ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಆರ್ಯ ಈಡಿಗರ ನೂತನ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಈಡಿಗರ ಸಮುದಾಯ ಯಾರಿಗೂ ಕೈ ಚಾಚಿ ಕೇಳುವುದಿಲ್ಲ. ತಮ್ಮ ದುಡಿಮೆಯಲ್ಲಿ ಗಳಿಸಿದ ಹಣದಲ್ಲಿ ಕಿಂಚಿತ್ತು ಹಣವನ್ನಾದರೂ ದಾನದ ರೂಪದಲ್ಲಿ ನೀಡುವಲ್ಲಿ ಸಮಾಜದ ಕೊಡುಗೆ ದೊಡ್ಡದಿದೆ ಎಂದರು.
ನಮ್ಮ ಸಮಾಜದಲ್ಲಿ ಹುಟ್ಟಿ ವಿಶ್ವದಲ್ಲಿ ಖ್ಯಾತಿ ಪಡೆದ ಚಲನಚಿತ್ರ ನಟ, ಪದ್ಮಭೂಷಣ ಡಾ. ರಾಜಕುಮಾರ್, ಅವರ ಪುತ್ರರಾದ ದಿ. ಪುನೀತ್ ರಾಜಕುಮಾರ್, ಶಿವರಾಜ್ ಕುಮಾರ್, ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಸೇರಿದಂತೆ ಅನೇಕರು ಸಮಾಜದಲ್ಲಿ ಹೆಸರು ಮಾಡಿದ್ದಾರೆ ಎಂದು ತಿಳಿಸಿದರು.ಪುನೀತ್ ರಾಜಕುಮಾರ್ ಕೇವಲ ಚಿತ್ರ ನಟರಾಗಿ ಮಾತ್ರವಲ್ಲದೆ ಎಲ್ಲಾ ವರ್ಗದ ಜನರ ಧ್ವನಿಯಾಗಿ ಮೆರೆದಿದ್ದಾರೆ. ಅವರು ಮಾಡಿದ ಕೆಲಸಗಳಿಂದ ಇಂದಿಗೂ ಸಹ ಎಲ್ಲಾ ಸಮುದಾಯದ ಹೃದಯದಲ್ಲಿ ವಿರಾಜಮಾನವಾಗಿ ಮೆರೆದಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈಡಿಗರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ವಾಸನ್ ಮಾತನಾಡಿ, 40 ರಿಂದ 50 ಲಕ್ಷ ಜನಸಂಖ್ಯೆ ಹೊಂದಿರುವ ಈಡಿಗ ಜನಾಂಗ ಜಾತಿಗಣತಿಯಲ್ಲಿ ನಾಲ್ಕರಿಂದ ಐದನೇ ಸ್ಥಾನ ಪಡೆದಿದ್ದಾರೆ. 26 ಪಂಗಡಗಳನ್ನು ಹೊಂದಿರುವ ನಾವು ಹಿಂದುಳಿದ ಜನಾಂಗ ಎಂದು ನಮೂದಿಸಬೇಕು. ಇದರಿಂದ ಭವಿಷ್ಯದಲ್ಲಿ ನಮ್ಮ ಮಕ್ಕಳ ಉದ್ಯೋಗ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮದ್ದೂರು ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ ಅಣ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಂ.ಎಲ್.ತಮ್ಮಯ್ಯ, ಈಡಿಗರ ಸಂಘದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಸೌಮ್ಯ ಶ್ರೀನಿವಾಸ್, ಪದಾಧಿಕಾರಿಗಳಾದ ರಾಧಾ ನಾರಾಯಣಸ್ವಾಮಿ, ಬ್ಯಾಂಕ್ ಶ್ರೀನಿವಾಸ್, ಮೋಹನ್, ಶ್ರೀನಿವಾಸ್, ರಾಜೇಶ್, ಪುರುಷೋತ್ತಮ್, ಸುರೇಶ್, ಗೋವಿಂದ, ಲಕ್ಷ್ಮಣ್ ಮತ್ತು ತಾಪಂ ಮಾಜಿ ಉಪಾಧ್ಯಕ್ಷ ಎಚ್.ಜಿ.ರಾಮಚಂದ್ರ ಮತ್ತಿತರರು ಪಾಲ್ಗೊಂಡಿದ್ದರು.
ಮದ್ದೂರು: ಈಡಿಗ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಕೆ.ಎಂ. ಉದಯ್ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಶಾಸಕರು ಮಾತನಾಡಿ, ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ಸರ್ಕಾರಿ ನಿವೇಶನಗಳನ್ನು ಗುರುತಿಸುವ ಕೆಲಸ ಪ್ರಗತಿಯಲ್ಲಿದೆ. ಈಡಿಗ ಸಂಘದ ಪದಾಧಿಕಾರಿಗಳು ಸಮುದಾಯ ಭವನ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದರೆ ನಿವೇಶನ ನೀಡುವುದಾಗಿ ವಾಗ್ದಾನ ಮಾಡಿದರು.