ಕನ್ನಡಪ್ರಭ ವಾರ್ತೆ ಸಾಗರ
ಪಟ್ಟಣದ ಬೆಳಲಮಕ್ಕಿ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ಸಿರಿಧಾನ್ಯ ಮಾಲ್ಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ಹಾಲು, ಮೊಟ್ಟೆ, ಚಿಕ್ಕಿ ಜೊತೆಗೆ ಸಿರಿಧಾನ್ಯಗಳ ಮಾಲ್ಟ್ ನೀಡಲಾಗುತ್ತದೆ ಎಂದರು.
ಬೇಸಿಗೆ ಸಂದರ್ಭದಲ್ಲಿ ಮಕ್ಕಳ ಆರೋಗ್ಯ ಸಂರಕ್ಷಣೆಗೆ ಪೋಷಕರಿಗೆ ಸವಾಲು ಎನಿಸುತ್ತದೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಪೌಷ್ಠಿಕಾಂಶವುಳ್ಳ ಆಹಾರ ನೀಡುತ್ತಿದೆ. ರಾಜ್ಯ ಸರ್ಕಾರದ ಈ ಜನಪರವಾದ ಯೋಜನೆ ದೇಶದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.ಕ್ಷೇತ್ರವ್ಯಾಪ್ತಿಯಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಶಾಸಕರ ಮಾದರಿ ಶಾಲೆಯ ಅಭಿವೃದ್ಧಿಗೆ ಶಾಲಾಭಿವೃದ್ಧಿ ಸಮಿತಿ ನೀಡಿರುವ ಮನವಿಯನ್ನು ಪರಿಗಣಿಸ ಲಾಗಿದ್ದು, ಹೊಸ ಪೀಠೋಪಕರಣ, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳು ವಿದ್ಯಾಭ್ಯಾಸದ ಜೊತೆ ಕ್ರಿಯಾಶೀಲ ಚಟುವಟಿಕೆಗಳಲ್ಲೂ ತೊಡಗಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.