- ಎಸಿ ವಿ.ಅಭಿಷೇಕ್ ಶ್ಲಾಘನೆ । ಹೊನ್ನಾಳಿ ಪುರಸಭೆಯಲ್ಲಿ ಕಾರ್ಮಿಕ ದಿನಾಚರಣೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಬುಧವಾರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ, ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ವತಿಯಿಂದ ಆಯೋಜಿಸಿದ್ದ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿನಿತ್ಯ ನಗರ ಸ್ವಚ್ಛತೆಯಂಥ ಕೆಲಸಗಳನ್ನು ಮಾಡುವ ಪೌರಕಾರ್ಮಿಕರಿಗಾಗಿ ಸರ್ಕಾರ ಹತ್ತುಹಲವು ಸೌಲಭ್ಯಗಳ ಯೋಜನೆಗಳನ್ನು ರೂಪಿಸಿದೆ. ಆದರೆ, ಇವುಗಳ ಬಗ್ಗೆ ಮಾಹಿತಿ ಕೊರತೆಯಿಂದ ಸೌಲಭ್ಯಗಳಿಂದ ವಂಚಿತರಾಗುವ ಸಂದರ್ಭಗಳೂ ಇವೆ. ಈ ಬಗ್ಗೆ ಪೌರ ಕಾರ್ಮಿಕರು ಆದಷ್ಟು ತಮ್ಮ ಮೇಲಾಧಿಕಾರಿಗಳಿಂದ ಅಥವಾ ತಮ್ಮ ಸಂಘಟನೆಗಳ ಮುಖ್ಯಸ್ಥರಿಂದ ಸೂಕ್ತ ಮಾಹಿತಿ ಪಡೆದು ಸವಲತ್ತು ಪಡೆಯಬೇಕು ಎಂದು ಹೇಳಿದರು.ಪೌರಕಾರ್ಮಿಕರಿಗೆ ಇ.ಎಸ್.ಐ., ಪಿ.ಎಫ್. ಸೌಲಭ್ಯಗಳ ಬಗ್ಗೆ ಕೂಡ ಹೆಚ್ಚಿನ ಅರಿವು ಬೇಕು. ಪೌರಕಾರ್ಮಿಕರಿಗೆ ಕೆಲಸ ಮಾಡುವಲ್ಲಿ ಸಂರಕ್ಷಣಾ ಉಪಕರಣಗಳಾದ ಹ್ಯಾಂಡ್ ಗ್ಲೌಸ್, ಬೂಟ್ಸ್, ಮಾಸ್ಕ್ ಮುಂತಾದ ಪರಿಕರಗಳನ್ನು ಪುರಸಭೆ ಅಧಿಕಾರಿಗಳು ಒದಗಿಸಿಕೊಡಬೇಕು. ಜೊತೆಗೆ ಅವುಗಳನ್ನು ತಪ್ಪದೇ ನೌಕರರು ಕೆಲಸ ಮಾಡುವ ಸಂದರ್ಭ ಉಪಯೋಗಿಸುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಪುರಸಭೆಮಟ್ಟದ ಆರೋಗ್ಯ ನಿರೀಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದ ಅವರು, ಪುರಸಭೆ ಪೌರ ಕಾರ್ಮಿಕರಿಗೆ ಇರುವ ಅನೇಕ ಸೌಲಭ್ಯಗಳ ಮಾಹಿತಿಗಳನ್ನು ವಿವರಿಸಿದರು.
ಸಹಾಯಕ ಸರ್ಕಾರಿ ಅಭಿಯೋಜಕ ಭರತೆ ಭೀಮಯ್ಯ, ತಹಸೀಲ್ದಾರ್ ಪುರಂದರ ಹೆಗಡೆ, ವಕೀಲರ ಸಂಘ ಅಧ್ಯಕ್ಷ ಕೆ.ಪಿ. ಜಯಪ್ಪ, ಉಪಾಧ್ಯಕ್ಷ ಚಂದ್ರಪ್ಪ ಮಡಿವಾಳ, ಕಾರ್ಯದರ್ಶಿ ಬಿ.ಎಂ. ಪುರುಷೋತ್ತಮ, ಪುರಸಭೆ ಮುಖ್ಯಾಧಿಕಾರಿ ನಿರಂಜನಿ ಮುಖ್ಯಅತಿಥಿಗಳಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸಂರಕ್ಷಣಾ ಉಪಕರಣಗಳನ್ನು ವಿತರಿಸಲಾಯಿತು. ಪುರಸಭೆ ಸಭೆ ಕರವಸೂಲಿಗಾರ ರೋಹಿತ್ ಸ್ವಾಗತಿಸಿದರು. ಲೆಕ್ಕಾಧಿಕಾರಿ ಎನ್.ರಂಜಿತ ಕಾರ್ಯಕ್ರಮ ನಿರೂಪಿಸಿದರು. ಪುರಸಭೆ ಮುಖ್ಯಾಧಿಕಾರಿ ನಿರಂಜನಿ ಎಚ್. ವಂದಿಸಿದರು.
- - - -15ಎಚ್.ಎಲ್.: