ನಮ್ಮ ದೇಶದ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು

KannadaprabhaNewsNetwork |  
Published : Jul 27, 2025, 01:59 AM IST
 ಬೆಳಗಾವಿ | Kannada Prabha

ಸಾರಾಂಶ

ಎಲ್ಲಾ ಸೇವೆಗಳಿಗೂ ಶ್ರೇಷ್ಠ ಸೇವೆ ಎಂದರೆ ಅದು ದೇಶ ಸೇವೆ. ದೇಶದ ಗಡಿಯಲ್ಲಿ ನಿಂತು ಮಳೆ, ಚಳಿ, ಬಿಸಿಲು ಎನ್ನದೇ ಎದುರಾಳಿ ವಿರುದ್ಧ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು

ಕನ್ನಡಪ್ರಭ ವಾರ್ತೆ ಬೆಳಗಾವಿ

ಎಲ್ಲಾ ಸೇವೆಗಳಿಗೂ ಶ್ರೇಷ್ಠ ಸೇವೆ ಎಂದರೆ ಅದು ದೇಶ ಸೇವೆ. ದೇಶದ ಗಡಿಯಲ್ಲಿ ನಿಂತು ಮಳೆ, ಚಳಿ, ಬಿಸಿಲು ಎನ್ನದೇ ಎದುರಾಳಿ ವಿರುದ್ಧ ಹೋರಾಡುವ ಸೈನಿಕರ ಸೇವೆಗೆ ಬೆಲೆಕಟ್ಟಲಾಗದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಆಶ್ರಯದಲ್ಲಿ ಶನಿವಾರ ನಡೆದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂದೂರ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಕರೆ ನೀಡಿದರು.

ಸೈನಿಕರು ಭಾರತದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸೇವೆಯಿಂದ ನಿವೃತ್ತರಾದರೂ ಅವರ ಉತ್ಸಾಹ ಮಾತ್ರ ಕುಂದಿಲ್ಲ. ದೇಶದ ಗಡಿಯಲ್ಲಿ ನಿಂತು ವೈರಿಗಳ ಗುಂಡಿಗೆ ಎದೆಕೊಟ್ಟು ಹೋರಾಡಿದ ವೀರ ಯೋಧರ ಬಗ್ಗೆ ಎಷ್ಟು ಹೇಳಿದರೂ ಸಾಲದು.

ಕಾರ್ಗಿಲ್ ಯುದ್ದವನ್ನು ಗೆದ್ದಿದ್ದೇವೆ. ಇತ್ತೀಚೆಗೆ ಅಪರೇಷನ್ ಸಿಂದೂರು ಮೂಲಕ ನಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದೇವೆ. ಇದಕ್ಕೆ ಭಾರತದ ದೇಶ ಹೆಚ್ಚು ವೀರರನ್ನು ಹೊಂದಿರುವುದೇ ಸಾಕ್ಷಿ ಎಂದರು.

ನಾನು ಯಾವಾಗಲೂ ಸೈನಿಕರ ಬಗ್ಗೆ ಗೌರವ ಭಾವನೆ ಹೊಂದಿದ್ದೇನೆ. ದೇಶದ ಗಡಿ ಕಾದು ಬಂದಿರುವ ಮಾಜಿ ಸೈನಿಕರನ್ನು ಸದಾ ಗೌರವಿಸುತ್ತೇನೆ. ಸೈನಿಕರ ಬಗ್ಗೆ ವಿಶೇಷವಾದ ಗೌರವ, ಪ್ರೀತಿ, ಕಾಳಜಿ ಹೊಂದಿದ್ದೇನೆ. ಸೇವೆಯಲ್ಲಿದ್ದ ಸೈನಿಕರು ಮಳೆ, ಚಳಿ, ಬಿಸಿಲಿನ್ನೆದೇ ದೇಶಕ್ಕಾಗಿ ಹೋರಾಡುತ್ತಾರೆ. ನಿವೃತ್ತಿರಾದರೂ ಸುಮ್ಮನೆ ಕೂರದೇ ಸಮಾಜದ ಅಂಕುಕೊಂಡುಗಳನ್ನು ತಿದ್ದುವ ಕೆಲಸಗಳನ್ನು ಮಾಡುತ್ತಿದ್ದಾರೆ. ಮಾಜಿ ಸೈನಿಕರ ಬೇಡಿಕೆಗಳು ಸಾಕಷ್ಟಿವೆ. ಅವರ ಶಿಸ್ತು ಬದ್ಧ ಜೀವನವನ್ನು ನೋಡಿದರೆ, ಅವರಿಗೆ ಸರ್ಕಾರದ ಸಹಾಯವೇ ಅವಶ್ಯಕತೆ ಇಲ್ಲ ಎನಿಸುತ್ತದೆ. ಮಾಜಿ ಸೈನಿಕರೇ ನಮಗೆ ಆದರ್ಶ ಎಂದು ಹೇಳಿದರು.

ಇದೇ ವೇಳೆ ಮಾಜಿ ಸೈನಿಕರನ್ನು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು. ಮಾಜಿ ಸೈನಿಕರ ಸಂಘದ ವತಿಯಿಂದ ಸಚಿವರನ್ನು ಗೌರವಿಸಿ ಸತ್ಕರಿಸಲಾಯಿತು. ಶ್ರೀ ರುದ್ರಯ್ಯ ಹಿರೇಮಠ್ ಸ್ವಾಮಿಗಳು, ಶಾಸಕರಾದ ಆಸಿಫ್ ಸೇಠ್, ಬಸಪ್ಪ ತಳವಾರ, ಯುವರಾಜ್ ಕದಂ, ಮನೋಹರ್ ಬೆಳಗಾಂವ್ಕರ್, ಶಂಕರಗೌಡ ಪಾಟೀಲ್, ಸುನೀಲ್ ದಾಗರ್, ಕಲ್ಲಪ್ಪ ಪಾಟೀಲ್, ಆರ್.ವೈ.ಹಿರೇಮಠ್, ಮಾಜಿ ಸೈನಿಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮನಂಥ ವೀರರನ್ನು ಈ ನಾಡಿಗೆ ಕೊಟ್ಟಿರುವ ಬೆಳಗಾವಿ ಜಿಲ್ಲೆ, ದೇಶ ಕಾಯಲು ಸಾವಿರಾರು ಸೈನಿಕರನ್ನು ನೀಡಿದೆ. ಕರ್ನಾಟಕದಿಂದ ಅತಿಹೆಚ್ಚು ಯೋಧರು ಇರುವ ಜಿಲ್ಲೆ ಎಂದರೆ ಅದು ನಮ್ಮ ಬೆಳಗಾವಿ. ಇದರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ