ಗಣೇಶ್ ತಮ್ಮಡಿಹಳ್ಳಿ
ಕಳೆದ ಬಾರಿ ಮಳೆ ಕೊರತೆ ಕಾರಣ ವರ್ಷದ ಕೂಳು ಕಳೆದುಕೊಂಡು ಬರಗಾಲದ ಪರಿಸ್ಥಿತಿ ಎದುರಿಸಿದ್ದ ಮಲೆನಾಡಿನಲ್ಲಿ ಈ ಬಾರಿ ಸುರಿದ ಧಾರಕಾರ ಮಳೆಗೆ ಜಲಾಶಯಗಳು, ನದಿ, ಕರೆಗಳು ತುಂಬಿಕೊಂಡಿರುವುದು ಆಶಾಭಾವ ಮೂಡಿಸಿದೆ. ಆದರೆ, ಭಾರಿ ಮಳೆ ಪರಿಣಾಮ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿರುವುದು ಆತಂಕ ತಂದೊಡ್ಡಿದೆ.
ಕಳೆದ ಬಾರಿ ಮಳೆಯ ಕೊರತೆ ಕಾರಣ ಬರಿದಾಗಿದ್ದ ಜಲಾಶಯಗಳು ಈಗ ಮೈದುಂಬಿ ಹರಿಯುತ್ತಿವೆ. ಕೆರೆ-ಕಟ್ಟೆಗಳು ಕೋಡಿ ಬಿದ್ದಿವೆ. ಜಿಲ್ಲೆಯ ಬಹುತೇಕ ಕೆರೆ ಗಳಲ್ಲಿ ನೀರು ತುಂಬಿಕೊಂಡಿದೆ. ಅಲ್ಲದೇ ಇನ್ನೂ ಒಂದು ವಾರ ಕಾಲ ಜಿಲ್ಲೆಯಲ್ಲಿ ಮಳೆ ಸುರಿಯುವ ಮುನ್ಸೂಚನೆ ಇದೆ. ಒಂದು ವೇಳೆ ಮತ್ತೆ ಭಾರೀ ಮಳೆ ಸುರಿದರೂ ಸಾಕಷ್ಟು ಸಮಸ್ಯೆಯಾಗಲಿದೆ.ಈ ಬಾರಿ ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಗೆ ಈಗಾಗಲೇ 5447 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಭಾರಿ ಮಳೆ ಸುರಿದ ಪರಿಣಾಮ ಹಾನಿಯಾಗಿದೆ. ಕಳೆದ ಬಾರಿ ಮಳೆ ಕೈಕೊಟ್ಟು ಪರಿಣಾಮ ಬೆಳೆ ಬಾರದೆ ರೈತ ಸಂಕಷ್ಟಕ್ಕೆ ಒಳಗಾಗಿದ್ದ, ಈ ಬಾರಿ ಉತ್ತಮ ಮಳೆಯ ಕಾರಣ ಕೃಷಿಗೆ ಹೆಚ್ಚಿನ ಬಂಡವಾಳ ಹೂಡಿ ಬಿತ್ತನೆ ಮಾಡಿದ್ದ ಬೆಳೆ ನೆರೆಗೆ ಹಾನಿಯಾಗಿರುವುದರಿಂದ ರೈತರು ಮತ್ತೆ ಕಂಗಾಲಾಗಿದ್ದಾರೆ.
ಜಿಲ್ಲೆಯಲ್ಲಿ ಅತಿಹೆಚ್ಚು 3676 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಮೆಕ್ಕೆಜೋಳದ ಬೆಳೆ ನಷ್ಟವಾಗಿದೆ. ಇನ್ನೊಂದೆಡೆ 1770 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಬೆಳೆಗೆ ಹಾನಿಯಾಗಿದೆ.
ಇನ್ನು ಜಿಲ್ಲೆಯ ಪ್ರಮುಖ ಬೆಳೆಯಾಗಿರುವ ಭತ್ತ ಬೆಳೆಗೂ ಹಾನಿಯಾಗಿದೆ. ಜಿಲ್ಲಾದ್ಯಂತ 1770 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಬೆಳೆ ಹಾಳಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ಆಗಸ್ಟ್ ಅಂತ್ಯದವರೆಗೂ ನಾಟಿ ಕಾರ್ಯ ನಡೆಯುವುದರಿಂದ ಇನ್ನೂ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಆದರೆ, ಮೊದಲೇ ಬಿತ್ತನೆ ಮಾಡಿದ್ದ ಭತ್ತ ಬೆಳೆ ಜೋರು ಮಳೆಗೆ ಹಾನಿಗೊಳಗಾಗಿದೆ.
ಸದ್ಯಕ್ಕೆ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಮಳೆ ಸುರಿಯುವ ಮುನ್ಸೂಚನೆ ಇದೆ. ಆದರೆ, ಈಗಾಗಲೇ ಜಲಾಶಯಗಳು ಭರ್ತಿಯಾಗಿರುವುದು ರೈತರ ಪಾಲಿಗೆ ಆಶಾದಾಯಕವಾಗಿದ್ದರೂ ಜುಲೈನಲ್ಲೇ ಸುರಿದ ಮಳೆ ಆಗಸ್ಟ್ನಲ್ಲೂ ಸುರಿದರೆ ಇನ್ನಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ. ಮಳೆ ಬಿಡುವ ಕೊಟ್ಟರೆ ಮಾತ್ರ ಜಿಲ್ಲೆಯ ರೈತನಷ್ಟದಿಂದ ಪಾರಾಗಬಹುದು, ಇಲ್ಲವಾದಲ್ಲಿ ಅತಿವೃಷ್ಟಿಯ ಇನ್ನಷ್ಟು ಕರಾಳ ಅನುಭವ ಎದುರಿಸಬೇಕಾದೀತು!ತಾಲೂಕ ಬೆಳೆಹಾನಿ ಪ್ರಮಾಣ ಸೊರಬದಲ್ಲೇ ಹೆಚ್ಚು ಹಾನಿ!: