ಕನ್ನಡಪ್ರಭ ವಾರ್ತೆ ಮೈಸೂರು
ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ವತಿಯಿಂದ ವಿವಿ ಸಂಜೆ ಕಾಲೇಜು ಎದುರು ಗುರುವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ಬೇಟೆಗಾರನಾಗಿದ್ದ ವಾಲ್ಮೀಕಿ ನಂತರ ಮನಃಪರಿವರ್ತನೆ ಮಾಡಿಕೊಂಡು ಈ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಇವತ್ತಿಗೂ ಕೂಡ ರಾಮರಾಜ್ಯದ ಬಗ್ಗೆ ಮಾತನಾಡುತ್ತಿದ್ದೇವೆ ಎಂದರೇ ಇದಕ್ಕೆ ರಾಮಾಯಣ ಕಾರಣ ಎಂದರು.ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿ, ವಾಲ್ಮೀಕಿಯವರು ಕೇವಲ ರಾಮಾಯಣ ರಚಿಸಲಿಲ್ಲ. ಈ ಮಹಾಗ್ರಂಥದಲ್ಲಿ ಒಂದು ಪಾತ್ರವಾಗಿಯೂ ಇದ್ದಾರೆ. ತಮ್ಮ ಆವಾಸ ಸ್ಥಾನದಲ್ಲಿಯೇ ಸೀತೆಗೆ ಆಶ್ರಯ ನೀಡಿದ್ದಲ್ಲದೇ, ಅವರಿಬ್ಬರ ಮಕ್ಕಳಿಗೆ ಲವ-ಕುಶ ಎಂದು ನಾಮಕರಣ ಮಾಡಿದವರು ಎಂದರು.
ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ಮಾತನಾಡಿ, ವಾಲ್ಮೀಕಿ ಅವರ ರಾಮಾಯಮ ಆಧರಿಸಿ ಬರೆದ ಕೃತಿಗಳಿಗೆ ಕನ್ನಡ ಹಾಗೂ ತೆಲುಗಿನಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ಅಷ್ಟೊಂದು ಅದ್ಭುತವಾದ ಶಕ್ತಿ ಈ ಮಹಾಕಾವ್ಯಕ್ಕೆ ಇದೆ. ಇವತ್ತು ಕೂಡ ರಾಮಾಯಣ ಹಾಗೂ ಮಹಾಭಾರತ ದೇಶದ ಶ್ರೇಷ್ಠ ಗ್ರಂಥಗಳಾಗಿವೆ ಎಂದರು.
ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಕೆ.ಸಿ.ಮಹದೇಶ್ ಮಾತನಾಡಿ, ವಾಲ್ಮೀಕಿ ಜಯಂತಿ ಆಚರಣೆಯನ್ನು ಶಾಲಾ- ಕಾಲೇಜುಗಳಲ್ಲಿ ಕಡ್ಡಾಯ ಮಾಡಬೇಕು. ಆ ಮೂಲಕ ಬೇಟೆಗಾರನೊಬ್ಬ ಬದಲಾಗಿ ಎಂತಹ ಮಹಾಕಾವ್ಯವನ್ನು ರಚಿಸಿದ್ದಾರೆ ಎಂಬುದು ಇಂದಿನ ಯುವಪೀಳಿಗೆಗೆ ಗೊತ್ತಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದಾದರೂ ಕಡ್ಡಾಯವಾಗಿ ಜಯಂತಿ ಆಚರಿಸಿದ ನಂತರ ಶಾಲಾ- ಕಾಲೇಜುಗಳಿಗೆ ಬಿಡುವು ನೀಡುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸಾಮರಸ್ಯ, ಸೌಹಾರ್ದ, ಸಹಬಾಳ್ವೆಯನ್ನು ಸಾರುತ್ತವೆ. ಇದನ್ನು ಪಾಲಿಸಿದರೆ ಸಮಾಜಕ್ಕೆ ಒಳ್ಳೆಯದು ಎಂದರು.
ವೇದಿಕೆಯ ಅಧ್ಯಕ್ಷ ಆರ್. ವಾಸುದೇವ, ಉಪಾಧ್ಯಕ್ಷ ಭಾಸ್ಕರ್, ಸಹ ಕಾರ್ಯದರ್ಶಿ ಯೋಗೇಶ್, ಸಂಚಾಲಕ ವಿವೇಕ್, ಖಜಾಂಚಿ ಗಣೇಶ್, ನಿರ್ದೇಶಕರಾದ ಡಾ.ನವೀನ್ ಕುಮಾರ್, ಚಿದಾನಂದ, ಲೋಕೇಶ್, ಅಭಿಷೇಕ್, ರಿಷಿರಾಜ್, ಮಂಜುನಾಥ್, ಯೋಗೇಶ್, ಪ್ರಸಾದ್ ಮೊದಲಾದವರು ಇದ್ದರು. ವೇದಿಕೆಯ ಕಾರ್ಯದರ್ಶಿ ವಿನೋದ್ ವಂದಿಸಿದರು. ಸಂಶೋಧಕ ಕುಶಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಸಾಧಕರಿಗೆ ಸನ್ಮಾನ
ಸನ್ಮಾನಿತರ ಪರವಾಗಿ ಮಾತನಾಡಿದ ಡಾ.ರಾಮು, ಶಾಲಾ- ಕಾಲೇಜುಗಳ ಪಠ್ಯದಲ್ಲಿ ರಾಮಾಯಣ ಇರಬೇಕು. ಇದರಿಂದ ಮಕ್ಕಳ ಮನಸ್ಸಿನ ಮೇಲೆ ಅಗಾಧವಾದ ಪರಿಣಾಮವಾಗುತ್ತದೆ. ಮಕ್ಕಳು ಕೂಡ ಸಕಾರಾತ್ಮಕ ಆಲೋಚನೆಗಳ ಕಡೆ ಸಾಗುತ್ತಾರೆ ಎಂದರು.