ಸರ್ಕಾರಿ ಶಾಲೆಯಿಂದ ಗುಣಮಟ್ಟದ ಶಿಕ್ಷಣ ದೊರೆಯಲಿದೆ: ಬಿಇಒ ಆರ್.ಪುಷ್ಪಾ

KannadaprabhaNewsNetwork |  
Published : May 31, 2025, 12:31 AM IST
ಫೋಟೋ:೩೦ಕೆಪಿಸೊರಬ-೦೧ : ಸೊರಬ ಪಟ್ಟಣದ ಹಳೇಸೊರಬ ಗ್ರಾಮದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಬಿಇಒ ಆರ್. ಪುಷ್ಪಾ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತç ವಿತರಿಸಿದರು. | Kannada Prabha

ಸಾರಾಂಶ

ಪಿಎಂಶ್ರೀ ಯೋಜನೆ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಇದರ ಆಶಯವಾಗಿದ್ದು, ಈ ಯೋಜನೆ ಮೂಲಕ ಶಾಲೆಗೆ ಹಲವು ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ ಹೇಳಿದರು.

ಶಾಲೆ ಪ್ರಾರಂಭೋತ್ಸವ । ಮಕ್ಕಳ ಶೈಕ್ಷಣಿಕ ವರ್ಷದ ಆರಂಭ । ಪಠ್ಯ ಪುಸ್ತಕ, ಶಾಲಾ ಸಮವಸ್ತ್ರ ವಿತರಣೆ

ಕನ್ನಡಪ್ರಭ ವಾರ್ತೆ ಸೊರಬ

ಪಿಎಂಶ್ರೀ ಯೋಜನೆ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಇದರ ಆಶಯವಾಗಿದ್ದು, ಈ ಯೋಜನೆ ಮೂಲಕ ಶಾಲೆಗೆ ಹಲವು ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ ಹೇಳಿದರು.

ಪಟ್ಟಣದ ಹಳೇಸೊರಬ ಗ್ರಾಮದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಭಾಗವಹಿಸಿ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಮಾತನಾಡಿದರು.

ತಾಲೂಕಿನಲ್ಲಿ ಹಳೇಸೊರಬ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಣ್ಣೆಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಪಿಎಂಶ್ರೀ ಯೋಜನೆಗಳಿಗೆ ಒಳಪಡುತ್ತವೆ. ಕಳೆದ ೨ ವರ್ಷಗಳಿಂದ ಪ್ರಾರಂಭವಾದ ಈ ಯೋಜನೆಗೆ ಪ್ರತಿ ವರ್ಷ ೨೦ ರಿಂದ ೨೫ ಲಕ್ಷ ರೂ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುತ್ತದೆ. ಇದನ್ನು ಶಾಲಾ ನಿರ್ವಹಣೆ ಸೇರಿದಂತೆ ಹಲವು ಮೂಲ ಸೌಲಭ್ಯಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಇದರ ಆಶಯವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಬಾಂಧವ್ಯ ಎಂದೂ ಬೇರ್ಪಡಿಸಲಾಗದ ಸಂಬಂಧವಾಗಿದ್ದು, ಶಿಕ್ಷಕರ ತ್ಯಾಗವು ಸಾಕಷ್ಟಿದೆ. ಗ್ರಾಮೀಣ ಭಾಗದ ಅನೇಕ ವಿದ್ಯಾರ್ಥಿಗಳು ಸೌಲಭ್ಯಗಳ ಕೊರತೆಯ ನಡುವೆಯೂ ಸಾಧನೆ ಮಾಡಿದ ಉದಾಹರಣೆಗಳಿವೆ. ಸರ್ಕಾರಿ ಶಾಲೆಯಲ್ಲಿ ಉತ್ತಮವಾದ ಶಿಕ್ಷಣ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸರ್ಕಾರವು ಮಕ್ಕಳ ಶಿಕ್ಷಣಕ್ಕಾಗಿ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಸಮಾಜದ ಸತ್ಪ್ರಜೆಗಳಾಗಿ ಭವಿಷ್ಯದಲ್ಲಿ ಸಾಧನೆ ಮಾಡಬೇಕು. ಶಾಲಾ ಪ್ರಾರಂಭದ ಜತೆಗೆ ಮಕ್ಕಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.

ತಾಲೂಕಿನ ಎಲ್ಲಾ ಶಾಲೆಗಳಲ್ಲೂ ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಎರಡು ತಿಂಗಳ ರಜೆ ಬಳಿಕ ಮಕ್ಕಳು ಶಾಲೆಗೆ ಆಗಮನದ ವೇಳೆ ಹೊಸ ಉಡುಪುಗಳನ್ನು ತೊಟ್ಟು ಉತ್ಸಾಹದಿಂದ ಆಗಮಿಸಿದ್ದರು. ಶಿಕ್ಷಕರು ಮಕ್ಕಳಿಗೆ ಹೂ ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಶಾಲಾಭಿವೃದ್ಧಿ ಸಮಿತಿಯವರು ಉತ್ತಮ ಸಹಕಾರ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ, ಸದಸ್ಯರಾದ ಶಶಿಧರಗೌಡ್ರು, ಪ್ರವೀಣ್‌ಗೌಡ್ರು, ಎಂ.ಪಿ.ಉಮೇಶ್, ವೈ.ಜಿ. ಗುರುಮೂರ್ತಿ, ವಿಜಯಕುಮಾರಿ, ಬಿಸಿಎಂ ಇಲಾಖೆಯ ನೋಡಲ್ ಅಧಿಕಾರಿ ಕುಮುದಾ, ಆರೋಗ್ಯ ಇಲಾಖೆ ನೋಡಲ್ ಅಧಿಕಾರಿ ಮಮತಾ ನಾಯ್ಕ, ಮುಖ್ಯ ಶಿಕ್ಷಕ ಗಣಪತಿ ನಾಯ್ಕ, ಸಹ ಶಿಕ್ಷಕರಾದ ಸಿ.ಪಿ.ಸದಾನಂದ, ಶಾಂತ ಗೌಡರ್, ಡಿ.ವೈ.ಪ್ರಭಾವತಿ, ಎನ್. ರೇಖಾ, ಎಂ.ಪಿ.ಅಕ್ಕನಾಗು, ಕುಸುಮ ಶಾಲಾಭಿವೃದ್ಧಿ ಸಮಿತಿಯವರು ಮತ್ತು ಪೋಷಕರು ಹಾಜರಿದ್ದರು.

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು