಿಗೆ ಯುವಕರ ಪಾತ್ರ ಮಹತ್ವದ್ದಾಗಿದ್ದು, ಇಂದಿನ ವಿದ್ಯಾರ್ಥಿಗಳು ದಾರ್ಶನಿಕರ, ಮಹನೀಯರ ಆತ್ಮ ಕಥೆಗಳನ್ನು ಓದಿ ಅವರು ನೀಡಿದ ಉಪದೇಶಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ತಮ್ಮ ವಿದ್ಯಾರ್ಥಿ ಜೀವನ ಸಾರ್ಥಕವಾಗಲು ಸಾಧ್ಯ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ ಪ್ರೊ. ಎಸ್.ಕೆ.ಪವಾರ ಹೇಳಿದರು.

ಪಟ್ಟಣದ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಅಂತರ್ ಕಾಲೇಜು ಹಾವೇರಿ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ಘಟ್ಟಗಳೆಂದರೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು, ಪಠ್ಯ ಪ್ರತಿ ದಿನ ಓದುವ ಅಭ್ಯಾಸವಾಗಿದೆ. ಪಠ್ಯೇತರ ಚಟುವಟಿಕೆಗಳಾದಂತಹ ರಾಷ್ಟ್ರೀಯ ಯುವಜನೋತ್ಸವ, ಕ್ರೀಡಾ ಸ್ಪರ್ಧಿಗಳಾಗಲಿ ರಾಷ್ಟ್ರೀಯ ಸೇವಾ ಯೋಜನೆ ಸೇರಿದಂತೆ ಇಂತಹ ಹಲವು ಘಟ್ಟಗಳು ವಿದ್ಯಾರ್ಥಿ ಜೀವನದ ಪಠ್ಯೇತರ ಚಟುವಟಿಕೆಗಳಲ್ಲಿ ಬರುತ್ತಿದ್ದು ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕು ಎಂದರು.

ಮಹಾವಿದ್ಯಾಲಯದ ಪ್ರಚಾರ್ಯ ಡಾ.ಬಿ.ವೈ. ತೊಂಡಿಹಾಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭೆಯನ್ನು ಕೇವಲ ಪ್ರಶಸ್ತಿಗಳಿಗೆ ಸೀಮಿತವಾಗಿರಿಸಿಕೊಳ್ಳದೆ ಇಂತಹ ಹಲವು ವೇದಿಕೆಗಳಲ್ಲಿ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಿದರೆ ಪ್ರಶಸ್ತಿಯು ತಾನಾಗಿಯೇ ಆರಸಿ ಬರುತ್ತದೆ. ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಸೂಕ್ತವಾಗಿ ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆ ವ್ಯಕ್ತಪಡಿಸಬೇಕು ಎಂದು ಹೇಳಿದರು.

ಕಾಲೇಜಿನ ನಿವೃತ್ತ ಪ್ರಚಾರ್ಯ ಪಿ.ಸಿ.ಹಿರೇಮಠ ಉಪನ್ಯಾಸ ನೀಡಿದರು. ಯುವಜನೋತ್ಸವ ಸಂಯೋಜಕ ಡಾ. ಶ್ರೀಶೈಲ ಹುದ್ದಾರ, ಸಹ ಸಂಯೋಜಕ ಡಾ.ಎಚ್.ಕೆ.ವಿನಯ, ಧಾರವಾಡ ಕವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಸಹಾಯಕ ಅಧಿಕ್ಷಕ ಸಂತೋಷ ಕೆ., ಮತ್ತು ಅಧ್ಯಕ್ಷ ಎಸ್ ಕದಾಣಿ, ಡಾ.ಡಿ.ಎ.ಗೊಬ್ಬರಗುಂಪಿ, ಸಿ.ಎಸ್.ತಾವರಗುಂದಿ, ಪ್ರೊ.ಬಿ.ಎಂ.ಮುಳಗುಂದ, ಜಿ. ಎನ್‌. ಎಲಿಗಾರ, ಮಲ್ಲಪ್ಪ ರಾಮಗೇರಿ, ಶೃತಿ ಕಟ್ಟಿ, ಹಾಗೂ ವಿವಿಧ ಮಹಾವಿದ್ಯಾಲಯದಿಂದ ಆಗಮಿಸಿದ ಪ್ರಾಚಾರ್ಯರು ಮತ್ತು ಸಂಯೋಜಕರು ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ