ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಜಿ.ಪಂ ಚಿಕ್ಕಬಳ್ಳಾಪುರ,ಶಾಲಾ ಶಿಕ್ಷಣ ಇಲಾಖೆ ,ಶಿಕ್ಷಕರ ದಿನಾಚರಣೆ ಆಚರಣೆಯ ಸಮಿತಿ ಹಾಗೂ ಖಾಸಗಿ ಶಾಲೆಗಳು ಒಕ್ಕೂಟ ಬಾಗೇಪಲ್ಲಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಗುರುವಿಗೆ ಉನ್ನತ ಸ್ಥಾನಶಿಕ್ಷಕ ಕೇವಲ ವ್ಯಕ್ತಿಯಲ್ಲ, ಒಬ್ಬ ಶಿಕ್ಷಕ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಇದ್ದಂತೆ. ಶಿಕ್ಷಕರಿಗೆ ಇಡೀ ವಿಶ್ವದಲ್ಲಿಯೇ ಗುರುಸ್ಥಾನ ನೀಡಿ ಗೌರವಿಸುತ್ತಿದೆ. ಇದು ಬೇರೆ ಯಾವುದೇ ವೃತ್ತಿಯಲ್ಲಿ ಇಂತಹ ಗೌರವ ಸಿಗಲ್ಲ ಈ ಗೌರವವನ್ನು ಕಾಪಾಡಿಕೊಳ್ಳಬೇಕೆಂದ ಅವರು ಶಿಕ್ಷಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆಗಳನ್ನು ತುಂಬದೆ ಸಕಾರಾತ್ಮಕ ಭಾವನೆಗಳನ್ನು ತುಂಬುವ ಕೆಲಸ ಮಾಡಬೇಕು ಎಂದರು.
ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ
ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ, ತಾ.ಪಂ ಇಒ ರಮೇಶ್, ಬಿಇಒ ಎನ್.ವೆಂಕಟೇಶಪ್ಪ, ವೆಂಕಟರಾಮ್, ಆರ್.ಹನುಮಂತ ರೆಡ್ಡಿ, ನ್ಯೂಹಾರಿಜನ್ ಶಾಲೆಯ ಶ್ರೀನಿವಾಸ ರೆಡ್ಡಿ, ಯಂಗ್ ಇಂಡಿಯಾಗ ಶಾಲೆ ವ್ಯವಸ್ಥಾಪಕ ಪ್ರೋ. ಡಿ.ಶಿವಣ್ಣ, ಪಿ.ವಿ.ವೆಂಕಟರವಣ,ಸಿ.ವೆಂಕಟರಾಯಪ್ಪ ,ಡಿ.ಎನ.ರಘುನಾಥ್, ಪುರಸಭೆ ಅಧ್ಯಕ್ಷ ಎ.ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು, ಸದಸ್ಯರಾದ ಎ.ನಂಜುಂಡಪ್ಪ ಮತ್ತಿತರರು ಇದ್ದರು.