ಶರಣ ಸಾಹಿತ್ಯ ಪರಿಷತ್ತು ಒಂದು ಜಾತಿಗೆ ಸೀಮಿತವಲ್ಲ

KannadaprabhaNewsNetwork |  
Published : Aug 31, 2026, 02:15 AM IST
೨೫ಕೆಎಲ್‌ಆರ್-೩ಕೋಲಾರದ ಬಯಲು ಬಸವೇಶ್ವರ ದೇವಾಲಯದ ಆವರಣದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ೪೦ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ೧೧೧ನೇ ಜಯಂತಿ ಕಾರ್ಯಕ್ರಮ ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಇಂದಿನ ಯುವ ಪೀಳಿಗೆಯು ದಾರಿ ತಪ್ಪುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಶರಣ ಸಾಹಿತ್ಯದಂತಹ ಸಂಸ್ಥೆಗಳು ಯುವಜನತೆಯಲ್ಲಿ ಸದ್ವಿಚಾರಗಳನ್ನು ಮೂಡಿಸಿ ಅವರನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ,

ಕನ್ನಡಪ್ರಭ ವಾರ್ತೆ ಕೋಲಾರ

ಶರಣ ಸಾಹಿತ್ಯ ಪರಿಷತ್ತು ಯಾವುದೇ ಒಂದು ನಿರ್ದಿಷ್ಟ ಜಾತಿಗೆ ಸೀಮಿತವಾಗಿಲ್ಲ, ಅದು ಸಮಸ್ತ ಸಮಾಜಕ್ಕೆ ಸೇರಿದ್ದಾಗಿದೆ. ಆದರೆ ಈ ಸಂಸ್ಥೆಯು ಒಂದು ಜಾತಿಗೆ ಆಧಾರಿತವಾಗಿ ನಡೆಯುತ್ತದೆ ಎಂಬ ತಪ್ಪು ಕಲ್ಪನೆ ಜನರಲ್ಲಿದೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ.ಚಂದ್ರಶೇಖರ್ ತಿಳಿಸಿದರು.

ನಗರದ ಬಯಲು ಬಸವೇಶ್ವರ ದೇವಾಲಯದ ಆವರಣದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ೪೦ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ೧೧೧ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದಿನ ಯುವ ಪೀಳಿಗೆಯು ದಾರಿ ತಪ್ಪುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಶರಣ ಸಾಹಿತ್ಯದಂತಹ ಸಂಸ್ಥೆಗಳು ಯುವಜನತೆಯಲ್ಲಿ ಸದ್ವಿಚಾರಗಳನ್ನು ಮೂಡಿಸಿ ಅವರನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ, ಆಳುವ ಸರ್ಕಾರಗಳು ಜನರಿಗೆ ಶರಣ ಸಾಹಿತ್ಯ ಹಾಗೂ ವಚನಗಳ ಮೂಲಕ ನೀಡಬೇಕಾದ ಮೌಲ್ಯಯುತ ಸಂದೇಶಗಳ ಬಗ್ಗೆ ಸೂಕ್ತ ಆಲೋಚನೆ ಮತ್ತು ಯೋಜನೆಗಳನ್ನು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಸಾಪ ಮಾಜಿ ಅಧ್ಯಕ್ಷ ಜಿ.ಜೆ.ನಾಗರಾಜ್ ಮಾತನಾಡಿ ಕನ್ನಡ ಶರಣ ಸಾಹಿತ್ಯ ಮತ್ತು ಶೈವ ಪರಂಪರೆಯು ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು ಎಂದು ತಿಳಿಸಿದರು.

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ್.ಬಿ ಮಾತಮಾಡಿ, ಶರಣ ಸಾಹಿತ್ಯ ಪರಿಷತ್ತಿನಲ್ಲಿ ಯಾವುದೇ ಜಾತಿ-ಧರ್ಮದ ಭೇದಭಾವವಿಲ್ಲದೆ ಎಲ್ಲರಿಗೂ ಮುಕ್ತ ಅವಕಾಶವಿದೆ ಶರಣರ ತತ್ವಗಳು ಮತ್ತು ಕೊಡುಗೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಶರಣಸಾಹಿತ್ಯ ಪರಿಷತ್ ಉಪಾಧ್ಯಕ್ಷ ಅಶೋಕ್ ಲೋನಿ, ಪ್ರಧಾನ ಕಾರ್ಯದರ್ಶಿ ಶೇಖರಪ್ಪ, ಕಾರ್ಯದರ್ಶೀ ಶೇಖರ್, ತಾಲ್ಲೂಕು ಅಧ್ಯಕ್ಷ ಬಿ. ಶಿವಕುಮಾರ್, ಶರಣರಾದ ವಿಶ್ವನಾಥ್, ಸಂಗೀತ ಶಿಕ್ಷಕಿ ಡಿ.ಎಸ್ ಭವಾನಿ, ಬಿ.ಆರ್.ಎಂ ಶಿವಕುಮಾರ್ ಸೇರಿದಂತೆ ಚಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪಿ.ನಾರಾಯಣಪ್ಪ, ಟಿ ಸುಬ್ಬರಾಮಯ್ಯ, ಮೇಘರಾಜು ಸುಪ್ರಿಂ, ಬಿ.ವಿ ನಂಜುಂಡಪ್ಪ, ಸೋಮಶೇಖರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಕಿ ಬಿಲ್ ಬಿಡುಗಡೆಗಾಗಿ ಮುಂದುವರಿದ ಗುತ್ತಿಗೆದಾರರ ಪ್ರತಿಭಟನೆ
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯಿಂದ ಮಲಗುಂಡಿ ಸ್ವಚ್ಛತೆ