ಯೋಗ ವಿದ್ಯೆಯು ಋಷಿ-ಮುನಿಗಳ ಕೊಡುಗೆ: ಡಾ. ಅಶೋಕ ಮತ್ತಿಗಟ್ಟಿ

KannadaprabhaNewsNetwork |  
Published : Jun 22, 2024, 12:56 AM IST
ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿಯೋಗ ದಿನಾಚರಣೆ ಕಾರ್ಯಕ್ರಮವನ್ನು ಡಾ. ಅಶೋಕ ಮತ್ತಿಗಟ್ಟಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ತರಬೇತಿ ಹಾಗೂ ಆಯುಷ್ ಪರಿಚಯ ಕಾರ್ಯಕ್ರಮ ನಡೆಯಿತು.

ಗದಗ: ಹಲವಾರು ವರ್ಷಗಳಿಂದಲೂ ನಮ್ಮ ದೇಶದಲ್ಲಿ ಆಚರಣೆಯಲ್ಲಿರುವ ಯೋಗ ವಿದ್ಯೆಯು ಋಷಿ-ಮುನಿಗಳಿಂದ ಸನ್ಮಾರ್ಗ ಹಾಗೂ ಉತ್ತಮ ಜೀವನ ಶೈಲಿಯಾಗಿ ಬೆಳೆದು ಬಂದಿದೆ ಎಂದು ಡಾ. ಅಶೋಕ ಮತ್ತಿಗಟ್ಟಿ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಜರುಗಿದ ಯೋಗ ತರಬೇತಿ ಹಾಗೂ ಆಯುಷ್ ಪರಿಚಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸಿನ ಗುರಿಯನ್ನು ಹೊಂದಿರುವ ಜೀವನ ವಿಧಾನವಾಗಿದೆ ಎಂದರು.

ಡಾ. ಸಾಯಿಪ್ರಕಾಶ ಮಡಿವಾಳರ, ಡಾ. ಸಂಜೀವ ನಾರಪ್ಪನವರ ಮಾತನಾಡಿ, ಆಯುಷ್‌ ಪದ್ಧತಿಗಳಾದ ಯೋಗ, ಆಯುರ್ವೇದ ಪ್ರಕೃತಿ ಚಿಕಿತ್ಸೆಗಳು ಮನುಷ್ಯನ ವಿವಿಧ ನೋವುಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡಬಲ್ಲ ಉತ್ತಮ ಸಾಧನಗಳಾಗಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಲಯದ ಮೇಲ್ವಿಚಾರಕಿ ಸುಜಾತಾ ಪಾಟೀಲ ಮಾತನಾಡಿ, ಮನುಷ್ಯನ ಆರೋಗ್ಯದ ಹಲವಾರು ಸಮಸ್ಯೆಗಳಿಗೆ ಸೂಕ್ತವಾದ ಉತ್ತರ ಆಯುರ್ವೇದ ಶಾಸ್ತ್ರದಲ್ಲಿದೆ. ಯೋಗದಂತಹ ಪ್ರಕ್ರಿಯೆಗಳು ನಮ್ಮನ್ನು ಸದೃಢರನ್ನಾಗಿ ಮಾಡುತ್ತವೆ ಎಂದು ಹೇಳಿದರು.

ಈ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿ ಗದಗ ಶಾಖೆಯ ಯೋಗಗುರು ಮುರಳೀಧರ ಶ್ಯಾವಿ ಅವರು, ಯೋಗಾಸನ ಹಾಗೂ ಅವುಗಳ ವಿಧಾನಗಳು, ಉಪಯೋಗಗಳನ್ನು ತಿಳಿಸಿ ಯೋಗ ಮಾಡುವ ವಿಧಾನಗಳನ್ನು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರು.

ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನಿಲಯದ ಐಶ್ವರ್ಯಾ ಹೊಸಮನಿ, ಶ್ವೇತಾ ಬಾಗೇವಾಡಿ ಅವರನ್ನು ಸನ್ಮಾನಿಸಲಾಯಿತು.

ಪವಿತ್ರಾ ಕನಕಗಿರಿ ಹಾಗೂ ಟಿ. ವನಜಾಕ್ಷಿ ಪ್ರಾರ್ಥಿಸಿದರು. ಶಿಲ್ಪಾ ಲಮಾಣಿ ಸ್ವಾಗತಿಸಿದರು. ಪಾರ್ವತಿ ದೊಡ್ಡಮನಿ ಪರಿಚಯಿಸಿದರು. ಮುಕ್ತಾ ಹಡಪದ ಕಾರ್ಯಕ್ರಮ ನಿರೂಪಿಸಿದರು. ಐಶ್ವರ್ಯ ಹೊಸಮನಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ