ಕನ್ನಡಪ್ರಭ ವಾರ್ತೆ ಪುತ್ತೂರು
ಇಂದು ಜಾತಿಯ ಜತೆಗೆ ಅಂತಸ್ತಿಗಾಗಿ ಹೋರಾಟ ನಡೆಸುವ ಮನೋಭಾವ ಹೆಚ್ಚಾಗುತ್ತಿದೆ. ಇಂತಹ ಮಾನಸಿಕ ದೌರ್ಬಲ್ಯಗಳ ವಿರುದ್ಧ ಹೋರಾಡುವ ಚಿಂತನೆ ನಮ್ಮಲ್ಲಿ ಬೆಳೆಯಬೇಕಾಗಿದೆ. ಹಾಗಾದಾಗ ಮಾತ್ರ ಜೀವನದಲ್ಲಿ ನಾವು ಮುಂದೆ ಬರಬಹುದಾಗಿದೆ. ಇದಕ್ಕಾಗಿ ಮೊದಲು ನಮ್ಮ ದೌರ್ಬಲ್ಯಗಳನ್ನು ನಾವು ಅರಿತುಕೊಳ್ಳಬೇಕು. ಜಾತಿಗಳ ಅಭಿವೃದ್ಧಿಗಾಗಿ ನೀಡಲಾಗುವ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು. ಇದು ಅಭಿವೃದ್ಧಿಗೆ ಪ್ರೇರಣೆಯಾಗಬೇಕು ಎಂದು ಅವರು ಹೇಳಿದರು.
ಸವಿತಾ ಸಮಾಜದ ಮುಖಂಡ ರವೀಂದ್ರ ಭಂಡಾರಿ ಪಾಣಾಜೆ ಮಾತನಾಡಿ, ಸವಿತಾ ಸಮಾಜ ಮನುಷ್ಯನ ಹುಟ್ಟಿನಿಂದ ಸಾಯುವ ತನಕವೂ ಬೇಕಾಗುತ್ತದೆ. ಆದರೆ ಈ ಸಮಾಜವನ್ನು ಆರ್ಥಿಕತೆ ಮತ್ತು ಶಿಕ್ಷಣದ ಕೊರತೆ ಕಾಡುತ್ತಿದೆ. ಪುತ್ತೂರಿನಲ್ಲಿ ಸವಿತಾ ಸಮಾಜಕ್ಕೆ ಒಂದು ಸಮುದಾಯ ಭವನ ನಿರ್ಮಾಣವಾಗಬೇಕು. ಅಧಿಕಾರಿ ವರ್ಗ ಈ ನಿಟ್ಟಿನಲ್ಲಿ ಯೋಚನೆ ಮಾಡಬೇಕು ಎಂದರು.ಬಂಜಾರ ಸಮಾಜದ ಮುಖಂಡರಾದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ನಿರ್ದೇಶಕ ರೂಪ್ಲಾ ನಾಯಕ್ ಅವರು ಮಾತನಾಡಿ, ಬಂಜಾರ ಸಮಾಜದಲ್ಲಿ ಶೇ.೧೦ ರಷ್ಟು ಮಂದಿ ಮಾತ್ರ ಅಭಿವೃದ್ಧಿಯಾಗಿದ್ದಾರೆ, ಉಳಿದ ಶೇ.೯೦ ಮಂದಿ ಈಗಲೂ ಕಷ್ಟದಾಯಕ ಪರಿಸ್ಥಿತಿಯಲ್ಲೇ ಇದ್ದಾರೆ. ಈ ಸಮಾಜಕ್ಕೆ ಪೂರಕವಾದ ವ್ಯವಸ್ಥೆಗಳು ಬೇಕಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ತಾಪಂ ಯೋಜನಾಧಿಕಾರಿ ಸುಕನ್ಯಾ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ದಯಾನಂದ ಸ್ವಾಗತಿಸಿದರು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು.