ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಿನ 50 ವರ್ಷಕ್ಕೆ ಯೋಜನೆ ರೂಪಿಸುತ್ತಿದ್ದೇವೆ. ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿದೆ. ಇದರಿಂದ ನಗರದ ಇನ್ನಷ್ಟು ಭಾಗದ ಜನರಿಗೆ ಕುಡಿಯುವ ನೀರು ಸಿಗುವಂತಾಗಲಿದೆ ಎಂದರು.
ಹೆಬ್ಬಾಳದಿಂದ ರೇಷ್ಮೆ ಸಂಸ್ಥೆವರೆಗೆ 17 ಕಿ.ಮೀ. ಉದ್ದದ ಟನಲ್ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂರ್ನಾಲ್ಕು ವರ್ಷದಲ್ಲಿ ಯೋಜನೆ ಮುಗಿಯಲಿದೆ. ಟನಲ್ ರಸ್ತೆಯಲ್ಲಿ ದುಡ್ಡು ಕೊಟ್ಟು ಹೋಗುವವರು ಹೋಗುತ್ತಾರೆ. ಇದರಿಂದ ಜನರ ಸಮಯ ಉಳಿಯುತ್ತದೆ. ಹಿಡಿದ ಕೆಲಸವನ್ನು ಮಾಡಬೇಕು. ಜನರ ಸಮಯ ಉಳಿಸುವುದು ಮುಖ್ಯ ಎಂದು ಹೇಳಿದರು.ಬಿಡಿಎ ಅಧ್ಯಕ್ಷ, ಶಾಸಕ ಎನ್.ಎ.ಹ್ಯಾರೀಸ್ ಮಾತನಾಡಿ, ಇಂದು ಟನಲ್ ರಸ್ತೆಯ ಶಂಕುಸ್ಥಾಪನೆ ಮಾಡಲಾಗುತ್ತಿದೆ. 18 ತಿಂಗಳಲ್ಲಿ 2.3. ಕಿ.ಮೀ. ಉದ್ದದ ಸುರಂಗ ರಸ್ತೆ ಕಾಮಗಾರಿ ಮುಗಿಸುವ ಗುರಿ ಹೊಂದಲಾಗಿದೆ. ಇದರಿಂದ ಏರ್ಪೋರ್ಟ್ನಿಂದ ನಗರಕ್ಕೆ ಬರುವವರಿಗೆ, ಹೋಗುವವರಿಗೆ ತುಂಬಾ ಅನುಕೂಲವಾಗಲಿದೆ. ಋತ್ವಿಕ್-ಅಮ್ರಿಲ್ ಜೆವಿ ಎನ್ನುವಂತಹ ಕಂಪನಿಗೆ ಟೆಂಡರ್ ನೀಡಲಾಗಿದ್ದು, ಕಾರ್ಯಾದೇಶವನ್ನು ಕೂಡ ನೀಡಲಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ವಿಧಾನ ಪರಿಷತ್ತು ಸದಸ್ಯ ನಾಗರಾಜ್ ಯಾದವ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿಡಿಎ ಮುಖ್ಯ ಆಯುಕ್ತ ಮಣಿವಣ್ಣನ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ, 1.35 ಕೋಟಿ ವಾಹನಗಳಿವೆ. ಇಡೀ ಬೆಂಗಳೂರಿನಲ್ಲಿ ಕಸದ ಸಮಸ್ಯೆಯಿದೆ. ಅದನ್ನು ಬಗೆಹರಿಸುವ ಕೆಲಸವನ್ನು ಮಾಡಿದ್ದೆ. ನಾನು ಮುಖ್ಯಮಂತ್ರಿ ಆದ ತಕ್ಷಣ ವಿರೋಧ ಪಕ್ಷದ ನಾಯಕರು ₹10 ಸಾವಿರ ಕೋಟಿ ಲಂಚ ಹೊಡೆದಿದ್ದೇನೆ ಎಂದು ಆರೋಪ ಮಾಡಿದರು. ಇನ್ನೂ ಟೆಂಡರ್ ಆಗಿಲ್ಲ, ಯಾವುದೂ ತೀರ್ಮಾನ ಆಗಿಲ್ಲ. ಯಂತ್ರೋಪಕರಣಗಳಿಗೆ ₹4-5 ಸಾವಿರ ಕೋಟಿ ಆಗಬಹುದು. ಆದರೆ ₹10 ಸಾವಿರ ಕೋಟಿ ಎಂದು ಟೀಕೆ ಮಾಡಿದ್ದಾರೆ. ₹10 ಸಾವಿರ ಕೋಟಿ ಇಡಲು 20 ದೊಡ್ಡ ಶೆಡ್ಗಳು ಬೇಕಾಗಬಹುದೇನೋ ಎಂದು ಡಿಕೆಶಿ ಲೇವಡಿ ಮಾಡಿದರು.
ಸುರಂಗದ ಉದ್ದ ಸುಮಾರು 2.228 ಕಿ.ಮೀವಿನ್ಯಾಸ 6 ಲೇನ್ ದ್ವಿಮುಖ (3+3 ಲೇನ್)
ನಿರ್ಮಾಣ ವಿಧಾನ ಕಟ್ ಆ್ಯಂಡ್ ಕವರ್ ಸುರಂಗ, ಓಪನ್ ಕಟ್ ರ್ಯಾಂಪ್ಗಳುಟೆಂಡರ್ ನಿಗದಿತ ಮೊತ್ತ ₹1,086 ಕೋಟಿ
ನಿರ್ಮಾಣ ಅವಧಿ 18 ತಿಂಗಳು