ಚಳಿ, ಮಳೆ-ಗಾಳಿಯನ್ನದೆ ಪತ್ರಿಕೆ ವಿತರಣೆ ಮಾಡುವ ವಿತರಕರ ಸೇವೆ ನಿಜಕ್ಕೂ ಶ್ಲಾಘನೀಯ

KannadaprabhaNewsNetwork |  
Published : Sep 05, 2026, 02:15 AM IST
ಶಿಗ್ಗಾಂವಿ ನಗರದ ಜಯಲಕ್ಷ್ಮಿ ಹೋಟೆಲ್ ಆವರಣದಲ್ಲಿ ತಾಲೂಕು ಪತ್ರಿಕಾ ವಿತರಕರ ಸಂಘ ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ  ಅರುಣ್ ಹುಡೇದಗೌಡ್ರ ಮಾತನಾಡಿದರು. | Kannada Prabha

ಸಾರಾಂಶ

ಸಮಾಜದಲ್ಲಿ ನಡೆಯುವ ದಿನನಿತ್ಯದ ನೈಜ ಘಟನೆ ಆಧಾರಿತ ಸುದ್ದಿಗಳನ್ನು ಹಾಗೂ ಅಂದಿನ ವಿಶೇಷತೆಗಳನ್ನು ಒಳಗೊಂಡಿರುವ ದಿನಪತ್ರಿಕೆಗಳನ್ನು ಓದುಗರ ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಕೆಲಸ ಮಾಡುತ್ತಿರುವ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಮೆಚ್ಚುವಂತಹದು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್ ಹುಡೇದಗೌಡ್ರ ಹೇಳಿದರು.

ಶಿಗ್ಗಾಂವಿ: ಸಮಾಜದಲ್ಲಿ ನಡೆಯುವ ದಿನನಿತ್ಯದ ನೈಜ ಘಟನೆ ಆಧಾರಿತ ಸುದ್ದಿಗಳನ್ನು ಹಾಗೂ ಅಂದಿನ ವಿಶೇಷತೆಗಳನ್ನು ಒಳಗೊಂಡಿರುವ ದಿನಪತ್ರಿಕೆಗಳನ್ನು ಓದುಗರ ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಕೆಲಸ ಮಾಡುತ್ತಿರುವ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಮೆಚ್ಚುವಂತಹದು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್ ಹುಡೇದಗೌಡ್ರ ಹೇಳಿದರು.

ನಗರದ ಜಯಲಕ್ಷ್ಮಿ ಹೋಟೆಲ್ ಆವರಣದಲ್ಲಿ ತಾಲೂಕು ಪತ್ರಿಕಾ ವಿತರಕರ ಸಂಘ ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೇ ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಪ್ರತಿ ನಿತ್ಯವೂ ನಸುಕಿನಲ್ಲಿ ಎದ್ದು ಪತ್ರಿಕೆಗಳನ್ನು ಹೊತ್ತೊಯ್ಯುವ ವಿತರಕರ ಪ್ರಾಮಾಣಿಕತೆ ಹಾಗೂ ಕರ್ತವ್ಯ ನಿಷ್ಠೆ ಪ್ರತಿಯೊಬ್ಬರೂ ಮೆಚ್ಚುವಂತದ್ದು. ಇಂತಹ ಪತ್ರಿಕಾ ವಿತರಕರ ಕಷ್ಟ ಸುಖಗಳಲ್ಲಿ ಎಲ್ಲರು ಭಾಗಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ರಮೇಶ ಹರಿಜನ್ ಮಾತನಾಡಿ, ಪ್ರತಿ ನಿತ್ಯವೂ ಸೂರ್ಯೋದಯಕ್ಕೂ ಮುನ್ನವೇ ಎದ್ದು, ಪತ್ರಿಕೆ ಬರುವುದನ್ನೇ ಕಾಯುತ್ತ ಪತ್ರಿಕೆ ಬಂಡಲ್‌ಗಳನ್ನು ಸರಿಯಾದ ರೀತಿಯಲ್ಲಿ ತಾವುಗಳು ತಂದ ಸೈಕಲ್ ಮತ್ತು ಬೈಕ್‌ಗಳಲ್ಲಿ ಜೋಡಿಸಿಕೊಂಡು ಗಲ್ಲಿ, ಓಣಿ, ಗುಡ್ಡಗಳಲ್ಲಿ ಸಂಚರಿಸಿ ಓದುಗರಿಗೆ ಪತ್ರಿಕೆಗಳನ್ನು ವಿತರಿಸುವ ಕಾರ್ಯ ಮಾಡುತ್ತಿರುವ ಪತ್ರಿಕಾ ವಿತರಕರಿಗೆ ಧನ್ಯವಾದಗಳು. ಸರ್ಕಾರಿ ನೌಕರ ಸಂಘ ಹಾಗೂ ಕ ಸಾ ಪ ಪತ್ರಿಕಾ ವಿತರಕರ ಬೆನ್ನಿಗೆ ಸದಾ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ನಾಗಪ್ಪ ಬೆಂತೂರ ಹಾಗೂ ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ವೀರುಪಾಕ್ಷಪ್ಪ ನೀರಲಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿದ್ರಾಮಗೌಡ ಮೇಳ್ಳಾಗಟ್ಟಿ, ಸುರೇಶ ಯಲಿಗಾರ, ರವಿ ಉಡುಪಿ, ಶಿವಕುಮಾರ ಕೊಟಗಿಮಠ, ಪ್ರಕಾಶ ಹಾದಿಮನಿ, ಹನುಮಂತ ಜವಳಗಟ್ಟಿ, ಮುತ್ತಪ್ಪ ಬಂಡಿವಡ್ಡರ, ಗಿರೀಶ ಕಂಕನವಾಡ, ಪ್ರೀತಮ್ ಪವಾರ, ನಿರಂಜನ, ಸೃಜನ ಬಾಡ, ಪ್ರವೀಣ, ವಿಜಯ, ದರ್ಶನ ಯಲಿಗಾರ ಸೇರಿದಂತೆ ಹಲವಾರು ಇದ್ದರು.

ಪತ್ರಿಕಾ ವಿತರಕರ ಮುಖಂಡ ಸುಧಾಕರ ದೈವಜ್ಞೆ ಸ್ವಾಗತಿಸಿ, ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಟ್ಟಿಹಳ್ಳಿ, ಹಿರೇಕೆರೂರು ತಾಲೂಕು ಬರಗಾಲ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ
ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸರ್ಕಾರದೊಂದಿಗೆ ಸಮಾಜ ಕೈಜೋಡಿಸಬೇಕು