ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!

KannadaprabhaNewsNetwork |  
Published : Mar 19, 2024, 12:46 AM IST
ಗೊರೂರು ಅಣೆಕಟ್ಟೆ | Kannada Prabha

ಸಾರಾಂಶ

ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ ಎಂದು ತಾಲೂಕು ರೈತಸಂಘ, ಪಟ್ಟಣದ ನಾಗರೀಕ ಹಿತರಕ್ಷಣಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಮಾತನಾಡಿದ ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರು ತಮ್ಮ ಪ್ರಭಾವ ಬಳಸಿ ತಮ್ಮ ಸ್ವಂತ ಜಿಲ್ಲೆಗೆ ನೀರನ್ನು ತೆಗೆದುಕೊಂಡು ಹೋಗುತ್ತಿದ್ದರೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಮಾತನಾಡದಿರುವುದು ಜಿಲ್ಲೆಯ ರೈತರ ಬಗ್ಗೆ ಅವರಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ತಾಲೂಕಿನ ಬಹುತೇಕ ಎಲ್ಲಾ ಕೆರೆಕಟ್ಟೆಗಳಲ್ಲಿ ನೀರು ಖಾಲಿಯಾಗಿದೆ. ಜನಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಕೊಳವೆ ಬಾವಿಗಳಿಗೆ ಅಂತರ್ಜಲದ ಪ್ರಮಾಣ ಕಡಿಮೆಯಾಗಿವೆ. ಹಲವು ನಿಂತುಹೋಗಿವೆ. ಬೆಳೆಗಳು ಒಣಗುತ್ತಿದೆ, ಸಾಲ ಮಾಡಿ ಬೆಳೆ ಮಾಡಿದ ರೈತನ ಕಷ್ಟವನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ಜಿಲ್ಲೆಯ ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದರೂ ಗೊರೂರು ಜಲಾಶಯದ ನೀರನ್ನು ಜಿಲ್ಲೆಗೆ ಹರಿಸುವ ಕೆಲಸ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾರಂಭಗಳಲ್ಲಿ ಭಾಷಣ ಮಾಡುವ ರಾಜಕಾರಣಿಗಳು ಒಮ್ಮೆ ಹಳ್ಳಿಗಳ ರೈತರ ಪರಿಸ್ಥಿತಿಯನ್ನು ಅವಲೋಕನ ಮಾಡಿ ವಾಸ್ಥವಾಂಶವನ್ನು ತಿಳಿದುಕೊಳ್ಳಬೇಕು. ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಲೋಕಸಭಾ ಚುನಾವಣೆಗಳ ಗುಂಗಿನಲ್ಲಿಯೇ ಕಾಲ ಕಳೆಯುತ್ತಾ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬೊಪ್ಪನಹಳ್ಳಿಬಸವೇಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರು ಕೂಡಲೇ ತನ್ನ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಸ್ಥಳೀಯ ರೈತರ ಹಿತ ಕಾಯುವ ಕೆಲಸ ಮಾಡಬೇಕಿದೆ ಎಂದು ಆಗ್ರಹಿಸಿದ್ದಾರೆ.

ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸಲು ಹೇಮಾವತಿ ನದಿ ಮೂಲಕ ನೀರು ಹರಿಸಬೇಕು. ಇಲ್ಲದಿದ್ದರೆ ರೈತರೊಂದಿಗೆ ಬೀದಿಗಿಳಿದು ನೀರಿಗಾಗಿ ಹೋರಾಟ ಮಾಡಲು ಸಿದ್ಧರಾಗುವಂತೆ ನಾಗರೀಕರಿಗೆ ಕರೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸಿ ಕೋರ್ಟಲ್ಲಿ ಕೇಸ್‌ ವಿಲೇವಾರಿ ಬಾಕಿ : ಕೃಷ್ಣ ಕಿಡಿ
ಬೇಸಿಗೆ ಆರಂಭದಲ್ಲೇ ಕೆರೆಗಳು ಅರ್ಧಖಾಲಿ - 2268 ಕೆರೆಗಳಲ್ಲಿ ಶೇ.50 ನೀರೂ ಇಲ್ಲ