ಗದಗ: ಮನುಷ್ಯನ ಸರ್ವ ಇಂದ್ರಿಯಗಳಲ್ಲಿ ಕಣ್ಣು ಅತ್ಯಂತ ಮಹತ್ವದ ಅಂಗವಾಗಿದ್ದು ಕಣ್ಣಿನ ಸಂರಕ್ಷಣೆ, ಕಾಳಜಿ ವಹಿಸಬೇಕು. ಈ ವಿಷಯದಲ್ಲಿ ರೋಟರಿ ಕ್ಲಬ್ನವರು ಮಾಡುತ್ತಿರುವ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಎಂದು ಗದಗ ತೋಂಟದಾರ್ಯ ಮಠದ ಜ.ಡಾ. ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಈ ಮೊದಲು ಗೋದಾನ, ಭೂದಾನ, ಅನ್ನದಾನ, ರಕ್ತದಾನ, ನೇತ್ರದಾನ ಇತ್ತೀಚೆಗೆ ದೇಹದಾನ ಹೀಗೆ ದಾನಗಳ ವಿಸ್ತಾರವು ಹೆಚ್ಚುತ್ತಿದ್ದು ದಾನಗುಣಕ್ಕೆ ಹೊಸ ಪರಿಕಲ್ಪನೆಯೂ ಬಂದಿದೆ. ಆ ಮೂಲಕ ಸಮಾಜಕ್ಕೆ ಒಳಿತಾಗುತ್ತ ಬಂದಿದೆ. ಆಧುನಿಕತೆಯ ಇಂದಿನ ದಿನಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ಧಿ ಹೊಂದಿದಂತೆ ವೈದ್ಯಕೀಯ ಕ್ಷೇತ್ರದಲ್ಲೂ ಹೊಸ ಹೊಸ ಆವಿಷ್ಕಾರಗಳು, ಅತ್ಯಾಧುನಿಕ ಯಂತ್ರೋಪಕರಣಗಳು ಜನರ ಆರೋಗ್ಯವನ್ನು ಸುಧಾರಿಸುವಲ್ಲಿ ಗಣನೀಯ ಪಾತ್ರ ವಹಿಸಿವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ.ಶೇಖರ ಸಜ್ಜನರ ಮುಂತಾದವರು ಮಾತನಾಡಿದರು. ಉಚಿತ ನೇತ್ರ ಶಸ್ತ್ರಶಿಬಿರಗಳು ಯಶಸ್ವಿಯಾಗಿ ನಡೆದು ಬರಲು ಕಾರಣರಾದ ದಾನಿಗಳು, ವೈದ್ಯರು ಮತ್ತು ಸಿಬ್ಬಂದಿಯನ್ನು ಗೌರವಿಸಲಾಯಿತು. ವೇದಿಕೆಯ ಮೇಲೆ ಶಿಬಿರದ ಪ್ರಾಯೋಜಕರಾದ ನೀಲಮ್ಮ ಪ್ರಭಣ್ಣ ಹುಣಶಿಕಟ್ಟಿ ದಂಪತಿಗಳು ಉಪಸ್ಥಿತರಿದ್ದರು.
ಕುಂದ್ರಾಳಹಿರೇಮಠ ಪ್ರಾರ್ಥಿಸಿದರು, ರೋಟರಿ ಕ್ಲಬ್ ಅಧ್ಯಕ್ಷ ಡಾ.ಆರ್.ಬಿ.ಉಪ್ಪಿನ ಸ್ವಾಗತಿಸಿದರು. ಡಾ.ಉಮೇಶ ಪುರದ ಹಾಗೂ ವಿಶ್ವನಾಥ ಯಳಮಲಿ ಪರಿಚಯಿಸಿದರು. ಶ್ರೀಧರ ಸುಲ್ತಾನಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಲಕೃಷ್ಣ ಕಾಮತ್ ನಿರೂಪಿಸಿದರು. ಶಿವಾಚಾರ್ಯ ಹೊಸಳ್ಳಿಮಠ ವಂದಿಸಿದರು.ಡಾ.ವಿಜಯಕುಮಾರ ಸಜ್ಜನರ, ಡಾ. ಬಸರಿಗಿಡದ, ಡಾ.ವ್ಹಿ.ಬಿ. ಹಿರೇಮಠ, ಡಾ. ಮೇರವಾಡೆ, ಡಾ. ರಾಕೇಶ, ಡಾ.ಜಿ.ಬಿ. ಪಾಟೀಲ, ಡಾ. ಜ್ಯೋತಿ ಪಾಟೀಲ, ಕಾರ್ಯದರ್ಶಿ ಸಂತೋಷ ಅಕ್ಕಿ, ಡಾ. ಪ್ರದೀಪ ಉಗಲಾಟದ, ಶ್ರೀಧರ ಧರ್ಮಾಯತ, ಸಂಜಯ ಬಾಗಮಾರ, ಅರವಿಂದಸಿಂಗ್ ಬ್ಯಾಳಿ, ಚನ್ನವೀರಪ್ಪ ಹುಣಶಿಕಟ್ಟಿ, ನರೇಶ್ ಜೈನ್, ಎಚ್.ಎಸ್. ಪಾಟೀಲ, ಚೇಂಬರ್ ಅಧ್ಯಕ್ಷ ತಾತನಗೌಡ ಪಾಟೀಲ, ನಾಗರತ್ನಾ ಮಾರನಬಸರಿ, ಪ್ರೀತಿ ಶಿವಪ್ಪಯ್ಯನಮಠ, ರಾಣಿ ಚಂದಾವರಿ ಸೇರಿದಂತೆ ರೋಟರಿ, ಇನ್ನರ್ವ್ಹೀಲ್ ಕ್ಲಬ್ನ ಸದಸ್ಯರು ಸೇರಿದಂತೆ ನೇತ್ರಚಿಕಿತ್ಸಾ ಫಲಾನುಭವಿಗಳು ಪಾಲ್ಗೊಂಡಿದ್ದರು.