ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ

KannadaprabhaNewsNetwork |  
Published : Apr 23, 2024, 12:52 AM IST
ಲಚ್ಯಾಣ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ: ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು

ಕನ್ನಡಪ್ರಭ ವಾರ್ತೆ ಇಂಡಿ

ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು.

ಸೋಮವಾರ ತಾಲೂಕಿನ ಇಂಗಳಗಿ ಗ್ರಾಮದ ಅಲ್ಲಮಪ್ರಭು ಹಾಗೂ ಹನುಮ ಜಯಂತಿ ಮತ್ತು ಗೈಬೂಸಾಬ್ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು. ಧರ್ಮದಲ್ಲಿ ರಾಜಕೀಯ ಇರಬಾರದು, ಆದರೆ ರಾಜಕಾರಣದಲ್ಲಿ ಧರ್ಮವಿರಬೇಕು. ಅದನ್ನು ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ಇಂಗಳಗಿ ಗ್ರಾಮಸ್ಥರು ಸಾಮೂಹಿಕ ವಿವಾಹದ ಜೊತೆಗೆ ಜಾತಿ, ಮತ, ಪಂಥ ಎನ್ನದೆ ಹಿಂದು-ಮುಸ್ಲಿಂ ಎರಡು ದೇವತೆಗಳ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಸಂತಸ ತಂದಿದೆ. ನೂತನ ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು ಧರ್ಮದ ಹಾದಿಯಲ್ಲಿ ಸಂಸಾರ ನಡೆಸಿಕೊಂಡು ಹೋಗಬೇಕು. ಸಂಸಾರದಲ್ಲಿ ಬಿರುಕು ಮೂಡದಂತೆ ಜೀವನ ನಡೆಸಬೇಕೆಂದು ಕಿವಿಮಾತು ಹೇಳಿದರು.

ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗುವವರು ಭಾಗ್ಯಶಾಲಿಗಳು. ಒಂದೊಂದೇ ವಿವಾಹ ಮಾಡಿಕೊಂಡರೆ ಇಷ್ಟು ಜನಸಂಖ್ಯೆ ಸೇರಲು ಸಾಧ್ಯವಿಲ್ಲ. ಅಲ್ಲದೆ ಹತ್ತಾರು ಸ್ವಾಮೀಜಿಗಳ ಸಮ್ಮುಖದಲ್ಲಿ ಆಶೀರ್ವಾದ ಪಡೆದು ವಿವಾಹವಾದರೆ ಆ ದಾಂಪತ್ಯ ಜೀವನ ಉತ್ತಮವಾಗಿರಲಿದೆ. ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಧರ್ಮಕ್ಕೊಬ್ಬ, ದೇಶಕೊಬ್ಬ ನಮ್ಮನ್ನು ನೋಡಿಕೊಳ್ಳಲು ಒಬ್ಬ, ಸಾರ್ವಜನಿಕರ ಸೇವೆ ಮಾಡಲು ಒಬ್ಬ ಹೀಗೆ ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಎಂದು ಹರಸಿದರು.

ಆಳೂರ ಸಿದ್ದಾರೂಢ ಮಠದ ಶಂಕರಾನಂದ ಶ್ರೀಗಳು ಮಾತನಾಡಿ, ಇಂಗಳಗಿ ಗ್ರಾಮದಲ್ಲಿ ಭಾವೈಕ್ಯತೆಯ ಜಾತ್ರೆ ಆಚರಿಸುತ್ತಿರುವುದು ಸಂತಸ ತಂದಿದೆ. ಈ ನಾಡಿನಲ್ಲಿ ಇದೇ ಗ್ರಾಮದ ರೀತಿ ಭಾವೈಕ್ಯತೆಯಿಂದ ಜಾತ್ರೆ, ಹಬ್ಬಗಳನ್ನು ಆಚರಿಸಿದರೆ ದೇಶ ಸಮೃದ್ಧವಾಗಿರಲಿದೆ ಎಂದು ಅಭಿಪ್ರಾಯ ಪಟ್ಟರು.

ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಳಸಾರದ ಅಭಿನವ ಪುಂಡಲಿಂಗ ಮಾಹಾರಾಜರು, ಇಂಡಿ ಓಂಕಾರಶ್ರಮದ ಡಾ.ಸ್ವರೂಪಾನಂದ ಶ್ರೀಗಳು, ಖೇಡಗಿ ವಿರಕ್ತ ಮಠದ ಡಾ.ಶಿವ ಬಸವರಾಜೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.

ಈ ವೇಳೆ ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ, ಅಶೋಕ ಕುಲಕರ್ಣಿ, ದೇವೇಂದ್ರ ಕುಂಬಾರ, ಹಸನ್ ಮಣ್ಣೂರ, ಬಸವರಾಜ ಕಿತ್ತಲಿ, ಉಮೇಶ ಕುಲಕರ್ಣಿ, ಉಮೇಶ ಬಳಬಟ್ಟಿ, ಅರ್ಜುನ ಪೂಜಾರಿ, ನರಸಿವಂರಾವ ಕುಲಕರ್ಣಿ, ಅಶೋಕ ಬಳಬಟ್ಟಿ, ಯಲ್ಲಪ್ಪ ಸಾತಲಗಾಂವ, ಅರ್ಜುನ ಜಾಧವ, ಅಣ್ಣರಾಯ ಅಹಿರಸಂಗ, ಬಸವರಾಜ ಜಾಧವ, ಸುಭಾಷ ಥೋರಾತ, ಜಕ್ಕಪ್ಪ ಪೂಜಾರಿ, ಸಿದ್ದು ಹಂದ್ರಾಳ, ಮಾಹಾವಿರ ಪಾಟೀಲ, ಶಿವಾನಂದ ತಾವರಖೇಡ, ವಿಷ್ಣು ವಾಘಮೋರೆ, ಭೀಮರಾಯ ವಾಲೀಕಾರ ಸೇರಿದಂತೆ ಮತ್ತಿತರರು ಇದ್ದರು. ರಾಜಕುಮಾರ್ ಚಾಬುಕಸವಾರ ನಿರೂಪಿಸಿದರು. ಅಶೋಕ ಬಳಬಟ್ಟಿ ಸ್ವಾಗತಿಸಿ ವಂದಿಸಿದರು.ಕೋಟ್‌

ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಧರ್ಮಕ್ಕೊಬ್ಬ, ದೇಶಕೊಬ್ಬ ನಮ್ಮನ್ನು ನೋಡಿಕೊಳ್ಳಲು ಒಬ್ಬ, ಸಾರ್ವಜನಿಕರ ಸೇವೆ ಮಾಡಲು ಒಬ್ಬ ಹೀಗೆ ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಿ. ಸ್ವಾಮೀಜಿಗಳ ಸಮ್ಮುಖದಲ್ಲಿ ಆಶೀರ್ವಾದ ಪಡೆದು ವಿವಾಹವಾದರೆ ಆ ದಾಂಪತ್ಯ ಜೀವನ ಉತ್ತಮವಾಗಿರಲಿದೆ.

- ಅಭಿನವ ಮುರುಘೇಂದ್ರ ಶಿವಾಚಾರ್ಯರು,ಶಿರಶ್ಯಾಡ----------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ