ಕನ್ನಡಪ್ರಭ ವಾರ್ತೆ ತುಮಕೂರು ನಗರದ ಸ್ವಚ್ಛತೆಗೆ, ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಮಹತ್ವವಾದದ್ದು, ಪೌರಕಾರ್ಮಿಕರು ಕಾರ್ಯನಿರ್ವಹಿಸದಿದ್ದರೆ ಊರು ಕೊಳೆತು ನಾರುತ್ತಿತು. ಊರಿನ ಸೌಂದರ್ಯಕ್ಕೆ, ನೈರ್ಮಲ್ಯತೆಗೆ ಕಾರಣವಾಗಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ ಎಂದು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಪ್ರತಾಪ್ ಮದಕರಿ ಹೇಳಿದರು.ನಗರದ ಡಾ.ಪುನೀತ್ರಾಜ್ಕುಮಾರ್ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆ ನಗರ ಸಂಚಾಲನ ಸಮಿತಿ ಹಮ್ಮಿಕೊಂಡಿದ್ದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಜನ್ಮದಿನ ಆಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ನೆರವೇರಿಸಿ, ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು.ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಲ್ಲದಿದ್ದರೆ ಅನೇಕ ರೋಗಗಳು ಹರಡಿ ನಾವೆಲ್ಲಾ ಅನಾರೋಗ್ಯಕ್ಕೆ ತುತ್ತಾಗಬೇಕಾಗಿತ್ತು. ಸಾವು ನೋವಿಗೂ ಕಾರಣವಾಗುತ್ತಿತ್ತು. ಆದರೆ ಇದಕ್ಕೆ ಅವಕಾಶವಾಗದಂತೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನಿರ್ವಹಿಸಿ ಆರೋಗ್ಯವಂತ ಪರಿಸರ ನಿರ್ಮಾಣ ಮಾಡುತ್ತಿದ್ದಾರೆ. ಇಂತಹ ಪೌರಕಾರ್ಮಿಕರನ್ನು ನಾವೆಲ್ಲರೂ ಗೌರವದಿಂದ ಕಾಣಬೇಕು, ಅವರ ಸೇವಾಕಾರ್ಯದಲ್ಲಿ ಸ್ಪಂದಿಸಬೇಕು ಎಂದು ಹೇಳಿದರು.