ವೀರ ಯೋಧರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು

KannadaprabhaNewsNetwork |  
Published : May 07, 2026, 01:30 AM IST
ಪೋಟೊ: 6 ಹೆಚ್‌ಎಸ್‌ಕೆ 1ಹೊಸಕೋಟೆ ನಗರದಲ್ಲಿರುವ ವಹ್ನಿಕುಲ ತಿಗಳ ಸಂಘದ ಮಾಜಿ  ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್. ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹುತಾತ್ಮ ವೀರ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಗೌರವ ಸಮರ್ಪಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ದೇಶ ಸೇವೆ ಮಾಡುವ ಭಾರತೀಯ ಯೋಧರ ತ್ಯಾಗ ಹಾಗೂ ಬಲಿದಾನಕ್ಕೆ ನಾವು ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರು ಮತ್ತು ಅವರ ಕುಟುಂಬಕ್ಕೆ ಗೌರವ ಸಮರ್ಪಣೆ ನಮ್ಮ ಕರ್ತವ್ಯ ಎಂದು ವಹ್ನಿಕುಲ ತಿಗಳ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು

ಹೊಸಕೋಟೆ: ದೇಶ ಸೇವೆ ಮಾಡುವ ಭಾರತೀಯ ಯೋಧರ ತ್ಯಾಗ ಹಾಗೂ ಬಲಿದಾನಕ್ಕೆ ನಾವು ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರು ಮತ್ತು ಅವರ ಕುಟುಂಬಕ್ಕೆ ಗೌರವ ಸಮರ್ಪಣೆ ನಮ್ಮ ಕರ್ತವ್ಯ ಎಂದು ವಹ್ನಿಕುಲ ತಿಗಳ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು.

ನಗರದ ಖಾಸಗಿ ಸಭಾಭವನದಲ್ಲಿ ಹುಟ್ಟುಹಬ್ಬದ ಅಂಗವಾಗಿ 1999ರ ಕಾರ್ಗಿಲ್ ಯುದ್ದದಲ್ಲಿ ಮಡಿದ ವೀರ ಯೋಧ ಯಶವಂತ್ ದುರ್ಗಪ್ಪ ಕೊಲ್ಕಾರ್ ಹಾಗೂ ಸೇನೆಯಲ್ಲಿದ್ದು ಅಪಘಾತದಲ್ಲಿ ಮೃತಪಟ್ಟ ಮಹದೇವ್ ಈಶ್ವರ್ ಯರಗಟ್ಟಿ ಕುಟುಂಬಕ್ಕೆ ತಲಾ 1 ಲಕ್ಷ ಆರ್ಥಿಕ ನೆರವು ನೀಡಿ ಗೌರವಿಸಿ ಮಾತನಾಡಿದರು.

ತಂದೆ-ತಾಯಿ ಕುಟುಂಬದ ಸದಸ್ಯರನ್ನು ಬಿಟ್ಟು ದೇಶದ ಗಡಿ ಕಾಯುವ ಪ್ರತಿಯೊಬ್ಬ ಯೋಧ ಕೂಡ ನಮಗೆ ದೇವರ ಸಮಾನ. ದೇಶದ ಅಸಂಖ್ಯಾತ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ದೇಶ ಸೇವೆಗೆ ಕಳುಹಿಸಿ ಅವರನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರನ್ನು ಗೌರವಿಸಬೇಕು. ಸಮಾಜದಲ್ಲಿ ಸ್ಥಿತಿವಂತರು ದುಂದುವೆಚ್ಚ ಮಾಡಿ ಆಚರಣೆ ಮಾಡುವ ಬದಲು ಮೃತ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಹೂಡಿ ವಿಜಯ್ ಕುಮಾರ್ ಮಾತನಾಡಿ, ಗಾಳಿ ಮಳೆ ಲೆಕ್ಕಿಸದೆ ದೇಶ ಭಕ್ತಿಯನ್ನೆ ಉಸಿರಾಗಿಸಿಕೊಂಡು ಎದುರಾಳಿಗಳ ವಿರುದ್ದ ಹೋರಾಡಿ ಇತಿಹಾಸ ಸೃಷ್ಠಿಸುವ ವೀರ ಯೋಧರ ಸ್ಮರಣೆ ನಿತ್ಯ ನಿರಂತರವಾಗಬೇಕು. ಅವರ ಕುಟುಂಬಗಳಿಗೆ ಆತ್ಮಸ್ಥೆರ್ಯತುಂಬಬೇಕು. ಡಾ.ಸಿ.ಜಯರಾಜ್ ಅವರ ಕಾರ್ಯ ಇತರರಿಗೆ ಪ್ರೇರಣೆಯಾಗಿದೆ ಎಂದರು.

ಇದೇ ಸಂಧರ್ಭದಲ್ಲಿ ಜಯರಾಜ್ ಪತ್ನಿ ಲಕ್ಷ್ಮೀ, ಪುತ್ರ ಸಚಿನ್, ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿವಿ.ಭೈರೇಗೌಡ, ಯೋಜನಾ ಪ್ರಾಧಿಕಾರದ ನಿರ್ದೇಶಕ ಡಾ ಎಚ್.ಎಂ.ಸುಬ್ಬರಾಜ್, ಉದ್ಯಮಿ ಸುಬಾಷ್ ಗೌಡ, ಯುವ ಬ್ರಿಗೇಡ್ ಸಂಚಾಲಕ ಆನಂದ್ ಮರಿಗೌಡ ಇತರರು ಹಾಜರಿದ್ದರು.

ಪೋಟೊ: 6 ಹೆಚ್‌ಎಸ್‌ಕೆ 1

ಹೊಸಕೋಟೆಯಲ್ಲಿ ವಹ್ನಿಕುಲ ತಿಗಳ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ಸಿ.ಜಯರಾಜ್‌ ಹುಟ್ಟುಹಬ್ಬದ ಪ್ರಯುಕ್ತ ಹುತಾತ್ಮ ವೀರ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಗೌರವಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಲಿತಾಂಶ ರದ್ದು ಪಡಿಸಿ ಪ್ರಜಾಪ್ರಭುತ್ವ ಎತ್ತಿ ಹಿಡಿಯಲಿ: ಎಂ.ಆರ್.ರವಿಶಂಕರ್ ಆಗ್ರಹ
ಮಂಡ್ಯ ಜಿಲ್ಲೆಯ ಬಹುತೇಕ ಆರ್‌ಒ ಪ್ಲಾಂಟ್‌ಗಳು ನಿರುಪಯುಕ್ತ