ಶಾಲಾ ಸಂಸತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾದರಿ: ಜಗದೀಶಪ್ಪ ಅವರಾದಿ

KannadaprabhaNewsNetwork |  
Published : Jul 09, 2024, 12:56 AM IST
೦೭ಕೆಆರ್‌ಟಿ೧-ಎ ಕಾರಟಗಿ ಪಟ್ಟಣದ ಪಟ್ಟಣದ ಪ್ರತಿಷ್ಠಿತ ಶ್ರೀ ಶರಣಬಸವೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಯಿತು. | Kannada Prabha

ಸಾರಾಂಶ

ಶಾಲಾ ಮಕ್ಕಳಲ್ಲಿ ನಾಗರಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ.

ಶರಣಬಸವೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಗೆ ಚಾಲನೆ

ಕನ್ನಡಪ್ರಭ ವಾರ್ತೆ ಕಾರಟಗಿ

ಶಾಲಾ ಮಕ್ಕಳಲ್ಲಿ ನಾಗರಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ ಎಂಬುದನ್ನು ತಿಳಿಸುವುದೇ ಶಾಲಾ ಸಂಸತ್ತು ಕಾರ್ಯಕ್ರಮದ ಮೂಲ ಉದ್ದೇಶ ಎಂದು ಸಂಸ್ಥೆಯ ಉಪಾಧ್ಯಕ್ಷ ಜಗದೀಶಪ್ಪ ಅವರಾದಿ ಹೇಳಿದರು.

ಪಟ್ಟಣದ ಪ್ರತಿಷ್ಠಿತ ಶ್ರೀ ಶರಣಬಸವೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಶಾಲಾ ಸಂಸತ್ತು ಕಾರ್ಯಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಮಾದರಿಯಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ತರಗತಿ ಆರಂಭವಾಗುತ್ತಿದ್ದಂತೆ ಚುನಾವಣಾ ಪ್ರಕ್ರಿಯೆ ಆರಂಭವಾಯಿತು, ಶಾಲೆಯಲ್ಲಿ ಮತಗಟ್ಟೆ ನಿರ್ಮಿಸಲಾಗಿತ್ತು. ಮತದಾರ ಮಕ್ಕಳ ಪಟ್ಟಿ ಸಿದ್ಧವಡಿಸಿ, ಆಧಾರ್ ಕಾಡ್‌ಗಳನ್ನು ಗುರುತಿನ ಚೀಟಿಗಳಂತೆ ಪರಿಶೀಲಿಸಿ ತೋರ್ ಬೆರಳಿಗೆ ಸಾಮಾನ್ಯ ಇಂಕಿನ ಶಾಹಿ ಹಚ್ಚಲಾಯಿತು. ಸರತಿ ಸಾಲಿನಲ್ಲಿ ನಿಂತಿದ್ದ ಮಕ್ಕಳು, ಶಿಸ್ತಿನಿಂದ ಮತ ಚಲಾಯಿಸಿದರು. ಮತದಾನಕ್ಕೂ ಮೊದಲು ಶಾಲೆಯ ಹಲವು ವಿದ್ಯಾರ್ಥಿನಿಯರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಹಲವು ವಿದ್ಯಾರ್ಥಿಗಳನ್ನು ಶಾಲಾ ಸಂಸದರನ್ನಾಗಿ ಆಯ್ಕೆ ಮಾಡಲಾಯಿತು.

ಮುಖ್ಯ ಚುನಾವಣಾಧಿಕಾರಿಯಾಗಿ ಲಿಂಗರಾಜು ಮೇಲಿನಮನಿ ಕಾರ್ಯನಿರ್ವಹಿಸಿದರು.

ಜಿಲ್ಲಾ ಮತದಾನ ರಾಯಭಾರಿ ಆಗಿದ್ದ ಮೆಹಬೂಬ ಕಿಲ್ಲೇದಾರ್ ಹೊಸ ತಂತ್ರಜ್ಞಾನದ ಇವಿಎಂ ಮೂಲಕ ಚುನಾವಣೆ ಮಾಹಿತಿ ನೀಡಿ ಚುನಾವಣೆ ಪ್ರಾರಂಭ ಮಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಸೋಮಲಪುರ, ನಿರ್ದೇಶಕ ರುದ್ರೇಶ್ ಗಣಾಚಾರಿ, ಮುಖ್ಯಗುರು ಅಮರೇಶ ಪಾಟೀಲ್, ವೀರೇಶ್ ಮ್ಯಾಗೇರಿ, ಮಹಾಂತೇಶ್ ಗದ್ದಿ, ಶರಣಮ್ಮ ಅಂಗಡಿ, ಪಂಪಾಪತಿ, ಗಿರೀಶ್, ಸುವರ್ಣ, ಠಾಕು ನಾಯ್ಕ, ರಮೇಶ್, ಶಿವಲೀಲಾ, ರೋಹಿಣಿ, ಹುಸೇನ್ ಪಿರಿ, ಪಂಪಾಪತಿ, ಶೈಲಜಾ, ಶಿಲ್ಪಾ, ನಾಗಭೂಷಣ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ನೀರು ದರ ಶೇ.3 ಹೆಚ್ಚಳ
ಇಂದು ವರ್ಣರಂಜಿತ ಬೆಂಗಳೂರು ಕರಗ