ಶ್ರೀರಾಮನ ವಿಗ್ರಹ ಕೆತ್ತಿದ ಶಿಲೆಯಲ್ಲೇ ಕೊಪ್ಪಳದಲ್ಲಿ ಆಂಜನೇಯನ ಮೂರ್ತಿ

KannadaprabhaNewsNetwork |  
Published : Jan 18, 2024, 02:00 AM IST
17ಕೆಪಿಎಲ್31 ಶ್ರೀರಾಮನ ಮೂರ್ತಿ ಕೆತ್ತಿದ ಶಿಲೆಯಲ್ಲಿ ಉಳಿದ ಕಲ್ಲಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಿರುವ ಪ್ರಕಾಶ ಶಿಲ್ಪಿ. | Kannada Prabha

ಸಾರಾಂಶ

ಪ್ರಕಾಶ ಶಿಲ್ಪಿ ಬೇರೊಂದು ಮೂರ್ತಿಯನ್ನು ನಿರ್ಮಾಣ ಮಾಡಲು ಗುರುತಿಸಿದ್ದ ಶಿಲೆಯನ್ನು ನಂತರ ಶ್ರೀರಾಮನ ಬಾಲಮೂರ್ತಿ ಮಾಡಲು ತೆಗೆದುಕೊಂಡು ಹೋಗಲಾಯಿತು. ಖ್ಯಾತ ಶಿಲ್ಪಿ ಮೈಸೂರಿನ ಅರುಣ ಯೋಗಿರಾಜ್ ಇದೇ ಶಿಲೆಯಲ್ಲಿ ಕೆತ್ತಿದ ಮೂರ್ತಿ ಈಗ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.

ಕೊಪ್ಪಳ: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸ್ಥಾಪನೆಯಾಗಲಿರುವ ಬಾಲರಾಮನನ್ನು ಕೆತ್ತಿದ ಶಿಲೆಯ ಉಳಿದ ಭಾಗದ ಶಿಲೆಯಲ್ಲಿ ಆಂಜನೇಯನ ಮೂರ್ತಿ ಸಿದ್ಧವಾಗಲಿದೆ. ಎಚ್.ಡಿ. ಕೋಟೆಯಲ್ಲಿ ಉಳಿದಿದ್ದ ಶಿಲೆಯನ್ನು ಶಿಲ್ಪಿ ಪ್ರಕಾಶ ಕೊಪ್ಪಳಕ್ಕೆ ತರಲು ಬುಧವಾರ ಎಚ್.ಡಿ. ಕೋಟೆ ತಾಲೂಕಿನ ಹಾರೋಹಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಕಾಶ ಶಿಲ್ಪಿ ಬೇರೊಂದು ಮೂರ್ತಿಯನ್ನು ನಿರ್ಮಾಣ ಮಾಡಲು ಗುರುತಿಸಿದ್ದ ಶಿಲೆಯನ್ನು ನಂತರ ಶ್ರೀರಾಮನ ಬಾಲಮೂರ್ತಿ ಮಾಡಲು ತೆಗೆದುಕೊಂಡು ಹೋಗಲಾಯಿತು. ಖ್ಯಾತ ಶಿಲ್ಪಿ ಮೈಸೂರಿನ ಅರುಣ ಯೋಗಿರಾಜ್ ಇದೇ ಶಿಲೆಯಲ್ಲಿ ಕೆತ್ತಿದ ಮೂರ್ತಿ ಈಗ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.ಹೀಗಾಗಿ, ಈ ಶಿಲೆಯಲ್ಲಿ ಉಳಿದಿರುವ ಭಾಗದಲ್ಲಿ ಆಂಜನೇಯನ ಮೂರ್ತಿಯನ್ನು ಮಾಡಲು ಕೊಪ್ಪಳದ ಪ್ರಕಾಶ ಶಿಲ್ಪಿ ತೀರ್ಮಾನ ಮಾಡಿ, ಶಿಲೆಯನ್ನು ಕೊಪ್ಪಳಕ್ಕೆ ತರುತ್ತಿದ್ದಾರೆ. ಬಾಲರಾಮನಷ್ಟೇ ಎತ್ತರ ಆಂಜನೇಯನ ಮೂರ್ತಿಯನ್ನು ಮಾಡುವುದಾಗಿ ಶಿಲ್ಪಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತೂಟ್ ಫಿನ್‌ಕಾರ್ಪ್‌ನ ವಡಗಾಂವ ಶಾಖೆಯಲ್ಲಿ ಮಹಿಳಾ ದಿನಾಚರಣೆ
‘ಥ್ಯಾಂಕ್ಸ್‌ ಅಪ್ಪ’ ಕಾದಂಬರಿ ಪ್ರತಿ ಮನೆಯಲ್ಲೂ ಇರಲಿ: ನ್ಯಾ.ಸಂತೋಷ್‌