ಸಾವಿತ್ರಿಬಾಯಿ ಫುಲೆ ದಂಪತಿಯವರ ಸೇವೆ ಅವಿಸ್ಮರಣೀಯ: ಡಾ. ತೋಂಟದ ಶ್ರೀ

KannadaprabhaNewsNetwork |  
Published : Jan 08, 2024, 01:45 AM IST
ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಮಾತನಾಡಿದರು. | Kannada Prabha

ಸಾರಾಂಶ

೧೯ನೇ ಶತಮಾನದ ಪೂರ್ವಾರ್ಧದಲ್ಲಿ ಸಮಾಜ ಅಜ್ಞಾನ, ಬಡತನ, ದಾರಿದ್ರ್ಯದಿಂದ ತುಂಬಿತ್ತು. ಸಮಾಜದಲ್ಲಿ ಬೇರೂರಿರುವ ಅಂಧ ಶ್ರದ್ಧೆ, ಮೂಢನಂಬಿಕೆಗಳನ್ನು ನಿವಾರಿಸುವಲ್ಲಿ ಫುಲೆ ದಂಪತಿ ಮಾಡಿದಂತಹ ಸೇವೆ ಇಂದಿಗೂ ಅವಿಸ್ಮರಣೀವಾದುದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.

ಗದಗ: ೧೯ನೇ ಶತಮಾನದ ಪೂರ್ವಾರ್ಧದಲ್ಲಿ ಸಮಾಜ ಅಜ್ಞಾನ, ಬಡತನ, ದಾರಿದ್ರ್ಯದಿಂದ ತುಂಬಿತ್ತು. ಸಮಾಜದಲ್ಲಿ ಬೇರೂರಿರುವ ಅಂಧ ಶ್ರದ್ಧೆ, ಮೂಢನಂಬಿಕೆಗಳನ್ನು ನಿವಾರಿಸುವಲ್ಲಿ ಫುಲೆ ದಂಪತಿ ಮಾಡಿದಂತಹ ಸೇವೆ ಇಂದಿಗೂ ಅವಿಸ್ಮರಣೀವಾದುದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.

ನಗರದ ತೋಂಟದಾರ್ಯ ಸಂಸ್ಥಾನ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ೨೬೭೪ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ವಿಶೇಷವಾಗಿ ಕೆಳ ವರ್ಗದ ಹೆಣ್ಣು ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿದ್ದ ಸಂದರ್ಭದಲ್ಲಿ ಶಿಕ್ಷಣವನ್ನು ಒದಗಿಸಿದ ಹಿರಿಮೆ ಫುಲೆ ದಂಪತಿಗಳದು. ಆ ಕಾಲದಲ್ಲಿ ಶಿಕ್ಷಣ ಉನ್ನತ ವರ್ಗದವರ ಸ್ವತ್ತಾಗಿತ್ತು. ಬೇರೆಯವರು ಶಿಕ್ಷಣ ಪಡೆಯಲು ಅವಕಾಶವಿರಲಿಲ್ಲ. ಸಂಪ್ರದಾಯವಾದಿಗಳಿಂದ ಸಾಕಷ್ಟು ಕಿರುಕುಳ, ನೋವು, ತೊಂದರೆಗಳನ್ನು ಸಹಿಸಿಕೊಂಡು ಕೆಳವರ್ಗದ ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ನೀಡಿ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಮಹಿಳಾ ಶಿಕ್ಷಕಿ ಎಂಬ ಹೆಗ್ಗಳಿಕೆಗೆ ಸಾವಿತ್ರಿಬಾಯಿ ಫುಲೆಯವರು ಪಾತ್ರರಾಗಿದ್ದಾರೆ ಎಂದರು.

ಉಪನ್ಯಾಸಕಿ ಪ್ರಿಯಾಂಕಾ ನಡುವಿನಮನಿ ಮಾತನಾಡಿ, ಸಾವಿತ್ರಿಬಾಯಿ ಫುಲೆಯವರು ಅತ್ಯಂತ ಚಿಕ್ಕವಯಸ್ಸಿನಲ್ಲಿ ಶಿಕ್ಷಣ ಪ್ರೇಮಿಯಾಗಿದ್ದರು. ಇಂದು ಶಿಕ್ಷಣ ಮತ್ತು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಸಮಾನ ಹಕ್ಕು ಪಡೆಯಲು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರೇ ಕಾರಣ ಎಂದರು.

ಈ ವೇಳೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು. ಬೋಜರಾಜ ಸೊಪ್ಪಿಮಠ ಅವರು ರಚಿಸಿದ ಬಾ....ನಲ್ಲೆ ಹನಿ ಗವನಗಳ ಸಂಕಲನ ಪುಸ್ತಕ ಲೋಕಾರ್ಪಣೆ ಜರುಗಿತು.

ಶಾಂತಲಾ ಕಾಮತ ಅವರಿಂದ ನಡೆದ ಕೊಳಲು ವಾದನಕ್ಕೆ ಗುರುನಾಥ ಸುತಾರ ತಬಲಾ ಸಾಥ್ ನೀಡಿದರು. ಶಿವಾನುಭವ ಭಕ್ತಿಸೇವೆಯನ್ನು ವಹಿಸಿದ ಯೋಗಾಚಾರ್ಯ ಸಂಗಮೇಶ ಕೆ. ಮೇಲ್ಮುರಿ ಅವರನ್ನು ಶ್ರೀಗಳು ಸನ್ಮಾನಿಸಿದರು.

ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ಕರೇಗೌಡ್ರ, ಮಹೇಶ ಗಾಣಿಗೇರ, ವಿಜಯಕುಮಾರ ಹಿರೇಮಠ, ವಿರೂಪಾಕ್ಷಪ್ಪ ಅರಳಿ, ಅಶೋಕ ಹಾದಿ, ಸುರೇಶ ನಿಲೂಗಲ್, ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಕ್ಕ ಪಾಟೀಲ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’